Home / ಲೇಖನ / ವಿಜ್ಞಾನ / ಗಾಳಿಯಲ್ಲಿಯ ವಿಷದಿಂದ ಜೀವರಾಶಿಗೆ ಆಪತ್ತು

ಗಾಳಿಯಲ್ಲಿಯ ವಿಷದಿಂದ ಜೀವರಾಶಿಗೆ ಆಪತ್ತು

ಶುದ್ಧವಾದ ಗಾಳಿ ಇದ್ದರೆ ಎಷ್ಟು ವರ್ಷಗಳಾದರೂ ಜೀವರಾಶಿಗಳು ಬದುಕಬಹುದು. ಅದೇ ವಿಷಯುಕ್ತವಾದ ಇಂಗಾಲದ ಡೈ‌ಆಕ್ಸೈಡ್ ಗಾಳಿಯು ಪಸರಿಸಿದರೆ ಇಂಥಹ ಗಾಳಿಯನ್ನು ಸೇವಿಸುವ ಜೀವಿಗಳು ಆತಂಕಕ್ಕೀಡಾಗುತ್ತವೆ. ಇನ್ನೊಂದು ವಿಶೇಷವೆಂದರೆ ಒಂದು ನೆಲೆಯಲ್ಲಿ ವಿಶಯುಕ್ತಗಾಳಿ ಇದ್ದರೆ ಅದು ಬೀಸುತ್ತ ಖಂಡಾಂತರಗೊಂಡು ಬೇರೆ ರಾಷ್ಟ್ರ, ರಾಜ್ಯದ ಜೀವರಾಶಿಗಳಿಗೂ ಆಪತ್ತು ತರಬಲ್ಲದು.

ಸಾಮಾನ್ಯವಾಗಿ ಉಷ್ಣವಲಯದ ನಾಡುಗಳಲ್ಲಿ ಭಾರತವು ಸೇರಿ ಬಳಸುವ ಭಾರಿ ಮಟ್ಟದ ಕೀಟನಾಶಕಗಳು ಗಾಳಿಯೊಡನೆ ಲೀನವಾಗಿ, ಗಾಳಿಯನ್ನು ವಿಷಗೊಳಿಸಿ ಉತ್ತರ ಧೃವ ಪ್ರದೇಶವನ್ನು ಸೇರಿ ನೀರಿನಲ್ಲಿ ಬೆರೆಯುತ್ತವೆ. ಇಂಥಹ ಪರಿಸರದಲ್ಲಿರುವ ಜೀವಿಗಳು ನೀರು, ಮತ್ತು ಗಾಳಿಯ ಸೇವನೆಯಿಂದ ವೇದನೆಯನ್ನು ಪಡಬೇಕಿದೆ. ಕೆನಡಾದ ಉತ್ತರ ಬದಿಯ ಯುಕೋನೀಯ ಲೇಬರ್ಸ್ ಸರೋವರದಲ್ಲಿ ಕೀಟನಾಶಕ ಮತ್ತು ವಿಷದ ಅಂಶ ಸೇರಿ ಕಳವಳಕಾರಿ ಮಟ್ಟವನ್ನು ತಲುಪಿದೆ, ಎಂದು ಇತ್ತೀಚೆಗೆ ಪತ್ತೆಮಾಡಲಾಗಿದೆ. ಈ ಪ್ರದೇಶದಲ್ಲಿ ಕೀಟನಾಶಕ ಅಂಶವನ್ನು ಹಾಕದಿದ್ದರೂ ಆಫ್ರಿಕಾ, ಭಾರತದಂತಹ ದೇಶಗಳ ಕಡೆಯಿಂದ ಉತ್ತರ ಧೃವದತ್ತ ಬೀಸಿದ ಗಾಳಿಯೊಂದಿಗೆ ಸೇರಿಕೊಂಡು ಇಲ್ಲಿ ತನ್ನ ಪರಿಣಾಮವನ್ನು ಬೀರುತ್ತಲಿದೆ.

ಕೆನಡಾದ ಸಂಶೋಧಕರು ಉತ್ತರ ಧೃವ ಪ್ರದೇಶದ ಕಡಲ ನೀರಿನ ಮೇಲ್ಮಟ್ಟದಲಿ ವಿಷಕೀಟನಾಶಕದಂತಹ ಅಂಶಗಳಿರುವುದನ್ನು ಕಂಡು ದಂಗಾಗಿದ್ದಾರೆ. ಈ ಸರೋವರ ಮತ್ತು ಧೃವ ದ ಸುತ್ತ ಮನುಷ್ಯನನ್ನೊಳಗೊಂಡು ೨೦೦ ರಷ್ಟು ಬೇರೆಬೇರೆ ಜೀವರಾಶಿಗಳಿವೆ. ಇಲ್ಲಿಯ ಜೀವರಾಶಿಗಳ ಆಹಾರ ಮೀನು ನೀರು ಮತ್ತು ಮೀನು ಆಹಾರದ ಮೂಲಕ ಈ ಕೀಟನಾಶಕದ ನಂಜು ಸುತ್ತಲ ಪ್ರದೇಶ ಮತ್ತು ಗಾಳಿಬೀಸಿದ ಪ್ರದೇಶಗಳೆಲ್ಲೆಡೆಯಲ್ಲಿ ವಿಷ ನೀಡಿ ಆರೋಗ್ಯವನ್ನು ಹದಗೆಡಿಸುತ್ತಿರುವುದಂತೂ ನಿಜ. ಕೀಟನಾಶಕಗಳಿಂದ ಸಸ್ಯಗಳಿಗೆ ಉಪಕಾರವಾಗಬಹುದೆಂದರೂ ಕೊನೆಗೊಂದು ದಿನ ಆ ಸಸ್ಯವು ಸೇರಿ ಜನ ಸಮುದಾಯಕ್ಕೆ ವಿಷ ಹರಡುತ್ತದೆಂಬುದಂತೂ ಸತ್ಯ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...