Home / ಲೇಖನ / ವಿಜ್ಞಾನ / ಗಾಳಿಯಲ್ಲಿಯ ವಿಷದಿಂದ ಜೀವರಾಶಿಗೆ ಆಪತ್ತು

ಗಾಳಿಯಲ್ಲಿಯ ವಿಷದಿಂದ ಜೀವರಾಶಿಗೆ ಆಪತ್ತು

ಶುದ್ಧವಾದ ಗಾಳಿ ಇದ್ದರೆ ಎಷ್ಟು ವರ್ಷಗಳಾದರೂ ಜೀವರಾಶಿಗಳು ಬದುಕಬಹುದು. ಅದೇ ವಿಷಯುಕ್ತವಾದ ಇಂಗಾಲದ ಡೈ‌ಆಕ್ಸೈಡ್ ಗಾಳಿಯು ಪಸರಿಸಿದರೆ ಇಂಥಹ ಗಾಳಿಯನ್ನು ಸೇವಿಸುವ ಜೀವಿಗಳು ಆತಂಕಕ್ಕೀಡಾಗುತ್ತವೆ. ಇನ್ನೊಂದು ವಿಶೇಷವೆಂದರೆ ಒಂದು ನೆಲೆಯಲ್ಲಿ ವಿಶಯುಕ್ತಗಾಳಿ ಇದ್ದರೆ ಅದು ಬೀಸುತ್ತ ಖಂಡಾಂತರಗೊಂಡು ಬೇರೆ ರಾಷ್ಟ್ರ, ರಾಜ್ಯದ ಜೀವರಾಶಿಗಳಿಗೂ ಆಪತ್ತು ತರಬಲ್ಲದು.

ಸಾಮಾನ್ಯವಾಗಿ ಉಷ್ಣವಲಯದ ನಾಡುಗಳಲ್ಲಿ ಭಾರತವು ಸೇರಿ ಬಳಸುವ ಭಾರಿ ಮಟ್ಟದ ಕೀಟನಾಶಕಗಳು ಗಾಳಿಯೊಡನೆ ಲೀನವಾಗಿ, ಗಾಳಿಯನ್ನು ವಿಷಗೊಳಿಸಿ ಉತ್ತರ ಧೃವ ಪ್ರದೇಶವನ್ನು ಸೇರಿ ನೀರಿನಲ್ಲಿ ಬೆರೆಯುತ್ತವೆ. ಇಂಥಹ ಪರಿಸರದಲ್ಲಿರುವ ಜೀವಿಗಳು ನೀರು, ಮತ್ತು ಗಾಳಿಯ ಸೇವನೆಯಿಂದ ವೇದನೆಯನ್ನು ಪಡಬೇಕಿದೆ. ಕೆನಡಾದ ಉತ್ತರ ಬದಿಯ ಯುಕೋನೀಯ ಲೇಬರ್ಸ್ ಸರೋವರದಲ್ಲಿ ಕೀಟನಾಶಕ ಮತ್ತು ವಿಷದ ಅಂಶ ಸೇರಿ ಕಳವಳಕಾರಿ ಮಟ್ಟವನ್ನು ತಲುಪಿದೆ, ಎಂದು ಇತ್ತೀಚೆಗೆ ಪತ್ತೆಮಾಡಲಾಗಿದೆ. ಈ ಪ್ರದೇಶದಲ್ಲಿ ಕೀಟನಾಶಕ ಅಂಶವನ್ನು ಹಾಕದಿದ್ದರೂ ಆಫ್ರಿಕಾ, ಭಾರತದಂತಹ ದೇಶಗಳ ಕಡೆಯಿಂದ ಉತ್ತರ ಧೃವದತ್ತ ಬೀಸಿದ ಗಾಳಿಯೊಂದಿಗೆ ಸೇರಿಕೊಂಡು ಇಲ್ಲಿ ತನ್ನ ಪರಿಣಾಮವನ್ನು ಬೀರುತ್ತಲಿದೆ.

ಕೆನಡಾದ ಸಂಶೋಧಕರು ಉತ್ತರ ಧೃವ ಪ್ರದೇಶದ ಕಡಲ ನೀರಿನ ಮೇಲ್ಮಟ್ಟದಲಿ ವಿಷಕೀಟನಾಶಕದಂತಹ ಅಂಶಗಳಿರುವುದನ್ನು ಕಂಡು ದಂಗಾಗಿದ್ದಾರೆ. ಈ ಸರೋವರ ಮತ್ತು ಧೃವ ದ ಸುತ್ತ ಮನುಷ್ಯನನ್ನೊಳಗೊಂಡು ೨೦೦ ರಷ್ಟು ಬೇರೆಬೇರೆ ಜೀವರಾಶಿಗಳಿವೆ. ಇಲ್ಲಿಯ ಜೀವರಾಶಿಗಳ ಆಹಾರ ಮೀನು ನೀರು ಮತ್ತು ಮೀನು ಆಹಾರದ ಮೂಲಕ ಈ ಕೀಟನಾಶಕದ ನಂಜು ಸುತ್ತಲ ಪ್ರದೇಶ ಮತ್ತು ಗಾಳಿಬೀಸಿದ ಪ್ರದೇಶಗಳೆಲ್ಲೆಡೆಯಲ್ಲಿ ವಿಷ ನೀಡಿ ಆರೋಗ್ಯವನ್ನು ಹದಗೆಡಿಸುತ್ತಿರುವುದಂತೂ ನಿಜ. ಕೀಟನಾಶಕಗಳಿಂದ ಸಸ್ಯಗಳಿಗೆ ಉಪಕಾರವಾಗಬಹುದೆಂದರೂ ಕೊನೆಗೊಂದು ದಿನ ಆ ಸಸ್ಯವು ಸೇರಿ ಜನ ಸಮುದಾಯಕ್ಕೆ ವಿಷ ಹರಡುತ್ತದೆಂಬುದಂತೂ ಸತ್ಯ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...