Home / ಲೇಖನ / ವಿಜ್ಞಾನ / ಭಾರತೀಯ ಯುವ ವಿಜ್ಞಾನಿಯ ಶೋಧ – ಪ್ಲಾಸ್ಟಿಕ್ ಬಗ್

ಭಾರತೀಯ ಯುವ ವಿಜ್ಞಾನಿಯ ಶೋಧ – ಪ್ಲಾಸ್ಟಿಕ್ ಬಗ್

ಪರಿಸರಕ್ಕೆ ಕಂಟಕ ಪ್ರಾಯವಾಗಿ ವಾಯುಮಾಲಿನ್ಯವನ್ನು ಹದಗೆಡಿಸುವ, ಮತ್ತು ಭೂಮಿಯಲ್ಲಿ ಕರಗದೇ ರೈತರಿಗೆ ವೈರಿಯಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಎಲ್ಲರಿಗೂ ಗೊತ್ತು. ಇದು ಹೇಗೆ ಮಾಡಿದರೂ ನಾಶ ಹೊಂದಲಾರದು, ಕನಿಷ್ಟ ಮೂರು ನಾಲ್ಕು ನೂರು ವರ್ಷಗಳವರೆಗೆ ಭೂಮಿಯಲ್ಲಿ ಕರಗದೇ ಜಲ ಸಂಚಯಕ್ಕೆ ತೊಡಕಾಗುತ್ತಿತ್ತು ಸುಟ್ಟರೂ ಸಹಿತ ಪರಿಸರ ಕಷ್ಮಲಗೊಳ್ಳುವ ಇಂಗಾಲ ಡೈ ಆಕ್ಸೈಡ್ ಉತ್ಪತ್ತಿಯಾಗಿ ಜನರ ಉಸಿರಾಟಕ್ಕೆ ಮಾರಕವಾಗಿತ್ತು. ಇದರ ನಿರ್ನಾಮಕ್ಕೆ ಮದ್ದೇ ಇರಲಿಲ್ಲ ಎಂಬ ಸಂದರ್ಭದಲ್ಲಿ ಭಾರತೀಯ ಯುವ ವಿಜ್ಞಾನಿ ಪಂಕಜ ಅವಧಿಯು ಅವರ ಈ ಪಾಲಥಿನ್ ಅನ್ನು ಭಕ್ಷಿಸುವ ೪-೫ ಕೀಟಗಳನ್ನು ಶೋಧಿಸಿದ್ದಾರೆ.

ಛತ್ತೀಸಗಡದ ಕೃಷಿ ವಿಜ್ಞಾನಿಯಾದ ಇವರು ಸೊಸೈಟಿ ಫಾರ್ ಪಾರ್ಥೇನಿಯಂ ಮ್ಯಾನೇಜ್‌ಮೆಂಟ್ ಸಂಯೋಜಕರಾಗಿ ತಮ್ಮ ಖಾಸಗಿ ಪ್ರಯೋಗಾಲಯದಲ್ಲಿ ೧೩೫ ವಿವಿಧ ಕೀಟಗಳ ಮೇಲೆ ೨ ವರ್ಷ ಪ್ರಯೋಗ ನಡೆಯಿಸಿದರು. ಕೊನೆಗೆ ೫ ವಿವಿಧ ಕೀಟಗಳು ಪಾಲಿಥಿನ್ ತಿನ್ನುವಂತಹವು ಎಂಬುವುದು ಖಚಿತವಾಯಿತು. ಇದಕ್ಕಾಗಿ ‘ಪ್ಲಾಸ್ಟಿಕ್ ಈಟಿಂಗ್ ಆರ್ಗೆನಿಸಂ ಪರಿಯೋಜನಾ’ ಹುಟ್ಟು ಹಾಕಿದರು. ಈ ಪ್ಲಾಸ್ಬಿಕ್ ತಿನ್ನುವ ಕೀಟಗಳಿಗೆ ‘ಪ್ಲಾಸಿಕ್ ಬಗ್’ ಎಂದು ಹೆಸರಿಸಿದ್ದಾರೆ. ಸದ್ಯಕ್ಕೆ ಈ ಕೀಟದ ಇನ್ನಿತರ ವಿವರಗಳು ಮತ್ತು ಅದರ ವೈಜ್ಞಾನಿಕ ಹೆಸರುಗಳನ್ನು ಅವಧಿಯು ರಹಸ್ಯವಾಗಿ ಇರಿಸಿದ್ದಾರೆ.

೧೯೯೯ ರಲ್ಲಿಯೇ ಈ ಬಗ್ಸ್‌ಗಳನ್ನು ಕಂಡು ಹಿಡಿದರೂ ಇವುಗಳ ಜೀವನ ಚಕ್ರ ಇನ್ನು ವಿಸ್ತಾರವಾದ ಅಧ್ಯಯನಕ್ಕಾಗಿ ಹೆಚ್ಚಿನ ಸಮಯ ತೆಗೆದುಕೊಳ್ಳಲಾಯಿತೆಂದು ಹೇಳುತ್ತಾರೆ. ಚಳಿಗಾಲದಲ್ಲಿ ಸಕ್ರಿಯವಾಗಿ ಈ ಕೀಟಗಳು ರೈತನಿಗೆ ಮಿತ್ರನಂತೆ ಇರುತ್ತವೆಂದೂ ಹೇಳುತ್ತಾರೆ. ಈ ಕೀಟಗಳು ೮೦ ವಿವಿಧ ಗಿಡಗಳ ಎಲೆಗಳನ್ನು ತಿನ್ನುವುದರ ಜತೆಗೆ ಅಲ್ಲಿನ ಕೆಲವು ಮುಖ್ಯ ಬೆಳೆಗಳಿಗೆ ವೈರಿಯಾಗಿರುವ ಕಳೆಗಿಡಗಳನ್ನು ತಿಂದು ಹಾಕುತ್ತವೆ. ಇನ್ನೂಂದು ವಿಶೇಷವೆಂದರೆ ಕಪ್ಪು ಬಣ್ಣದ ಪಾಲಿಥಿನ್ ತಿನ್ನುವುದು ಇದರಲ್ಲಿ ಒಂದು ಕೀಟಕ್ಕೆ ಬಹು ಇಷ್ಟವೆಂದು ಹೇಳುತ್ತಾರೆ. ಇವು ಹಣ್ಣಾದ ಮಾವಿನ ಎಲೆಯಂಥಹ ೧೦-೧೨ ಪಾಲಿಥಿನ್ ಎಲೆಗಳನ್ನು ೩-೪ ಗಂಟೆಗಳಲಿ ತುಂಬ ರುಚಿವಹಿಸಿ ತಿನ್ನುತ್ತವೆ ಮತ್ತು ಜೀರ್ಣಿಸಿಕೊಳುತ್ತವೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...