Home / ಲೇಖನ / ವಿಜ್ಞಾನ / ಮಾಲಿನ್ಯ ರಹಿತ ಹೊಗೆಯುಗಳದ ರಿಕ್ಷಾಗಳು

ಮಾಲಿನ್ಯ ರಹಿತ ಹೊಗೆಯುಗಳದ ರಿಕ್ಷಾಗಳು

ಪೆಟ್ರೋಲ್ ಬಳೆಸುವ ದ್ವಿಚಕ್ರವಾಹನಗಳು ಅದರಲ್ಲೂ ಎರಡು ಸ್ಟ್ರೋಕ್‌ಗಳ ಯಂತ್ರಗಳು ಅತಿ ಹೆಚ್ಚು ಹೈಡ್ರೋ ಇಂಗಾಲದ ಮಲೀನ ಹೊಗೆಯನ್ನು ಹೊರಗೆಡವುತ್ತವೆ. ಇದರಿಂದ ಜೀವಕುಲದ ಉಸಿರಾಟಕ್ಕೆ ತೊಂದರೆ ಎಂಬ ಸತ್ಯ ಎಲ್ಲರಿಗೂ ಗೊತ್ತು. ಅದರಲ್ಲೂ ಕೆಲವರು ಪೆಟ್ರೋಲ್‌ನಲ್ಲಿ ಡೀಸೆಲ್ ಎಣ್ಣೆಯನ್ನು ಬೆರೆಯಿಸಿದಾಗ ಶಬ್ದವೂ ಕೂಡ ಕರ್ಕಶವಾಗುವುದಲ್ಲದೇ ಇನ್ನಷ್ಟು ಮಲೀನಯುಕ್ತ ವಾಯುಮಾಲಿನ್ಯವಾಗುತ್ತದೆ.

ಈ ವಾಯುಮಾಲಿನ್ಯವನ್ನು ಕಡಿಮೆಗೊಳಿಸಲು “ಜಿ ಮತ್ತು ಟಿ ಯುಗೋಟೆಕ್” ಎಂಬ ಕಂಪನಿಯೊಂದು ಒಂದು ಉಪಕರಣವೊಂದನ್ನು ತಯಾರಿಸಿದೆ. ಇದನ್ನು ಬಿಡಿಭಾಗದಂತೆ ರಿಕ್ಷಾಗಳಿಗೆ ಜೋಡಿಸಬಹುದು. ಇದು ಪೆಟ್ರೋಲನ್ನು ಪ್ರೊಪೇನ್ ಆಗಿ ಪರಿವರ್ತಿಸುತ್ತದೆ. ಪ್ರತಿಭಾಗದಲ್ಲಿ ೧೨ ಲೀಟರ್ ಸಾಮರ್ಥ್ಯದ ಟ್ಯಾಂಕ್ ಮತ್ತು ಮೈಕ್ರೋ ಪ್ರೊಸೆಸಲ್ ನಿಯಂತ್ರಣವಿರುತ್ತದೆ. ಇದು ವಾಹನ ಬಳಸುವ ಪೆಟ್ರೋಲನ್ನು ನಿಯಂತ್ರಿಸುತ್ತದೆ. ದೇಶದಲ್ಲಿ ಇದರ ಪ್ರಯೋಗ ಈಗಾಗಲೇ ನಡೆದಿದೆ. ಜಗತ್ತಿನಲ್ಲಿ ಇದೊಂದು ಪ್ರಥಮ ಪ್ರಯೋಗವೆಂದು ಹೇಳಲಾಗುತ್ತದೆ. ಜಿ ಮತ್ತು ಟಿ ಯುಗೋಟೆಕ್ ಕಂಪನಿಯ ನಿರ್ವಾಹಕ ನಿರ್ದೇಶಕರಾದ ರಾಜೀವ ಸವಾರಾ ಅವರ ಪ್ರಕಾರ ಪ್ರೋಪೇನ್ನಿಂದ ಚಲಿಸುವ ರಿಕ್ಷಾಗಳು ಹೈಡ್ರೋಕಾರ್ಬನ್, ಕಾರ್ಬನ್ ಮೊನಾಕ್ಸೈಡ್ ಮತ್ತು ನೈಟ್ರೋಜನ್ ಆಕ್ಸೈಡ್‌ಗಳಂತಹ ವಿಷಾನಿಲಗಳ ಕ್ಷಮತೆಯೇನೂ ಕಡಿಮೆಯಾಗಲಾರದು. ಬದಲಾಗಿ ಸುರಕ್ಷೆಗೂಳ್ಳುತ್ತದೆ. ಪ್ರೋಪೇನನ್ನು ಬದಲಿ ಇಂಧನವಾಗಿ ಭಾರತದಲ್ಲಿ ನಿಷೇಧಿಸಲಾಗಿದೆ. ಏಕೆಂದರೆ ಅದು ವಿರಳವಾಗಿ ದೊರೆಯುವ ರಾಸಾಯನಿಕ ವಸ್ತು, ಆದರೆ ಜಿ ಮತ್ತು ಟಿ ಕಂಪನಿಯು ಪ್ರಾಯೋಗಿಕವಾಗಿ ದೆಹಲಿಯಲ್ಲಿ ಈ ಉಪಕರಣವನ್ನು ಬಳಸಲು ನ್ಯಾಯಾಲಯದ ಅನುಮತಿ ಪಡೆದಿದೆ.

