Home / ಲೇಖನ / ವಿಜ್ಞಾನ / ಕೊಂಬಿಲ್ಲದ ಹಸುಗಳ ಸೃಷ್ಟಿ !

ಕೊಂಬಿಲ್ಲದ ಹಸುಗಳ ಸೃಷ್ಟಿ !

ಸಾಮಾನ್ಯವಾಗಿ ನಾವು ಮೇಕೆ, ಹೋತ, ಟಗರು, ಹಸು, ಹೋರಿ, ಜಿಂಕೆ, ಎತ್ತು, ಎಮ್ಮೆ ಮುಂತಾದ ಕೊಂಬುಗಳ್ಳುಳ್ಳ ಪ್ರಾಣಿಗಳನ್ನು ಸಾಕುತ್ತೇವೆ. ಕೆಲವು ಪ್ರಾಣಿಗಳ ಕೊಂಬುಗಳು ಪ್ರಾಣಾಂತಿಕ ಭಯವನ್ನು ಸೃಷ್ಟಿಸಿದರೆ, ಕೆಲವು ವ್ಯಕ್ತಿಗಳಿಗೆ ಇರಿದು ಅಪಾಯವನ್ನುಂಟು ಮಾಡುತ್ತವೆ. ಕೆಲವಂತೂ ಸಾಯಿಸಿಯೇ ಬಿಡುತ್ತವೆ. ಕೊಂಬುಳ್ಳ (ಭೀಕರವಾದ ) ಪ್ರಾಣಿಗಳಂದರೆ ಹಾಯಬಹುದೆಂಬ ಭಯ ಎಲ್ಲರಿಗೂ ಇದ್ದೆ ಇರುತ್ತದೆ. ಸಾಕಲೇಬೇಕೆಂಬ ಅನಿವಾರ್ಯತೆ ಕೂಡ ಇರುತ್ತದೆ.

ಕೊಂಬಿಲ್ಲದೇ ಹುಟ್ಟಬಹುದಾದ ಪ್ರಾಣಿಗಳಿದ್ದರೆ ಹೇಗೆ ಈ ಬಗೆಗೆ ವಿಜ್ಞಾನಿಗಳು ಚಿಂತನೆ ನಡೆಯಿಸಿ ಕೊನೆಗೂ ಯಶಸ್ವಿಯಾಗಿದ್ದಾರೆ. ಈಗ ತಳಿ ತಂತ್ರಜ್ಞಾನದಿಂದಾಗಿ ಕೊಂಬಿಲ್ಲದ ಹಸುಗಳನ್ನು ತಮಗಿಷ್ಟವಾದ ಬಣ್ಣದಲ್ಲಿ ಹೊಂದಲು ಸಾಧ್ಯವಿದೆ, ಎಂದು ಖಚಿತಪಡಿಸಲಾಗಿದೆ. ಮೈಕ್ರೋಸೆಟೆಲೈಟ್ ಎನ್ನುವ ಡಿ. ಎನ್. ಎ. ಈ ಕೊಂಬಿನ ಬೆಳವಣಿಗೆಗೆ ಕಾರಣವೆಂದು ತಿಳಿದಾಗಿದೆ. ಈ ಡಿ.ಎನ್.ಎ. ಅನ್ನು ಕಟ್ಟಿಹಾಕಲು ಕೃತಕ ತಳಿಯಾಂತಕನನ್ನು (ಜೆನಿಟಕ್ ಮಾರ್ಕರ್‍ಸ್) ತಯಾರಿಸಿ ನೀಡಲಾಗುತ್ತದೆ. ಕೊಂಬಿಲ್ಲದ ಕೆಲವು ಜಾತಿಯ ಪ್ರಾಣಿಗಳಲ್ಲಿ ಕಾಣಬಂದ ವಿದ್ಯಾಮಾನವನ್ನು ಬಳಕೆಗೆ ಅಷ್ಟೇ ತರಲಾಗಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಹೀಗೆ ಕೆಲವು ಜೀವಿಗಳಲ್ಲಿರುವ ಅಂಗಾಂಗಗಳ ಮೂಲ ಜೆನಿಟಕ್ಸ್‌ನ್ನು ಕಂಡು ಹಿಡಿದು ಅದು ಪೂರೈಸದಂತೆ ಮಾಡಿ ಬೇಡವಾದ ಅಂಗಾಂಗಗಳನ್ನು ಬೆಳೆಯದಂತೆ ಮುಂದೆ ಮಾಡಬಹುದೇನೊ? ಕಾಲಾಯತಸ್ಮೈನಮಃ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...