Home / ಲೇಖನ / ವಿಜ್ಞಾನ / ತಾಯಿ ಹಾಲಲ್ಲಿ ನಂಜಿನ ಮಿಶ್ರಣ ?!

ತಾಯಿ ಹಾಲಲ್ಲಿ ನಂಜಿನ ಮಿಶ್ರಣ ?!

ತಾಯಿಯ ಹಾಲು ಅಮೃತಕ್ಕೆ ಸಮಾನ. ಬೆಳೆಯುವ ಮಕ್ಕಳು ಈ ಹಾಲನ್ನು ಸೇವಿಸಿ ಭವಿಷತ್ತಿನಲ್ಲಿ ಕಾಯಿಲೆಗಳಿಲ್ಲದೇ ಆರೋಗ್ಯವಾಗಿ ಬದುಕಬಹುದು, ಎಂದು ವೈದ್ಯಲೋಕ ಮನವಿ ಮಾಡಿಕೊಳ್ಳುತ್ತಲೇ ಇದೆ. ಈ ಹಾಲು ತಾಯಿ ಉಣ್ಣುವ ಆಹಾರದಿಂದಲೇ ರಕ್ತವಾಗಿ, ಹಾಲಾಗಿ ಬರುತ್ತದೆಂದ ಮೇಲೆ ಆಹಾರ ಪದಾರ್ಥಗಳು ಶುದ್ಧವಾಗಿರಬೇಕೆಂಬುವುದು ಅಷ್ಟೇ ನಿಜ. ಆದರೆ ಇಂದಿನ ಆಹಾರ, ವಿಷಯುಕ್ತವಾಗಿ ತಾಯಿಯ ಹಾಲಲ್ಲೂ ಸಹಜವಾಗಿ ವಿಷದ ಅಂಶಗಳು ಬರುತ್ತವೆ ಎಂದು ಇತ್ತೀಚಿಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಈ ವಿಷದ ಅಂಶ ಅವ್ಯಕ್ತವಾಗಿ ಸೇರಿಸುವದರಿಂದ ಆಹಾರದ ಗುಣವನ್ನು ಅಳೆಯುವುದು ಕಷ್ಟ ಮತ್ತು ಪ್ರತಿಯೊಬ್ಬ ತಾಯಿಗೂ ಆಹಾರವನ್ನು ವ್ಶೆದ್ಯಕೀಯವಾಗಿ ಪರೀಕ್ಷಿಸಿ ಕೊಡುವುದಂತೂ ಅಸಾಧ್ಯ ಹೀಗಾಗಿ ನಿಷ್ಕಲ್ಮಶವೆಂದು ತಿಳಿದ ತಾಯಿಯ ಹಾಲೇ ವಿಷವಾದಾಗ ಶುದ್ಧತೆ ಹುಡುಕುವುದಾದರೂ ಏಲ್ಲಿ! ಎಂಬುವುದು ನಾಗರೀಕರ ಪ್ರಶ್ನೆ.

ಏಷ್ಯಾ, ಆಫ್ರಿಕಾ, ಲ್ಯಾಟಿನ್, ಅಮೆರಿಕಾ ನಾಡುಗಳಲ್ಲಿ ಕೀಟನಾಶಕಗಳ ಬಳಕೆ ಅತಿಯಾಗಿದ್ದು ಗಾಳಿ ಆ ಅಂಶವನ್ನು ತಳ್ಳಿಕೊಂಡು ಹೋಗಿ ಶುದ್ಧ ಪ್ರದೇಶವನ್ನು ಈಗ ವಿಷಮಯಗೊಳಿಸುತ್ತಲಿದೆ. ಇದು ಆಹಾರದ ಜತೆಯಲ್ಲಿ ಅಥವಾ ನೀರಿನಲ್ಲಿ ಸೇವಿಸುವ ಗಾಳಿಯಲ್ಲಿ ಸೇರಿ ತಾಯಿಯ ಹಾಲಿಗೂ ಪಾದಾರ್ಪಣೆ ಮಾಡಿದೆ. ಈ ಮೂಲಕ ಮಗುವಿಗೆ ಉಣಿಸಲ್ಪಡುತ್ತದೆ. ಹೀಗಾಗಿ ತಾಯಿಯ ಹಾಲೂ ಕೂಡಾ ಕೀಟನಾಶಕ ನಂಜಿನಿಂದ ಮುಕ್ತವಾಗಿಲ್ಲವೆಂದು ವಿಜ್ಞಾನಿಗಳು ಹೇಳುತ್ತಾರೆ.

