Home / ಲೇಖನ / ಇತರೆ / ಮನಸಿನಾಳವು ಮಿಗಿಲು

ಮನಸಿನಾಳವು ಮಿಗಿಲು

ಪ್ರಿಯ ಸಖಿ,

ಪ್ರಪಂಚದಲ್ಲೇ ಅತಿ ಶ್ರೇಷ್ಠ ಜೀವಿ ಮಾನವನೆನ್ನುತ್ತಾರೆ. ಏಕೆಂದರೆ ಅವನು ಚಿಂತಿಸಬಲ್ಲ, ಮಾತಾಡಬಲ್ಲ, ವಿವೇಚಿಸಬಲ್ಲ  ಎಲ್ಲಕ್ಕಿಂತಾ ಹೆಚ್ಚಾಗಿ ಎಲ್ಲವನ್ನೂ ಪ್ರೀತಿಸಬಲ್ಲ ಮನಸ್ಸೊಂದು ಅವನಲ್ಲಿದೆ. ಅದೇ ಅವನ ಹಿರಿಮೆಯನ್ನು ಹೆಚ್ಚಿಸಿದೆ. ಕವಿ ಕುವೆಂಪು ಅವರು ತಮ್ಮ ಒಂದು ಕವನದಲ್ಲಿ,

ಕಡಲಿನಾಳವು ಮಿಗಿಲುManasu
ಕಡಲಿಗಿಂತಲು ಮಿಗಿಲು
ಮನಸಿನಾಳ
ಬಾನಿನಗಲವು ಮಿಗಿಲು
ಬಾನಿಗಿಂತಲು ಮಿಗಿಲು
ಮನುಜನೆದೆಯು

ಎಂದಿದ್ದಾರೆ. ಕಡಲಿನ ಆಳವನ್ನು ಬಾನಿನ ಅಗಲವನ್ನು ಯಾರಿಂದಲೂ ಅಳೆಯಲಾಗಲಿಲ್ಲ. ಅದಕ್ಕಿಂತಾ ಆಳ ಹಾಗೂ ಅಗಲವಾದದ್ದು ಮಾನವನ ಮನಸ್ಸು ಎಂದಿದ್ದಾರೆ ಕವಿ. ನಿಜಕ್ಕೂ ಹೀಗಾದರೆ ಎಷ್ಟು ಚೆನ್ನ ಅಲ್ಲವೇ ಸಖೀ? ಈ ಮಟ್ಟಕ್ಕೆ ನಮ್ಮ ಮನಸ್ಸನ್ನು ನಾವು ಉಪಯೋಗಿಸಿಕೊಳ್ಳುತ್ತಿದ್ದೇವೆಯೇ? ಎಂದು ಒಂದು ಪ್ರಶ್ನೆ ಹಾಕಿಕೊಳ್ಳಲೇಬೇಕು. ನಮ್ಮ ಜನ್ಮವನ್ನು ವ್ಯರ್ಥವಾಗಿಸುತ್ತಿರುವುದನ್ನು ಕಂಡೇ ದಾಸರು “ಮನುಜ ಜನ್ಮ ದೊಡ್ಡದು ಅದ ಹಾನಿ ಮಾಡಬೇಡಿರೋ
ಹುಚ್ಚಪ್ಪಗಳಿರಾ” ಎಂದಿರುವುದು.

ಒಳಿತು-ಕೆಡಕುಗಳೆರಡೂ ವ್ಯಕ್ತಿಯೊಬ್ಬನಲ್ಲಿ ಸಮಪ್ರಮಾಣದಲ್ಲಿ ಮಿಳಿತವಾಗಿರುತ್ತದೆ. ಯಾವುದಕ್ಕೆ ನಾವು ಬದುಕಿನಲ್ಲಿ ಹೆಚ್ಚು ಪ್ರಾಶಸ್ತ್ಯ ನೀಡುತ್ತಾ ಹೋಗುತ್ತೇವೋ ಅದು ನಮ್ಮಲ್ಲಿ ಒಂದಾಗುತ್ತಾ ಹೋಗುತ್ತದೆ. ನಮ್ಮ ವ್ಯಕ್ತಿತ್ವವಾಗಿ, ಗುಣವಾಗಿ ನಾವು ಬೆಳೆದಂತೆಲ್ಲಾ ಬೆಳೆಯ ತೊಡಗುತ್ತದೆ. ನಾವು ಮನಃಪೂರ್ವಕವಾಗಿ ತಿರಸ್ಕರಿಸಿದ್ದು ನಮ್ಮಿಂದ ಕಳೆದುಹೋಗುತ್ತಾ ಬರುತ್ತದೆ. ಆದ್ದರಿಂದಲೇ ಇಲ್ಲಿ ಆಯ್ಕೆಗೆ ಹೆಚ್ಚಿನ ಮಹತ್ವವಿದೆ.

ಸಾಫೋಕ್ಲಿಸ್ ಹೀಗೆ ಹೇಳುತ್ತಾನೆ. “ಅದ್ಭುತಗಳು ಅನೇಕ. ಆದರೆ ಮನುಷ್ಯನನ್ನು ಮೀರಿದ ಅದ್ಭುತ ಇಲ್ಲ” ಎಂದು ವ್ಯಕ್ತಿಯೊಬ್ಬನಲ್ಲಿ ಎಷ್ಟೊಂದು ಅದ್ಭುತ ಶಕ್ತಿಗಳು ಇರಬಹುದು. ಅದನ್ನು ಕಂಡುಕೊಳ್ಳುವ ಜವಾಬ್ದಾರಿ ವ್ಯಕ್ತಿಯದೇ ಆಗಿರುತ್ತದೆ. ಅವನು ಮನಸ್ಸು ಮಾಡಿದರೆ ಯಾವುದನ್ನೂ ಸಾಧಿಸಬಲ್ಲ. ತನ್ನಲ್ಲಿರುವ ಒಳಿತನ್ನು, ಪ್ರೀತಿಯನ್ನು ಜಾಗೃತಗೊಳಿಸಿ ಕಡಲಿನ ಆಳಕಿಂತಲೂ ಮಿಗಿಲು, ಬಾನಿನಗಲಕ್ಕಿಂತಲೂ ಮಿಗಿಲಾದ ಮನಸ್ಸನ್ನು ಹೊಂದಿದರೆ ಸಾಮಾನ್ಯ ಮಾನವನೂ ವಿಶ್ವಮಾನವನಾಗುವುದರಲ್ಲಿ ಸಂದೇಹವೇ ಇಲ್ಲ. ನೀನೇನೆನ್ನುತ್ತೀ ಸಖೀ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...