Home / ಕವನ / ಕವಿತೆ / ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ

ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ

ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ ನೀವು
ಒಲ್ಲದಿದ್ದರೆ ಇಲ್ಲೆ ಇರತೀರೇನ್ರೇ ||ಪ||

ಕಲ್ಲೌ ಮಲ್ಲೌ ಕೂಡಿಕೊಂಡು ದೀವಳಿಗೆ ಹಬ್ಬದಲ್ಲಿ
ಉಲ್ಲಾಸದಿಂದ ಅಲ್ಲಮಪ್ರಭುವಿನ ಮರೆತೀರೇನ್ರೇ ಇಲ್ಲೇ ಇರತೀರೇನ್ರೇ ||ಅ.ಪ.||

ಮಡಿಯನುಟ್ಟು ಮೀಸಲದಡಗಿ ಮಾಡಬೇಕ್ರೇ ಅದಕೆ
ತಡವು ಆದರೆ ನಿಮ್ಮ ಗೊಡವಿ ನಮಗೆ ಯಾಕ್ರೇ
ಹುರಕ್ಕಿ ಹೋಳಿಗೆ ಹೂರಣಕಡಬು
ಕಡಲಿ ಪಚ್ಚಡಿ ಕಟ್ಟಿನಾಂಬ್ರಾ
ಚಟಗಿ ಮುಚ್ಚಳ ಬಾನದ ಗಡಗಿ ಹೆಡಗಿ ಜೋಕ್ರೆ ನೀವು
ದೇವರ ಗುಡಿಗೆ ದೃಡದಿ ಹೋಗಿ ಧೂಪ ಹಾಕ್ರೇ ||೧||

ಊರ ಹೊರಗಿನ ಸಾರಿ ಮೀರಿದ ಸ್ಥಳವ ನೋಡ್ರೆ ಅದಕ
ಸೇರದಿದ್ದರ ನಿಮ್ಮ ಸ್ನೇಹ ನನಗೆ ಬ್ಯಾಡ್ರೇ
ಮೂರು ಗಿರಿಯ ಮರೆಯಲ್ಲಿರುವ
ನೀರು ತರುವ ಕೆರೆಯ ಬದಿಗೆ
ಜಾರುತರದ ಬುರುಜಿನೊಳು ಬಾಜಾರ್ ಹೂಡ್ರೆ ಮುಂದೆ
ಪಾರುಗಾಣುವಂಥ ಸುಸ್ರಿ ತಂದು ಇಡ್ರೇ ||೨||

ವಸುಧೆಯೊಳು ಶಿಶುನಾಳಧೀಶನ ಹೆಸರು ಹೇಳ್ರೇ ಹೇಸಿ
ವ್ಯಸನಿಕರಾದವರೆಲ್ಲ ಇದಕ ಬರಲೇ ಬೇಡ್ರೇ
ಕುಶಲದಿಂದ ಕೋಲ ಪಿಡಿದು
ಹಸನಾಗಿ ಪದ ನುಡಿದು
ರಸಿಕರಾದವರೆಲ್ಲ ನೀವು ಕೂತು ಕೇಳ್ರೇ ತುಸು
ಕಸರು ಇದ್ದರೆ ಇಲ್ಲಿ ಅದನು ತಿದ್ದಿ ಹೇಳ್ರೇ ||೩||

****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...