Home / ಲೇಖನ / ಇತರೆ / ಮನಸಿನಾಳವು ಮಿಗಿಲು

ಮನಸಿನಾಳವು ಮಿಗಿಲು

ಪ್ರಿಯ ಸಖಿ,

ಪ್ರಪಂಚದಲ್ಲೇ ಅತಿ ಶ್ರೇಷ್ಠ ಜೀವಿ ಮಾನವನೆನ್ನುತ್ತಾರೆ. ಏಕೆಂದರೆ ಅವನು ಚಿಂತಿಸಬಲ್ಲ, ಮಾತಾಡಬಲ್ಲ, ವಿವೇಚಿಸಬಲ್ಲ  ಎಲ್ಲಕ್ಕಿಂತಾ ಹೆಚ್ಚಾಗಿ ಎಲ್ಲವನ್ನೂ ಪ್ರೀತಿಸಬಲ್ಲ ಮನಸ್ಸೊಂದು ಅವನಲ್ಲಿದೆ. ಅದೇ ಅವನ ಹಿರಿಮೆಯನ್ನು ಹೆಚ್ಚಿಸಿದೆ. ಕವಿ ಕುವೆಂಪು ಅವರು ತಮ್ಮ ಒಂದು ಕವನದಲ್ಲಿ,

ಕಡಲಿನಾಳವು ಮಿಗಿಲುManasu
ಕಡಲಿಗಿಂತಲು ಮಿಗಿಲು
ಮನಸಿನಾಳ
ಬಾನಿನಗಲವು ಮಿಗಿಲು
ಬಾನಿಗಿಂತಲು ಮಿಗಿಲು
ಮನುಜನೆದೆಯು

ಎಂದಿದ್ದಾರೆ. ಕಡಲಿನ ಆಳವನ್ನು ಬಾನಿನ ಅಗಲವನ್ನು ಯಾರಿಂದಲೂ ಅಳೆಯಲಾಗಲಿಲ್ಲ. ಅದಕ್ಕಿಂತಾ ಆಳ ಹಾಗೂ ಅಗಲವಾದದ್ದು ಮಾನವನ ಮನಸ್ಸು ಎಂದಿದ್ದಾರೆ ಕವಿ. ನಿಜಕ್ಕೂ ಹೀಗಾದರೆ ಎಷ್ಟು ಚೆನ್ನ ಅಲ್ಲವೇ ಸಖೀ? ಈ ಮಟ್ಟಕ್ಕೆ ನಮ್ಮ ಮನಸ್ಸನ್ನು ನಾವು ಉಪಯೋಗಿಸಿಕೊಳ್ಳುತ್ತಿದ್ದೇವೆಯೇ? ಎಂದು ಒಂದು ಪ್ರಶ್ನೆ ಹಾಕಿಕೊಳ್ಳಲೇಬೇಕು. ನಮ್ಮ ಜನ್ಮವನ್ನು ವ್ಯರ್ಥವಾಗಿಸುತ್ತಿರುವುದನ್ನು ಕಂಡೇ ದಾಸರು “ಮನುಜ ಜನ್ಮ ದೊಡ್ಡದು ಅದ ಹಾನಿ ಮಾಡಬೇಡಿರೋ
ಹುಚ್ಚಪ್ಪಗಳಿರಾ” ಎಂದಿರುವುದು.

ಒಳಿತು-ಕೆಡಕುಗಳೆರಡೂ ವ್ಯಕ್ತಿಯೊಬ್ಬನಲ್ಲಿ ಸಮಪ್ರಮಾಣದಲ್ಲಿ ಮಿಳಿತವಾಗಿರುತ್ತದೆ. ಯಾವುದಕ್ಕೆ ನಾವು ಬದುಕಿನಲ್ಲಿ ಹೆಚ್ಚು ಪ್ರಾಶಸ್ತ್ಯ ನೀಡುತ್ತಾ ಹೋಗುತ್ತೇವೋ ಅದು ನಮ್ಮಲ್ಲಿ ಒಂದಾಗುತ್ತಾ ಹೋಗುತ್ತದೆ. ನಮ್ಮ ವ್ಯಕ್ತಿತ್ವವಾಗಿ, ಗುಣವಾಗಿ ನಾವು ಬೆಳೆದಂತೆಲ್ಲಾ ಬೆಳೆಯ ತೊಡಗುತ್ತದೆ. ನಾವು ಮನಃಪೂರ್ವಕವಾಗಿ ತಿರಸ್ಕರಿಸಿದ್ದು ನಮ್ಮಿಂದ ಕಳೆದುಹೋಗುತ್ತಾ ಬರುತ್ತದೆ. ಆದ್ದರಿಂದಲೇ ಇಲ್ಲಿ ಆಯ್ಕೆಗೆ ಹೆಚ್ಚಿನ ಮಹತ್ವವಿದೆ.

ಸಾಫೋಕ್ಲಿಸ್ ಹೀಗೆ ಹೇಳುತ್ತಾನೆ. “ಅದ್ಭುತಗಳು ಅನೇಕ. ಆದರೆ ಮನುಷ್ಯನನ್ನು ಮೀರಿದ ಅದ್ಭುತ ಇಲ್ಲ” ಎಂದು ವ್ಯಕ್ತಿಯೊಬ್ಬನಲ್ಲಿ ಎಷ್ಟೊಂದು ಅದ್ಭುತ ಶಕ್ತಿಗಳು ಇರಬಹುದು. ಅದನ್ನು ಕಂಡುಕೊಳ್ಳುವ ಜವಾಬ್ದಾರಿ ವ್ಯಕ್ತಿಯದೇ ಆಗಿರುತ್ತದೆ. ಅವನು ಮನಸ್ಸು ಮಾಡಿದರೆ ಯಾವುದನ್ನೂ ಸಾಧಿಸಬಲ್ಲ. ತನ್ನಲ್ಲಿರುವ ಒಳಿತನ್ನು, ಪ್ರೀತಿಯನ್ನು ಜಾಗೃತಗೊಳಿಸಿ ಕಡಲಿನ ಆಳಕಿಂತಲೂ ಮಿಗಿಲು, ಬಾನಿನಗಲಕ್ಕಿಂತಲೂ ಮಿಗಿಲಾದ ಮನಸ್ಸನ್ನು ಹೊಂದಿದರೆ ಸಾಮಾನ್ಯ ಮಾನವನೂ ವಿಶ್ವಮಾನವನಾಗುವುದರಲ್ಲಿ ಸಂದೇಹವೇ ಇಲ್ಲ. ನೀನೇನೆನ್ನುತ್ತೀ ಸಖೀ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...