Home / ಲೇಖನ / ವಿಜ್ಞಾನ / ಮಾಲಿನ್ಯ ರಹಿತ ಹೊಗೆಯುಗಳದ ರಿಕ್ಷಾಗಳು

ಮಾಲಿನ್ಯ ರಹಿತ ಹೊಗೆಯುಗಳದ ರಿಕ್ಷಾಗಳು

ಪೆಟ್ರೋಲ್ ಬಳೆಸುವ ದ್ವಿಚಕ್ರವಾಹನಗಳು ಅದರಲ್ಲೂ ಎರಡು ಸ್ಟ್ರೋಕ್‌ಗಳ ಯಂತ್ರಗಳು ಅತಿ ಹೆಚ್ಚು ಹೈಡ್ರೋ ಇಂಗಾಲದ ಮಲೀನ ಹೊಗೆಯನ್ನು ಹೊರಗೆಡವುತ್ತವೆ. ಇದರಿಂದ ಜೀವಕುಲದ ಉಸಿರಾಟಕ್ಕೆ ತೊಂದರೆ ಎಂಬ ಸತ್ಯ ಎಲ್ಲರಿಗೂ ಗೊತ್ತು. ಅದರಲ್ಲೂ ಕೆಲವರು ಪೆಟ್ರೋಲ್‌ನಲ್ಲಿ ಡೀಸೆಲ್ ಎಣ್ಣೆಯನ್ನು ಬೆರೆಯಿಸಿದಾಗ ಶಬ್ದವೂ ಕೂಡ ಕರ್ಕಶವಾಗುವುದಲ್ಲದೇ ಇನ್ನಷ್ಟು ಮಲೀನಯುಕ್ತ ವಾಯುಮಾಲಿನ್ಯವಾಗುತ್ತದೆ.

ಈ ವಾಯುಮಾಲಿನ್ಯವನ್ನು ಕಡಿಮೆಗೊಳಿಸಲು “ಜಿ ಮತ್ತು ಟಿ ಯುಗೋಟೆಕ್” ಎಂಬ ಕಂಪನಿಯೊಂದು ಒಂದು ಉಪಕರಣವೊಂದನ್ನು ತಯಾರಿಸಿದೆ. ಇದನ್ನು ಬಿಡಿಭಾಗದಂತೆ ರಿಕ್ಷಾಗಳಿಗೆ ಜೋಡಿಸಬಹುದು. ಇದು ಪೆಟ್ರೋಲನ್ನು ಪ್ರೊಪೇನ್ ಆಗಿ ಪರಿವರ್ತಿಸುತ್ತದೆ. ಪ್ರತಿಭಾಗದಲ್ಲಿ ೧೨ ಲೀಟರ್ ಸಾಮರ್ಥ್ಯದ ಟ್ಯಾಂಕ್ ಮತ್ತು ಮೈಕ್ರೋ ಪ್ರೊಸೆಸಲ್ ನಿಯಂತ್ರಣವಿರುತ್ತದೆ. ಇದು ವಾಹನ ಬಳಸುವ ಪೆಟ್ರೋಲನ್ನು ನಿಯಂತ್ರಿಸುತ್ತದೆ. ದೇಶದಲ್ಲಿ ಇದರ ಪ್ರಯೋಗ ಈಗಾಗಲೇ ನಡೆದಿದೆ. ಜಗತ್ತಿನಲ್ಲಿ ಇದೊಂದು ಪ್ರಥಮ ಪ್ರಯೋಗವೆಂದು ಹೇಳಲಾಗುತ್ತದೆ. ಜಿ ಮತ್ತು ಟಿ ಯುಗೋಟೆಕ್ ಕಂಪನಿಯ ನಿರ್ವಾಹಕ ನಿರ್ದೇಶಕರಾದ ರಾಜೀವ ಸವಾರಾ ಅವರ ಪ್ರಕಾರ ಪ್ರೋಪೇನ್ನಿಂದ ಚಲಿಸುವ ರಿಕ್ಷಾಗಳು ಹೈಡ್ರೋಕಾರ್ಬನ್, ಕಾರ್ಬನ್ ಮೊನಾಕ್ಸೈಡ್ ಮತ್ತು ನೈಟ್ರೋಜನ್ ಆಕ್ಸೈಡ್‌ಗಳಂತಹ ವಿಷಾನಿಲಗಳ ಕ್ಷಮತೆಯೇನೂ ಕಡಿಮೆಯಾಗಲಾರದು. ಬದಲಾಗಿ ಸುರಕ್ಷೆಗೂಳ್ಳುತ್ತದೆ. ಪ್ರೋಪೇನನ್ನು ಬದಲಿ ಇಂಧನವಾಗಿ ಭಾರತದಲ್ಲಿ ನಿಷೇಧಿಸಲಾಗಿದೆ. ಏಕೆಂದರೆ ಅದು ವಿರಳವಾಗಿ ದೊರೆಯುವ ರಾಸಾಯನಿಕ ವಸ್ತು, ಆದರೆ ಜಿ ಮತ್ತು ಟಿ ಕಂಪನಿಯು ಪ್ರಾಯೋಗಿಕವಾಗಿ ದೆಹಲಿಯಲ್ಲಿ ಈ ಉಪಕರಣವನ್ನು ಬಳಸಲು ನ್ಯಾಯಾಲಯದ ಅನುಮತಿ ಪಡೆದಿದೆ.

