Home / ಲೇಖನ / ವಿಜ್ಞಾನ / ಕೊಂಬಿಲ್ಲದ ಹಸುಗಳ ಸೃಷ್ಟಿ !

ಕೊಂಬಿಲ್ಲದ ಹಸುಗಳ ಸೃಷ್ಟಿ !

ಸಾಮಾನ್ಯವಾಗಿ ನಾವು ಮೇಕೆ, ಹೋತ, ಟಗರು, ಹಸು, ಹೋರಿ, ಜಿಂಕೆ, ಎತ್ತು, ಎಮ್ಮೆ ಮುಂತಾದ ಕೊಂಬುಗಳ್ಳುಳ್ಳ ಪ್ರಾಣಿಗಳನ್ನು ಸಾಕುತ್ತೇವೆ. ಕೆಲವು ಪ್ರಾಣಿಗಳ ಕೊಂಬುಗಳು ಪ್ರಾಣಾಂತಿಕ ಭಯವನ್ನು ಸೃಷ್ಟಿಸಿದರೆ, ಕೆಲವು ವ್ಯಕ್ತಿಗಳಿಗೆ ಇರಿದು ಅಪಾಯವನ್ನುಂಟು ಮಾಡುತ್ತವೆ. ಕೆಲವಂತೂ ಸಾಯಿಸಿಯೇ ಬಿಡುತ್ತವೆ. ಕೊಂಬುಳ್ಳ (ಭೀಕರವಾದ ) ಪ್ರಾಣಿಗಳಂದರೆ ಹಾಯಬಹುದೆಂಬ ಭಯ ಎಲ್ಲರಿಗೂ ಇದ್ದೆ ಇರುತ್ತದೆ. ಸಾಕಲೇಬೇಕೆಂಬ ಅನಿವಾರ್ಯತೆ ಕೂಡ ಇರುತ್ತದೆ.

ಕೊಂಬಿಲ್ಲದೇ ಹುಟ್ಟಬಹುದಾದ ಪ್ರಾಣಿಗಳಿದ್ದರೆ ಹೇಗೆ ಈ ಬಗೆಗೆ ವಿಜ್ಞಾನಿಗಳು ಚಿಂತನೆ ನಡೆಯಿಸಿ ಕೊನೆಗೂ ಯಶಸ್ವಿಯಾಗಿದ್ದಾರೆ. ಈಗ ತಳಿ ತಂತ್ರಜ್ಞಾನದಿಂದಾಗಿ ಕೊಂಬಿಲ್ಲದ ಹಸುಗಳನ್ನು ತಮಗಿಷ್ಟವಾದ ಬಣ್ಣದಲ್ಲಿ ಹೊಂದಲು ಸಾಧ್ಯವಿದೆ, ಎಂದು ಖಚಿತಪಡಿಸಲಾಗಿದೆ. ಮೈಕ್ರೋಸೆಟೆಲೈಟ್ ಎನ್ನುವ ಡಿ. ಎನ್. ಎ. ಈ ಕೊಂಬಿನ ಬೆಳವಣಿಗೆಗೆ ಕಾರಣವೆಂದು ತಿಳಿದಾಗಿದೆ. ಈ ಡಿ.ಎನ್.ಎ. ಅನ್ನು ಕಟ್ಟಿಹಾಕಲು ಕೃತಕ ತಳಿಯಾಂತಕನನ್ನು (ಜೆನಿಟಕ್ ಮಾರ್ಕರ್‍ಸ್) ತಯಾರಿಸಿ ನೀಡಲಾಗುತ್ತದೆ. ಕೊಂಬಿಲ್ಲದ ಕೆಲವು ಜಾತಿಯ ಪ್ರಾಣಿಗಳಲ್ಲಿ ಕಾಣಬಂದ ವಿದ್ಯಾಮಾನವನ್ನು ಬಳಕೆಗೆ ಅಷ್ಟೇ ತರಲಾಗಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಡುತ್ತಾರೆ.

ಹೀಗೆ ಕೆಲವು ಜೀವಿಗಳಲ್ಲಿರುವ ಅಂಗಾಂಗಗಳ ಮೂಲ ಜೆನಿಟಕ್ಸ್‌ನ್ನು ಕಂಡು ಹಿಡಿದು ಅದು ಪೂರೈಸದಂತೆ ಮಾಡಿ ಬೇಡವಾದ ಅಂಗಾಂಗಗಳನ್ನು ಬೆಳೆಯದಂತೆ ಮುಂದೆ ಮಾಡಬಹುದೇನೊ? ಕಾಲಾಯತಸ್ಮೈನಮಃ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...