Home / ಲೇಖನ / ವಿಜ್ಞಾನ / ಮಾಲಿನ್ಯ ರಹಿತ ಹೊಗೆಯುಗಳದ ರಿಕ್ಷಾಗಳು

ಮಾಲಿನ್ಯ ರಹಿತ ಹೊಗೆಯುಗಳದ ರಿಕ್ಷಾಗಳು

ಪೆಟ್ರೋಲ್ ಬಳೆಸುವ ದ್ವಿಚಕ್ರವಾಹನಗಳು ಅದರಲ್ಲೂ ಎರಡು ಸ್ಟ್ರೋಕ್‌ಗಳ ಯಂತ್ರಗಳು ಅತಿ ಹೆಚ್ಚು ಹೈಡ್ರೋ ಇಂಗಾಲದ ಮಲೀನ ಹೊಗೆಯನ್ನು ಹೊರಗೆಡವುತ್ತವೆ. ಇದರಿಂದ ಜೀವಕುಲದ ಉಸಿರಾಟಕ್ಕೆ ತೊಂದರೆ ಎಂಬ ಸತ್ಯ ಎಲ್ಲರಿಗೂ ಗೊತ್ತು. ಅದರಲ್ಲೂ ಕೆಲವರು ಪೆಟ್ರೋಲ್‌ನಲ್ಲಿ ಡೀಸೆಲ್ ಎಣ್ಣೆಯನ್ನು ಬೆರೆಯಿಸಿದಾಗ ಶಬ್ದವೂ ಕೂಡ ಕರ್ಕಶವಾಗುವುದಲ್ಲದೇ ಇನ್ನಷ್ಟು ಮಲೀನಯುಕ್ತ ವಾಯುಮಾಲಿನ್ಯವಾಗುತ್ತದೆ.

ಈ ವಾಯುಮಾಲಿನ್ಯವನ್ನು ಕಡಿಮೆಗೊಳಿಸಲು “ಜಿ ಮತ್ತು ಟಿ ಯುಗೋಟೆಕ್” ಎಂಬ ಕಂಪನಿಯೊಂದು ಒಂದು ಉಪಕರಣವೊಂದನ್ನು ತಯಾರಿಸಿದೆ. ಇದನ್ನು ಬಿಡಿಭಾಗದಂತೆ ರಿಕ್ಷಾಗಳಿಗೆ ಜೋಡಿಸಬಹುದು. ಇದು ಪೆಟ್ರೋಲನ್ನು ಪ್ರೊಪೇನ್ ಆಗಿ ಪರಿವರ್ತಿಸುತ್ತದೆ. ಪ್ರತಿಭಾಗದಲ್ಲಿ ೧೨ ಲೀಟರ್ ಸಾಮರ್ಥ್ಯದ ಟ್ಯಾಂಕ್ ಮತ್ತು ಮೈಕ್ರೋ ಪ್ರೊಸೆಸಲ್ ನಿಯಂತ್ರಣವಿರುತ್ತದೆ. ಇದು ವಾಹನ ಬಳಸುವ ಪೆಟ್ರೋಲನ್ನು ನಿಯಂತ್ರಿಸುತ್ತದೆ. ದೇಶದಲ್ಲಿ ಇದರ ಪ್ರಯೋಗ ಈಗಾಗಲೇ ನಡೆದಿದೆ. ಜಗತ್ತಿನಲ್ಲಿ ಇದೊಂದು ಪ್ರಥಮ ಪ್ರಯೋಗವೆಂದು ಹೇಳಲಾಗುತ್ತದೆ. ಜಿ ಮತ್ತು ಟಿ ಯುಗೋಟೆಕ್ ಕಂಪನಿಯ ನಿರ್ವಾಹಕ ನಿರ್ದೇಶಕರಾದ ರಾಜೀವ ಸವಾರಾ ಅವರ ಪ್ರಕಾರ ಪ್ರೋಪೇನ್ನಿಂದ ಚಲಿಸುವ ರಿಕ್ಷಾಗಳು ಹೈಡ್ರೋಕಾರ್ಬನ್, ಕಾರ್ಬನ್ ಮೊನಾಕ್ಸೈಡ್ ಮತ್ತು ನೈಟ್ರೋಜನ್ ಆಕ್ಸೈಡ್‌ಗಳಂತಹ ವಿಷಾನಿಲಗಳ ಕ್ಷಮತೆಯೇನೂ ಕಡಿಮೆಯಾಗಲಾರದು. ಬದಲಾಗಿ ಸುರಕ್ಷೆಗೂಳ್ಳುತ್ತದೆ. ಪ್ರೋಪೇನನ್ನು ಬದಲಿ ಇಂಧನವಾಗಿ ಭಾರತದಲ್ಲಿ ನಿಷೇಧಿಸಲಾಗಿದೆ. ಏಕೆಂದರೆ ಅದು ವಿರಳವಾಗಿ ದೊರೆಯುವ ರಾಸಾಯನಿಕ ವಸ್ತು, ಆದರೆ ಜಿ ಮತ್ತು ಟಿ ಕಂಪನಿಯು ಪ್ರಾಯೋಗಿಕವಾಗಿ ದೆಹಲಿಯಲ್ಲಿ ಈ ಉಪಕರಣವನ್ನು ಬಳಸಲು ನ್ಯಾಯಾಲಯದ ಅನುಮತಿ ಪಡೆದಿದೆ.