ಸ್ಥಳೀಯ ಸರಕಾರಕ್ಕೆ ಈ ಪ್ರಯೋಗದ ಫಲಿತಾಂಶಗಳನ್ನು ಮೇಲ್ವಿಚಾರಣೆ ಮಾಡಲೂ ಕೋರ್ಟ್ ಆದೇಶಿಸಿದೆ. ಪ್ರತಿ ರಿಕ್ಷಾಗೆ ಪ್ರೊಪೇನ್ ಟ್ಯಾಂಕ್ ಜೋಡಿಸಲು ೧೨,೦೦೦ ರೂಪಾಯಿಗಳಷ್ಟು ಖರ್ಚಾಗುತ್ತದೆ. ಈ ಪ್ರಯೋಗವು ಯಶಸ್ವಿಯಾದರೆ ಸರಕಾರವೇ ಪ್ರೋಪೇನ್ ಪರಿವರ್ತನೆಯ ಯಂತ್ರಗಳನ್ನು ಕೊಂಡುಕೊಂಡು ರಿಕ್ಷಾ ಮಾಲೀಕರಿಗೆ ಸರಬರಾಜು ಮಾಡುವ ಯೋಜನೆ ಇದೆ. ಇದಕ್ಕೆ ತಗಲುವ ಅಧಿಕ ಖರ್ಚನ್ನು ಹೆಚ್ಚಿನ ಪ್ರಮಾಣದ ಇಂಧನಕರದಿಂದ ಪಡೆಯಲಾಗುವುದು. ಪೆಟ್ರೋಲಿಗಿಂತ ಪ್ರೊಫೇನ್ ಸುಮಾರು ಅರ್ಧದಷ್ಟು ಅಗ್ಗವಾಗಿರುವುದರಿಂದ ಇದನ್ನು ಮುಂದೊಂದು ದಿನ ಎಲ್ಲ ಕಡೆ ಲಾಭದಾಯಕವಾಗಿ ಬಳಸಬಹುದು. ಇಂತಹ ರಿಕ್ಷಾಗಳು ಎಲ್ಲೆಡೆ ಚಲಾವಣೆಗೊಂಡರೆ ಒಂದಿಷ್ಟು ಪರಿಸರಕ್ಕೆ ಒಳ್ಳೆಯದಾಗಬಹುದೇನೋ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...