Home / ಲೇಖನ / ಇತರೆ / ಮನಸಿನಾಳವು ಮಿಗಿಲು

ಮನಸಿನಾಳವು ಮಿಗಿಲು

ಪ್ರಿಯ ಸಖಿ,

ಪ್ರಪಂಚದಲ್ಲೇ ಅತಿ ಶ್ರೇಷ್ಠ ಜೀವಿ ಮಾನವನೆನ್ನುತ್ತಾರೆ. ಏಕೆಂದರೆ ಅವನು ಚಿಂತಿಸಬಲ್ಲ, ಮಾತಾಡಬಲ್ಲ, ವಿವೇಚಿಸಬಲ್ಲ  ಎಲ್ಲಕ್ಕಿಂತಾ ಹೆಚ್ಚಾಗಿ ಎಲ್ಲವನ್ನೂ ಪ್ರೀತಿಸಬಲ್ಲ ಮನಸ್ಸೊಂದು ಅವನಲ್ಲಿದೆ. ಅದೇ ಅವನ ಹಿರಿಮೆಯನ್ನು ಹೆಚ್ಚಿಸಿದೆ. ಕವಿ ಕುವೆಂಪು ಅವರು ತಮ್ಮ ಒಂದು ಕವನದಲ್ಲಿ,

ಕಡಲಿನಾಳವು ಮಿಗಿಲುManasu
ಕಡಲಿಗಿಂತಲು ಮಿಗಿಲು
ಮನಸಿನಾಳ
ಬಾನಿನಗಲವು ಮಿಗಿಲು
ಬಾನಿಗಿಂತಲು ಮಿಗಿಲು
ಮನುಜನೆದೆಯು

ಎಂದಿದ್ದಾರೆ. ಕಡಲಿನ ಆಳವನ್ನು ಬಾನಿನ ಅಗಲವನ್ನು ಯಾರಿಂದಲೂ ಅಳೆಯಲಾಗಲಿಲ್ಲ. ಅದಕ್ಕಿಂತಾ ಆಳ ಹಾಗೂ ಅಗಲವಾದದ್ದು ಮಾನವನ ಮನಸ್ಸು ಎಂದಿದ್ದಾರೆ ಕವಿ. ನಿಜಕ್ಕೂ ಹೀಗಾದರೆ ಎಷ್ಟು ಚೆನ್ನ ಅಲ್ಲವೇ ಸಖೀ? ಈ ಮಟ್ಟಕ್ಕೆ ನಮ್ಮ ಮನಸ್ಸನ್ನು ನಾವು ಉಪಯೋಗಿಸಿಕೊಳ್ಳುತ್ತಿದ್ದೇವೆಯೇ? ಎಂದು ಒಂದು ಪ್ರಶ್ನೆ ಹಾಕಿಕೊಳ್ಳಲೇಬೇಕು. ನಮ್ಮ ಜನ್ಮವನ್ನು ವ್ಯರ್ಥವಾಗಿಸುತ್ತಿರುವುದನ್ನು ಕಂಡೇ ದಾಸರು “ಮನುಜ ಜನ್ಮ ದೊಡ್ಡದು ಅದ ಹಾನಿ ಮಾಡಬೇಡಿರೋ
ಹುಚ್ಚಪ್ಪಗಳಿರಾ” ಎಂದಿರುವುದು.

ಒಳಿತು-ಕೆಡಕುಗಳೆರಡೂ ವ್ಯಕ್ತಿಯೊಬ್ಬನಲ್ಲಿ ಸಮಪ್ರಮಾಣದಲ್ಲಿ ಮಿಳಿತವಾಗಿರುತ್ತದೆ. ಯಾವುದಕ್ಕೆ ನಾವು ಬದುಕಿನಲ್ಲಿ ಹೆಚ್ಚು ಪ್ರಾಶಸ್ತ್ಯ ನೀಡುತ್ತಾ ಹೋಗುತ್ತೇವೋ ಅದು ನಮ್ಮಲ್ಲಿ ಒಂದಾಗುತ್ತಾ ಹೋಗುತ್ತದೆ. ನಮ್ಮ ವ್ಯಕ್ತಿತ್ವವಾಗಿ, ಗುಣವಾಗಿ ನಾವು ಬೆಳೆದಂತೆಲ್ಲಾ ಬೆಳೆಯ ತೊಡಗುತ್ತದೆ. ನಾವು ಮನಃಪೂರ್ವಕವಾಗಿ ತಿರಸ್ಕರಿಸಿದ್ದು ನಮ್ಮಿಂದ ಕಳೆದುಹೋಗುತ್ತಾ ಬರುತ್ತದೆ. ಆದ್ದರಿಂದಲೇ ಇಲ್ಲಿ ಆಯ್ಕೆಗೆ ಹೆಚ್ಚಿನ ಮಹತ್ವವಿದೆ.

ಸಾಫೋಕ್ಲಿಸ್ ಹೀಗೆ ಹೇಳುತ್ತಾನೆ. “ಅದ್ಭುತಗಳು ಅನೇಕ. ಆದರೆ ಮನುಷ್ಯನನ್ನು ಮೀರಿದ ಅದ್ಭುತ ಇಲ್ಲ” ಎಂದು ವ್ಯಕ್ತಿಯೊಬ್ಬನಲ್ಲಿ ಎಷ್ಟೊಂದು ಅದ್ಭುತ ಶಕ್ತಿಗಳು ಇರಬಹುದು. ಅದನ್ನು ಕಂಡುಕೊಳ್ಳುವ ಜವಾಬ್ದಾರಿ ವ್ಯಕ್ತಿಯದೇ ಆಗಿರುತ್ತದೆ. ಅವನು ಮನಸ್ಸು ಮಾಡಿದರೆ ಯಾವುದನ್ನೂ ಸಾಧಿಸಬಲ್ಲ. ತನ್ನಲ್ಲಿರುವ ಒಳಿತನ್ನು, ಪ್ರೀತಿಯನ್ನು ಜಾಗೃತಗೊಳಿಸಿ ಕಡಲಿನ ಆಳಕಿಂತಲೂ ಮಿಗಿಲು, ಬಾನಿನಗಲಕ್ಕಿಂತಲೂ ಮಿಗಿಲಾದ ಮನಸ್ಸನ್ನು ಹೊಂದಿದರೆ ಸಾಮಾನ್ಯ ಮಾನವನೂ ವಿಶ್ವಮಾನವನಾಗುವುದರಲ್ಲಿ ಸಂದೇಹವೇ ಇಲ್ಲ. ನೀನೇನೆನ್ನುತ್ತೀ ಸಖೀ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್ ಎನ್ ಎಸ್ ರಾವ್