Home / ಲೇಖನ / ವಿಜ್ಞಾನ / ಜನಸಂಖ್ಯಾ ಸ್ಫೋಟ

ಜನಸಂಖ್ಯಾ ಸ್ಫೋಟ

ಕಳೆದ ದಶಕದ ಕೊನೆಯಲ್ಲಿ ಬೆಂಗಳೂರಿದ ಜನಸಂಖ್ಯೆ ೪೭ ಲಕ್ಷ ವಿತ್ತು, ಕೇವಲ ೧೦ ವರ್ಷಗಳ ಅವಧಿಯಲ್ಲಿ ೮೦ ಲಕ್ಷವನ್ನು ಮೀರಿದೆ. ಇದು ಬೆಂಗಳೂರಿನಂತಹ ಒಂದು ನಗರದ ಕಥೆಯಲ್ಲ ಏಷಿಯಾ, ಲ್ಯಾಟಿನ, ಆಫ್ರಿಕಾ, ಅಮೇರಿಕಾದಂತಹ ನಗರಗಳಲ್ಲಿಯೂ ಕೂಡ ಜನಸಂಖ್ಯೆಯ ಸ್ಫೋಟ ದಿನೇ ದಿನೇ ಆಗುತ್ತಲೇ ಇದೆ. ಅಭಿವೃದ್ಧಿಯ ಅಗ್ರಪಂಕ್ತಿಯಲ್ಲಿರುವ ಜಪಾನ್ ದೇಶದ ಟೋಕಿಯೋ ಅಮೇರಿಕೆಯ ಪ್ರಮುಖ ನಗರ ನ್ಯೂಯಾರ್ಕ, ಜರ್ಮನಿಯ, ಬರ್ಲಿನ್, ಫ್ರಾನ್ಸಿನ ಪ್ಯಾರಿಸ್ ಜನಸಂಖ್ಯೆಯ ಸ್ಫೋಟದಿಂದ ನಾಗರೀಕರು ತಲ್ಲಣಗೊಳ್ಳುತ್ತಿದ್ದಾರೆ.

ಮುಂದಿನ ಶತಮಾನದಲ್ಲಿ ಭೂಮಿಯ ಮೇಲಿನ ಜನಸಂಖ್ಯೆ ಅಂದಾಜಿಗಿಂತ ಹೆಚ್ಚಾಗುವುದು ನಿಶ್ಚಿತ. ನಾಗರೀಕತೆಯ ವಿಕಾಸದ ತುತ್ತತುದಿಯನ್ನು ತಲುಪಿರುವ ಮಾನವ ಸಂಖ್ಯೆ ೨೦೫೦ರ ವೇಳೆಗೆ ೧,೦೦೦ ಕೋಟಿ (೧೦ ಬಿಲಿಯನ್) ಯನ್ನು ದಾಟಲಿದೆ. ಜಪಾನಿನಲ್ಲಿ ನೆಲದ ಮೇಲೆ ವಾಸ ಮಾಡಲಿಕ್ಕೆ ಸ್ಥಳವೇ ಸಿಗಲಾರದು. ಈಗಾಗಲೇ ಪ್ರತಿ ಕಿ.ಮೀ. ಗಳಿಗೆ ೮,೬೦೦ ಜನಸಂದಣಿ ಇದೆ. ೭ ಕೋಟಿ ಜನಸಂಖ್ಯೆಯ ಸಂದಣಿಯನ್ನು ಭರಿಸಲಾರದೇ ಜಪಾನಿನ ನಗರಗಳು ತುಳುಕುತ್ತಿವೆ. ನೆಲದ ಮೇಲೆ ಸ್ಥಳವಿಲ್ಲದೇ ನೆಲಕ್ಕಾಗಿ (ಕಾಲೂರಲು) ಹುಡುಕಾಟ ನಡೆಯುತ್ತಲಿದೆ. ಈಗಿರುವ ದಾರಿ ಎಂದರೆ ನೆಲದಾಳದಲ್ಲಿಯೋ ಸಮುದ್ರ ಮಧ್ಯೆ ಅಥವಾ ಸಮುದ್ರ ತೀರಗಳಲ್ಲೋ ಅಥವಾ ಅಂತರೀಕ್ಷದಲ್ಲಿಯೇ ನಗರಗಳನ್ನು ನಿರ್ಮಾಣ ಮಾಡಿಯೇ ಜೀವಿಸುವ ಸಂದರ್ಭ ಬಂದಿದೆ.

ಕ್ರಿ.ಶ. ೨೦೫೦ ರವೇಳೆಗೆ ಚಂದ್ರಗ್ರಹದ ಮೇಲೆ ಜನವಸತಿಯ ವಸಾಹತು ಆರಂಭವಾಗಲಿದೆಯಂತೆ. ಈ ನವನಗರಗಳ ನಿರ್ಮಾಣಗಳಿಂದ ನಗರ ಜೀವನ ಸಮಸ್ಯೆಗಳಿಲ್ಲದೆ ಸಾಧ್ಯವೇ ಎಂಬ ಪ್ರಶ್ನೆ. ಮುಂದಾದರೂ ವಿಜ್ಞಾನದಲ್ಲಿ ಹೊಸದನ್ನು ಸಾಧಿಸುತ್ತಲೇ ಇರುವ ಸಂಶೋಧಕರು ಎಲ್ಲಡೆಯಲ್ಲೂ ಜನರನ್ನು ಭರ್ತಿಮಾಡಬಹುದೆನ್ನುತ್ತಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...