Home / ಲೇಖನ / ವಿಜ್ಞಾನ / ಅಂತರೀಕ್ಷಲ್ಲೊಂದು ನಗರ

ಅಂತರೀಕ್ಷಲ್ಲೊಂದು ನಗರ

ನೆಲದಾಳದಲ್ಲಿ, ಸಾಗರದಾಳದಲ್ಲಿ ನಗರಗಳನ್ನು ನಿರ್ಮಿಸಿ ಯಾವ ಸಮೆಸ್ಯೆಗಳೂ ಇಲ್ಲದಂತೆ ಬದುಕುವ ವ್ಯವಸ್ಥೆಯನ್ನು ಅಮೇರಿಕ, ಜಪಾನಗಳಂತಹ ಮುಂದುವರೆದ ರಾಷ್ಟ್ರಗಳು ಮಾಡುತ್ತಲಿವೆ. ಜನಸಾಂದ್ರತೆ ಪರಿಸರ ನೈರ್ಮಲ್ಯತೆಗಳನ್ನು ಈ ಪ್ರದೇಶಗಳಲ್ಲಿ ಕಾಪಾಡಿ ಕೊಳ್ಳುಬಹುದೆಂಬ ಆಶಯ ಇವರದು. ಇದೀಗ ಅಂತರೀಕ್ಷದಲ್ಲಿ ನಿಸರ್ಗ ಸಹಜವಾದ ವಾತಾನುಕೂಲ ವ್ಯವಸ್ಥೆ ಹೊಂದಿ ನಗರಗಳನ್ನು ನಿರ್ಮಾಣಗೊಳಿಸಲಾಗುತ್ತಿದೆ. ಈ ನಗರದ ಸುತ್ತಲೂ ಗಾಜಿನಗೊಳವನ್ನು ಮಾಡಲಾಗಿದ್ದು ಸೂರ್ಯನ ಚಲನೆಯನ್ನು ಅನುಸರಿಸಿ ಬೆಳಕನ್ನು ಪ್ರತಿಫಲಿಸುವ ಕನ್ನಡಿಗಳು ಪ್ರಾಕೃತಿಕ ಬೆಳಕನ್ನು ಅವಶ್ಯಕತೆಗೆ ತಕ್ಕಂತೆ ಬಳಸಿಕೊಳ್ಳುತ್ತವೆ. ಎರಡು ಗಾಜಿನ ಪದರುಗಳಿಂದಾವೃತ್ತವಾದ ಈ ನಗರ ಸಂಕೀರ್ಣದಲ್ಲಿ ಹೊರಪದರವು ಪರಿಸರದ ಮಾಲಿನ್ಯ, ಶಬ್ಧ ಮಾಲಿನ್ಯವನ್ನು ತಡೆಯುತ್ತದೆ. ಒಳಪದರ ಗಾಜಿನ ಪದರವನ್ನು ಗಾಳಿ ಒಳಬರಲು ಅನುಕೂಲಕ್ಕೆ ತೆರೆಯುವ ಕಿಟಕಿಯಂತೆ ಬಳಸಬಹುದು. ಸೂರ್ಯನ ತಾಪ, ಗಾಳಿಯ ಚಲನೆಯನ್ನು ಈ ನಗರದಲ್ಲಿ ಕಾಯ್ದುಕೊಳುತ್ತದೆ. ಹೆಚ್ಚು ಬಿಸಿಗಾಳಿಯನ್ನು ನಗರದ ಮೇಲಿನ ಮುಚ್ಚಳದಿಂದ ಹೊರಹಾಕಲು ಸಾಧ್ಯವಿದೆ. ಚಳಿಗಾಲದಲ್ಲಿ ಗಾಳಿಯ ಉಷ್ಣತೆಯನ್ನು ಬಳಸಿ ನಗರವನ್ನು ಬೆಚ್ಚಗಿಡಬಹುದು.

ನೆಲಮಟ್ಟದಲ್ಲಿ ಸಾಂದ್ರವಾಗಿರುವ ಹೊರ ಪ್ರಪಂಚದೊಳಗೆ ಸೇರದಂತಿರಲು ಗಾಳಿಯನ್ನು ೧೭ ಮೀ ನೆಲಮಟ್ಟದ ಎತ್ತರದಿಂದ ಒಳಸೇರಿಕೊಳ್ಳುವ ವ್ಯವಸ್ಥೆ ಇದೆ. ಟೊಳ್ಳಾದ ಪೆಟ್ಟಿಗೆಯಾಕಾರದ ನೆಲವನ್ನು ಮಾಡಲಾಗಿದ್ದು ತೂಗು ಸೇತುವೆಯಂತೆ ನೆಲವನ್ನು ತೂಗುಹಾಕಲಾಗಿದೆ. ನಿರ್ದಿಷ್ಟವಾದ ಆಕಾರವನ್ನು ಹೊಂದಿರುವ ಈ ನಗರವಿನ್ಯಾಸ ಗಾಳಿಗೆ ತಡೆಯೊಡ್ಡದಂತೆ ರೂಪುಗೊಂಡಿದೆ. ವೇಗದ ಗಾಳಿಯನ್ನು ತಡೆದು ನೆಲದಲ್ಲಿ ಮಂದವಾಗಿ ಹರಡುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ಕಟ್ಟಡದ ಹೊರಭಾಗದಲ್ಲಿನ ಉದ್ಯಾನದಲ್ಲಿ ಈಗಾಗಲೇ ಒಳ್ಳೆಯ ಸೂಕ್ತ ಸಸ್ಯ ಸಂಕುಲದ ಬೆಳವಣಿಗೆಯನ್ನು ಸಹ ಮಾಡಲಾಗುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...