Home / ಕವನ / ಕವಿತೆ / ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ

ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ

ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ ನೀವು
ಒಲ್ಲದಿದ್ದರೆ ಇಲ್ಲೆ ಇರತೀರೇನ್ರೇ ||ಪ||

ಕಲ್ಲೌ ಮಲ್ಲೌ ಕೂಡಿಕೊಂಡು ದೀವಳಿಗೆ ಹಬ್ಬದಲ್ಲಿ
ಉಲ್ಲಾಸದಿಂದ ಅಲ್ಲಮಪ್ರಭುವಿನ ಮರೆತೀರೇನ್ರೇ ಇಲ್ಲೇ ಇರತೀರೇನ್ರೇ ||ಅ.ಪ.||

ಮಡಿಯನುಟ್ಟು ಮೀಸಲದಡಗಿ ಮಾಡಬೇಕ್ರೇ ಅದಕೆ
ತಡವು ಆದರೆ ನಿಮ್ಮ ಗೊಡವಿ ನಮಗೆ ಯಾಕ್ರೇ
ಹುರಕ್ಕಿ ಹೋಳಿಗೆ ಹೂರಣಕಡಬು
ಕಡಲಿ ಪಚ್ಚಡಿ ಕಟ್ಟಿನಾಂಬ್ರಾ
ಚಟಗಿ ಮುಚ್ಚಳ ಬಾನದ ಗಡಗಿ ಹೆಡಗಿ ಜೋಕ್ರೆ ನೀವು
ದೇವರ ಗುಡಿಗೆ ದೃಡದಿ ಹೋಗಿ ಧೂಪ ಹಾಕ್ರೇ ||೧||

ಊರ ಹೊರಗಿನ ಸಾರಿ ಮೀರಿದ ಸ್ಥಳವ ನೋಡ್ರೆ ಅದಕ
ಸೇರದಿದ್ದರ ನಿಮ್ಮ ಸ್ನೇಹ ನನಗೆ ಬ್ಯಾಡ್ರೇ
ಮೂರು ಗಿರಿಯ ಮರೆಯಲ್ಲಿರುವ
ನೀರು ತರುವ ಕೆರೆಯ ಬದಿಗೆ
ಜಾರುತರದ ಬುರುಜಿನೊಳು ಬಾಜಾರ್ ಹೂಡ್ರೆ ಮುಂದೆ
ಪಾರುಗಾಣುವಂಥ ಸುಸ್ರಿ ತಂದು ಇಡ್ರೇ ||೨||

ವಸುಧೆಯೊಳು ಶಿಶುನಾಳಧೀಶನ ಹೆಸರು ಹೇಳ್ರೇ ಹೇಸಿ
ವ್ಯಸನಿಕರಾದವರೆಲ್ಲ ಇದಕ ಬರಲೇ ಬೇಡ್ರೇ
ಕುಶಲದಿಂದ ಕೋಲ ಪಿಡಿದು
ಹಸನಾಗಿ ಪದ ನುಡಿದು
ರಸಿಕರಾದವರೆಲ್ಲ ನೀವು ಕೂತು ಕೇಳ್ರೇ ತುಸು
ಕಸರು ಇದ್ದರೆ ಇಲ್ಲಿ ಅದನು ತಿದ್ದಿ ಹೇಳ್ರೇ ||೩||

****

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...