Home / ಕವನ / ಕವಿತೆ / ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ

ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ

ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ ನೀವು
ಒಲ್ಲದಿದ್ದರೆ ಇಲ್ಲೆ ಇರತೀರೇನ್ರೇ ||ಪ||

ಕಲ್ಲೌ ಮಲ್ಲೌ ಕೂಡಿಕೊಂಡು ದೀವಳಿಗೆ ಹಬ್ಬದಲ್ಲಿ
ಉಲ್ಲಾಸದಿಂದ ಅಲ್ಲಮಪ್ರಭುವಿನ ಮರೆತೀರೇನ್ರೇ ಇಲ್ಲೇ ಇರತೀರೇನ್ರೇ ||ಅ.ಪ.||

ಮಡಿಯನುಟ್ಟು ಮೀಸಲದಡಗಿ ಮಾಡಬೇಕ್ರೇ ಅದಕೆ
ತಡವು ಆದರೆ ನಿಮ್ಮ ಗೊಡವಿ ನಮಗೆ ಯಾಕ್ರೇ
ಹುರಕ್ಕಿ ಹೋಳಿಗೆ ಹೂರಣಕಡಬು
ಕಡಲಿ ಪಚ್ಚಡಿ ಕಟ್ಟಿನಾಂಬ್ರಾ
ಚಟಗಿ ಮುಚ್ಚಳ ಬಾನದ ಗಡಗಿ ಹೆಡಗಿ ಜೋಕ್ರೆ ನೀವು
ದೇವರ ಗುಡಿಗೆ ದೃಡದಿ ಹೋಗಿ ಧೂಪ ಹಾಕ್ರೇ ||೧||

ಊರ ಹೊರಗಿನ ಸಾರಿ ಮೀರಿದ ಸ್ಥಳವ ನೋಡ್ರೆ ಅದಕ
ಸೇರದಿದ್ದರ ನಿಮ್ಮ ಸ್ನೇಹ ನನಗೆ ಬ್ಯಾಡ್ರೇ
ಮೂರು ಗಿರಿಯ ಮರೆಯಲ್ಲಿರುವ
ನೀರು ತರುವ ಕೆರೆಯ ಬದಿಗೆ
ಜಾರುತರದ ಬುರುಜಿನೊಳು ಬಾಜಾರ್ ಹೂಡ್ರೆ ಮುಂದೆ
ಪಾರುಗಾಣುವಂಥ ಸುಸ್ರಿ ತಂದು ಇಡ್ರೇ ||೨||

ವಸುಧೆಯೊಳು ಶಿಶುನಾಳಧೀಶನ ಹೆಸರು ಹೇಳ್ರೇ ಹೇಸಿ
ವ್ಯಸನಿಕರಾದವರೆಲ್ಲ ಇದಕ ಬರಲೇ ಬೇಡ್ರೇ
ಕುಶಲದಿಂದ ಕೋಲ ಪಿಡಿದು
ಹಸನಾಗಿ ಪದ ನುಡಿದು
ರಸಿಕರಾದವರೆಲ್ಲ ನೀವು ಕೂತು ಕೇಳ್ರೇ ತುಸು
ಕಸರು ಇದ್ದರೆ ಇಲ್ಲಿ ಅದನು ತಿದ್ದಿ ಹೇಳ್ರೇ ||೩||

****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...