೧೯೭೭ ರಲ್ಲಿ ಜಪಾನ್, ಅಮೆರಿಕಾದಲ್ಲೆಲ್ಲ ಸಂಶೋಧಿಸಿದಾಗ ತಾಯಿಯ ಹಾಲಿನಲ್ಲಿ ೧,೧೦೦ ರಿಂದ ೧,೫೦೦ ವರೆಗೆ ಪಿ. ಸಿ. ಬಿ. ಕೀಟನಾಶಕದ ನಂಜು ೧,೯೦೦ ರಷ್ಟು ಡಿ.ಡಿ.ಟಿ. ನಂಜು ೨,೫೦೦ ರಷ್ಟು ಬಿ. ಹೆಚ್. ಸಿ. ನಂಜು ಕಂಡು ಬಂದಿತು. ಇಟಲಿ, ಗ್ರೀಸ್, ಕೆನಡಾದ ತಾಯಂದಿರರ ಹಾಲಿನಲ್ಲಿ ಈ ಕೀಟನಾಶಕದ ನಂಜಿನ ಪ್ರಮಾಣ ಕಡಿಮೆ ಎಂದು ಹೇಳಲಾಗುತ್ತದೆ. B.H.C. ನಂಜು ೭ ರಿಂದ ೧೫ ರಷ್ಟು D.D.T. ನಂಜು ೩೫ ರಿಂದ ೪೭ ರಷ್ಟು P.C.B. ನಂಜು ೭೦ರ ವರೆಗಿತ್ತು ಎಂದು ವಿಜ್ಞಾನಿಗಳು ವರದಿ ಮಾಡಿದ್ದಾರೆ. ಅಮೇರಿಕಾದಲ್ಲಿ D.D.T.ಯ ಮೇಲೆ ನಿರ್ಬಂಧವಿರುವುದರಿಂದ ಅಲ್ಲಿಯ ತಾಯಂದಿರರ ಮೇಲೆ ಹಾಲಿನಲ್ಲಿ D.D.T. ಗಿಂತ P.C.B. ನಂಜು ಹೆಚ್ಚಿನ ಪ್ಪಮಾಣದಲ್ಲಿ ಕಂಡು ಬಂದಿದೆ. ಭಾರತದಲ್ಲಿ ೧೯೮೮-೯೯ ಸುಮಾರಿನ ಅಧ್ಯಯನದಂತೆ ತಾಯಿಯ ಹಾಲಿನಲ್ಲಿ ೭೫೦ ರಷ್ಟು B.H.C. ನಂಜು ೩,೭೪೦ ರಷ್ಟು, D.D.T ನಂಜು ಕಂಡು ಬಂದಿದೆ. ಚೀನಾ, ಕೀನ್ಯಾ ಮೆಕ್ಸಿಕೊಗಳ ತಾಯಿಂದಿರರ ಹಾಲಿನಲ್ಲಿ ಈ ನಂಜಿನ ಅಂಶಗಳು ಅಗಾಧ ಪ್ರಮಾಣದಲ್ಲಿ ಇರುವುದರಿಂದ ಅಲ್ಲಿಯ ಮಕ್ಕಳ ಗತಿ ದೇವರೇ ಬಲ್ಲ. ಅಂದರೆ ಇಲ್ಲಿಯ ತಾಯಂದಿರರ ಹಾಲಿನಲ್ಲಿ೬,೬೦೦ ರವರೆಗೆ ನಂಜು ೬,೨೦೦ ರವರೆಗೆ ಇದೆ, ಎಂದು ದೃಢಪಟ್ಟಿದೆ. ಇದು ಅಪಾಯದ ಮಟ್ಟ ಇನ್ನೂ ಏಷ್ಯಾ, ಆಫ್ರಿಕಾ, ಅಮೇರಿಕಾದ ಮಕ್ಕಳು ಕೀಟನಾಶಕ ವಿಷಯುಕ್ತ ಹಾಲನ್ನು ಕುಡಿಯುತ್ತವೆ. ಆದರೆ ಯುರೋಪಿನ ಮಕ್ಕಳು ಅಷ್ಟೇನೂ ನಂಜಿನ ಮಿಶ್ರಣಡ ಹಾಲು ಕುಡಿಯಲಾರಂಭಿಸಿಲ್ಲವೆಂದು ವರದಿ ತಿಳಿಸುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...