Home / ಕವನ / ವಚನ / ಲಿಂಗಮ್ಮನ ವಚನಗಳು – ೪೦

ಲಿಂಗಮ್ಮನ ವಚನಗಳು – ೪೦

ಅಯ್ಯ ನಾ ಹುಟ್ಟುವಾಗ
ಬಟ್ಟಬಯಲೆ ಗಟ್ಟಿಯಾಯಿತ್ತು.
ಆ ಬಟ್ಟಬಯಲು ಗಟ್ಟಿಯಾದ
ಬಳಿಯಲ್ಲಿ ನಾ ಜನನವಾದೆ.
ಜನನವಾದವರಿಗೆ ಮರಣ ತಪ್ಪದು.
ಅದೇನು ಕಾರಣವೆಂದರೆ,
ಮರವೆಗೆ ಮುಂದು ಮಾಡಿತ್ತು.
ಕರ್ಮಕ್ಕೆ ಗುರಿ ಮಾಡಿತ್ತು.
ಕತ್ತಲೆಯಲ್ಲಿ ಮುಳುಗಿಸಿತ್ತು.
ಕಣ್ಣುಗಾಣದ ಅಂಧಕರಂತೆ,
ತಿರುಗುವದ ನೋಡಿ ನಾ ಹೆದರಿಕೊಂಡು,
ಎಚ್ಚತ್ತು ಚಿತ್ತವ ಸುಯಿಧಾನವ ಮಾಡಿ,
ನಿಶ್ಚಿಂತವಾಗಿ ನಿಜವ ನೆಮ್ಮಿ, ಅರುಹ ಕಂಡೆ.
ಅರುಹಿಂದ ಆಚಾರವ ಕಂಡೆ.
ಆಚಾರವಿಡಿದು ಗುರುವ ಕಂಡೆ.
ಗುರುವಿಡಿದು ಲಿಂಗವ ಕಂಡೆ.
ಲಿಂಗವಿಡಿದು ಜಂಗಮವ ಕಂಡೆ.
ಜಂಗಮವಿಡಿದು ಪಾದೋದಕ ಪ್ರಸಾದವ ಕಂಡೆ.
ಆ ಪಾದೋದಕ ಪ್ರಸಾದವಿಡಿದು ಮಹಾಶರಣ ಕಂಡೆ.
ಆ ಮಹಾ ಶರಣ ಪಾದವಿಡಿದು ಎನ್ನ ಕಾರಗುಣವಳಿಯಿತ್ತು.
ಕರಣ ಗುಣ ಸುಟ್ಟವು.
ಲಿಂಗಗುಣ ನಿಂದಿತ್ತು.
ಭಾವಬಯಲಾಯಿತ್ತು.  ಬಯಕೆ ಸವೆಯಿತ್ತು.
ಮಹಾದೇವನಾದ ಶರಣನ ಪಾದವಿಡಿದು ನಿಜಮುಕ್ತಳಾದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