Home / ಲೇಖನ / ವಿಜ್ಞಾನ / ಎರಡು ಹೊಸ ಭೂಗ್ರಹಗಳ ಶೋಧ

ಎರಡು ಹೊಸ ಭೂಗ್ರಹಗಳ ಶೋಧ

ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿವೆ.

ಈ ಎರಡು ಭೂಗ್ರಹಗಳು ನಮ್ಮಿಂದ ೩೫ ಜ್ಯೋತಿವರ್‍ಷಗಳ ಅಂತರದಲ್ಲಿವೆ, ಎಂದು ವಿಜ್ಞಾನಿಗಳು ಅಭಿಪ್ರಾಯ. ಇದರಂತೆ ೭೦ ವರ್ಜಿನಿಸ್, ಮತ್ತು “೪೭ ಉರ್ಸೆ ಮೆಜೋರಿಸ್” ಎಂದು ಹೆಸರಿಸಲಾಗಿದ್ದು ಒಂದು ಕನ್ಯಾರಾಶಿಯಲ್ಲಿಯೂ ಇನ್ನೊಂದು ಸಪ್ತರ್ಷಿ ಮಂಡಲದಲ್ಲಿಯೂ ಇವೆ, ಎಂದು ಖಚಿತಪಡಿಸಿಕೊಳ್ಳಲಾಗಿದೆ. ರೇಡಿಯೋ ತರಂಗಗಳ ಮೂಲಕ ನಾವು ಸಂದೇಶ ಕಳಿಸಿದರೆ ೩೫ ವರ್ಷಗಳು ಬೇಕು. ನಕ್ಷತ್ರವಾಗಿದ್ದು ಸೂರ್ಯನಂತೆ ಇವೆ. ಇದನ್ನು ಸುತ್ತುವ ವರ್ಜಿನಿಯಸ್ – ೭೦, ನಮ್ಮ ಗುರುಗ್ರಹದ ಗಾತ್ರಕ್ಕಿಂತ ೮ ಪಟ್ಟು ದೊಡ್ಡದಿದೆ. ಪ್ರತಿ ೧,೧೦೦ ದಿನಗಳಿಗೊಮ್ಮೆ ತನ್ನ ಸೂರ್ಯನನ್ನು ಪ್ರದಕ್ಷಣೆ ಇವು ಹಾಕುತ್ತಿವೆ. ಇದರ ತಾಪಮಾನ ೮೦ ಸೆಲ್ಸಿಯಸ್‌ನಷ್ಟು ಇದೆ.

ಇವೆರೆಡೂ ಗ್ರಹಗಳಲ್ಲಿ ನೀರು ಇದ್ದು ಮತ್ತು ಜೀವಿ ವಿಕಾಸ ಉಂಟಾಗಿರುವ ಸಾಧ್ಯತೆ ಇದೆ, ಎಂಬುವುದು ವಿಜ್ಞಾನಿಗಳ ಅಭಿಪ್ರಾಯ. ಜೀವಿಗಳು ಅಥವಾ ಮಾನವ ವಾಸಯೋಗ್ಯ ವಾತಾವರಣ ಬಗ್ಗೆ ಯೋಚಿಸುತ್ತಿರುವ ಖಗೋಳಜ್ಞರಿಗೆ ಆಶಾದಾಯಕ ಅಂಶವೆಂದರೆ ಈ ಗ್ರಹಗಳಿಗಿರುವ ಚಂದ್ರರು. ಈ ಚಂದ್ರರ ಮೇಲೆ ವಾಸಯೋಗ್ಯವಾದ ಭೂಮಿ ಇದೆ ಎಂಬ ಆಶಾಭಾವನೆಯನ್ನು ಹೊಂದಿದ್ದಾರೆ. ಈ ಗ್ರಹಗಳ ಚಂದ್ರದಲ್ಲಿ ಸಾಗರ ಮತ್ತು ಮಳೆಯ ವಾತಾವರಣವಿದ್ದುದರಿಂದ ಮಾನವರಿಗೆ ವಸತಿಯೋಗ್ಯವೆಂದು ನಿರೀಕ್ಷಿಸಿದ್ದಾರೆ. ಈಗಾಗಲೇ ಇಂಥಹ ನಕ್ಷತ್ರಗಳನ್ನು ಮತ್ತು ಅಲ್ಲಿನ ಗ್ರಹಗಳ ಬೇಟಿಯಲ್ಲಿ ನಿರತವಾಗಿರುವ ಖಗೋಳ ಶಾಸ್ರಜ್ಞರಿಗೆ ಇದು ಹೊಸತಲ್ಲವಾದರೂ ಏನನ್ನೊ ನಿರೀಕ್ಷಿಸಿದಾರೆ. ಇನೂ ೬೦ ಗ್ರಹಗಳನ್ನು ಈ ತಂಡವು ವೀಕ್ಷಿಸತೊಡಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...