ಸ್ಥಳೀಯ ಸರಕಾರಕ್ಕೆ ಈ ಪ್ರಯೋಗದ ಫಲಿತಾಂಶಗಳನ್ನು ಮೇಲ್ವಿಚಾರಣೆ ಮಾಡಲೂ ಕೋರ್ಟ್ ಆದೇಶಿಸಿದೆ. ಪ್ರತಿ ರಿಕ್ಷಾಗೆ ಪ್ರೊಪೇನ್ ಟ್ಯಾಂಕ್ ಜೋಡಿಸಲು ೧೨,೦೦೦ ರೂಪಾಯಿಗಳಷ್ಟು ಖರ್ಚಾಗುತ್ತದೆ. ಈ ಪ್ರಯೋಗವು ಯಶಸ್ವಿಯಾದರೆ ಸರಕಾರವೇ ಪ್ರೋಪೇನ್ ಪರಿವರ್ತನೆಯ ಯಂತ್ರಗಳನ್ನು ಕೊಂಡುಕೊಂಡು ರಿಕ್ಷಾ ಮಾಲೀಕರಿಗೆ ಸರಬರಾಜು ಮಾಡುವ ಯೋಜನೆ ಇದೆ. ಇದಕ್ಕೆ ತಗಲುವ ಅಧಿಕ ಖರ್ಚನ್ನು ಹೆಚ್ಚಿನ ಪ್ರಮಾಣದ ಇಂಧನಕರದಿಂದ ಪಡೆಯಲಾಗುವುದು. ಪೆಟ್ರೋಲಿಗಿಂತ ಪ್ರೊಫೇನ್ ಸುಮಾರು ಅರ್ಧದಷ್ಟು ಅಗ್ಗವಾಗಿರುವುದರಿಂದ ಇದನ್ನು ಮುಂದೊಂದು ದಿನ ಎಲ್ಲ ಕಡೆ ಲಾಭದಾಯಕವಾಗಿ ಬಳಸಬಹುದು. ಇಂತಹ ರಿಕ್ಷಾಗಳು ಎಲ್ಲೆಡೆ ಚಲಾವಣೆಗೊಂಡರೆ ಒಂದಿಷ್ಟು ಪರಿಸರಕ್ಕೆ ಒಳ್ಳೆಯದಾಗಬಹುದೇನೋ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್