Home / ಲೇಖನ / ವಿಜ್ಞಾನ / ಭಾರತೀಯ ಯುವ ವಿಜ್ಞಾನಿಯ ಶೋಧ – ಪ್ಲಾಸ್ಟಿಕ್ ಬಗ್

ಭಾರತೀಯ ಯುವ ವಿಜ್ಞಾನಿಯ ಶೋಧ – ಪ್ಲಾಸ್ಟಿಕ್ ಬಗ್

ಪರಿಸರಕ್ಕೆ ಕಂಟಕ ಪ್ರಾಯವಾಗಿ ವಾಯುಮಾಲಿನ್ಯವನ್ನು ಹದಗೆಡಿಸುವ, ಮತ್ತು ಭೂಮಿಯಲ್ಲಿ ಕರಗದೇ ರೈತರಿಗೆ ವೈರಿಯಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಎಲ್ಲರಿಗೂ ಗೊತ್ತು. ಇದು ಹೇಗೆ ಮಾಡಿದರೂ ನಾಶ ಹೊಂದಲಾರದು, ಕನಿಷ್ಟ ಮೂರು ನಾಲ್ಕು ನೂರು ವರ್ಷಗಳವರೆಗೆ ಭೂಮಿಯಲ್ಲಿ ಕರಗದೇ ಜಲ ಸಂಚಯಕ್ಕೆ ತೊಡಕಾಗುತ್ತಿತ್ತು ಸುಟ್ಟರೂ ಸಹಿತ ಪರಿಸರ ಕಷ್ಮಲಗೊಳ್ಳುವ ಇಂಗಾಲ ಡೈ ಆಕ್ಸೈಡ್ ಉತ್ಪತ್ತಿಯಾಗಿ ಜನರ ಉಸಿರಾಟಕ್ಕೆ ಮಾರಕವಾಗಿತ್ತು. ಇದರ ನಿರ್ನಾಮಕ್ಕೆ ಮದ್ದೇ ಇರಲಿಲ್ಲ ಎಂಬ ಸಂದರ್ಭದಲ್ಲಿ ಭಾರತೀಯ ಯುವ ವಿಜ್ಞಾನಿ ಪಂಕಜ ಅವಧಿಯು ಅವರ ಈ ಪಾಲಥಿನ್ ಅನ್ನು ಭಕ್ಷಿಸುವ ೪-೫ ಕೀಟಗಳನ್ನು ಶೋಧಿಸಿದ್ದಾರೆ.

ಛತ್ತೀಸಗಡದ ಕೃಷಿ ವಿಜ್ಞಾನಿಯಾದ ಇವರು ಸೊಸೈಟಿ ಫಾರ್ ಪಾರ್ಥೇನಿಯಂ ಮ್ಯಾನೇಜ್‌ಮೆಂಟ್ ಸಂಯೋಜಕರಾಗಿ ತಮ್ಮ ಖಾಸಗಿ ಪ್ರಯೋಗಾಲಯದಲ್ಲಿ ೧೩೫ ವಿವಿಧ ಕೀಟಗಳ ಮೇಲೆ ೨ ವರ್ಷ ಪ್ರಯೋಗ ನಡೆಯಿಸಿದರು. ಕೊನೆಗೆ ೫ ವಿವಿಧ ಕೀಟಗಳು ಪಾಲಿಥಿನ್ ತಿನ್ನುವಂತಹವು ಎಂಬುವುದು ಖಚಿತವಾಯಿತು. ಇದಕ್ಕಾಗಿ ‘ಪ್ಲಾಸ್ಟಿಕ್ ಈಟಿಂಗ್ ಆರ್ಗೆನಿಸಂ ಪರಿಯೋಜನಾ’ ಹುಟ್ಟು ಹಾಕಿದರು. ಈ ಪ್ಲಾಸ್ಬಿಕ್ ತಿನ್ನುವ ಕೀಟಗಳಿಗೆ ‘ಪ್ಲಾಸಿಕ್ ಬಗ್’ ಎಂದು ಹೆಸರಿಸಿದ್ದಾರೆ. ಸದ್ಯಕ್ಕೆ ಈ ಕೀಟದ ಇನ್ನಿತರ ವಿವರಗಳು ಮತ್ತು ಅದರ ವೈಜ್ಞಾನಿಕ ಹೆಸರುಗಳನ್ನು ಅವಧಿಯು ರಹಸ್ಯವಾಗಿ ಇರಿಸಿದ್ದಾರೆ.

೧೯೯೯ ರಲ್ಲಿಯೇ ಈ ಬಗ್ಸ್‌ಗಳನ್ನು ಕಂಡು ಹಿಡಿದರೂ ಇವುಗಳ ಜೀವನ ಚಕ್ರ ಇನ್ನು ವಿಸ್ತಾರವಾದ ಅಧ್ಯಯನಕ್ಕಾಗಿ ಹೆಚ್ಚಿನ ಸಮಯ ತೆಗೆದುಕೊಳ್ಳಲಾಯಿತೆಂದು ಹೇಳುತ್ತಾರೆ. ಚಳಿಗಾಲದಲ್ಲಿ ಸಕ್ರಿಯವಾಗಿ ಈ ಕೀಟಗಳು ರೈತನಿಗೆ ಮಿತ್ರನಂತೆ ಇರುತ್ತವೆಂದೂ ಹೇಳುತ್ತಾರೆ. ಈ ಕೀಟಗಳು ೮೦ ವಿವಿಧ ಗಿಡಗಳ ಎಲೆಗಳನ್ನು ತಿನ್ನುವುದರ ಜತೆಗೆ ಅಲ್ಲಿನ ಕೆಲವು ಮುಖ್ಯ ಬೆಳೆಗಳಿಗೆ ವೈರಿಯಾಗಿರುವ ಕಳೆಗಿಡಗಳನ್ನು ತಿಂದು ಹಾಕುತ್ತವೆ. ಇನ್ನೂಂದು ವಿಶೇಷವೆಂದರೆ ಕಪ್ಪು ಬಣ್ಣದ ಪಾಲಿಥಿನ್ ತಿನ್ನುವುದು ಇದರಲ್ಲಿ ಒಂದು ಕೀಟಕ್ಕೆ ಬಹು ಇಷ್ಟವೆಂದು ಹೇಳುತ್ತಾರೆ. ಇವು ಹಣ್ಣಾದ ಮಾವಿನ ಎಲೆಯಂಥಹ ೧೦-೧೨ ಪಾಲಿಥಿನ್ ಎಲೆಗಳನ್ನು ೩-೪ ಗಂಟೆಗಳಲಿ ತುಂಬ ರುಚಿವಹಿಸಿ ತಿನ್ನುತ್ತವೆ ಮತ್ತು ಜೀರ್ಣಿಸಿಕೊಳುತ್ತವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...