ಸ್ಥಳೀಯ ಸರಕಾರಕ್ಕೆ ಈ ಪ್ರಯೋಗದ ಫಲಿತಾಂಶಗಳನ್ನು ಮೇಲ್ವಿಚಾರಣೆ ಮಾಡಲೂ ಕೋರ್ಟ್ ಆದೇಶಿಸಿದೆ. ಪ್ರತಿ ರಿಕ್ಷಾಗೆ ಪ್ರೊಪೇನ್ ಟ್ಯಾಂಕ್ ಜೋಡಿಸಲು ೧೨,೦೦೦ ರೂಪಾಯಿಗಳಷ್ಟು ಖರ್ಚಾಗುತ್ತದೆ. ಈ ಪ್ರಯೋಗವು ಯಶಸ್ವಿಯಾದರೆ ಸರಕಾರವೇ ಪ್ರೋಪೇನ್ ಪರಿವರ್ತನೆಯ ಯಂತ್ರಗಳನ್ನು ಕೊಂಡುಕೊಂಡು ರಿಕ್ಷಾ ಮಾಲೀಕರಿಗೆ ಸರಬರಾಜು ಮಾಡುವ ಯೋಜನೆ ಇದೆ. ಇದಕ್ಕೆ ತಗಲುವ ಅಧಿಕ ಖರ್ಚನ್ನು ಹೆಚ್ಚಿನ ಪ್ರಮಾಣದ ಇಂಧನಕರದಿಂದ ಪಡೆಯಲಾಗುವುದು. ಪೆಟ್ರೋಲಿಗಿಂತ ಪ್ರೊಫೇನ್ ಸುಮಾರು ಅರ್ಧದಷ್ಟು ಅಗ್ಗವಾಗಿರುವುದರಿಂದ ಇದನ್ನು ಮುಂದೊಂದು ದಿನ ಎಲ್ಲ ಕಡೆ ಲಾಭದಾಯಕವಾಗಿ ಬಳಸಬಹುದು. ಇಂತಹ ರಿಕ್ಷಾಗಳು ಎಲ್ಲೆಡೆ ಚಲಾವಣೆಗೊಂಡರೆ ಒಂದಿಷ್ಟು ಪರಿಸರಕ್ಕೆ ಒಳ್ಳೆಯದಾಗಬಹುದೇನೋ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...