Home / ಲೇಖನ / ವಿಜ್ಞಾನ / ಸೂರ್ಯನ ಕಿರಣಗಳಿಂದ ಚಲಿಸುವ ಸ್ಕೂಟರ್

ಸೂರ್ಯನ ಕಿರಣಗಳಿಂದ ಚಲಿಸುವ ಸ್ಕೂಟರ್

ಬೀದಿ ಬೀದಿಯಲ್ಲಿ ವಾಹನಗಳ ಸಂಚಾರದಿಂದಾಗಿ ಮಲಿನ ಹೊಗೆಯಿಂದಾಗಿ ಮೂಗು ಮುಚ್ಚಿಕೊಂಡು ತಿರುಗುವ ಸ್ಥಿತಿ ನಿರ್ಮಾಣವಾಗಿದೆ. ಪರಿಸರಮಾಲಿನ್ಯದಿಂದಾಗಿ ಜನ ನಿಧಾನವಿಷದಿಂದ ತತ್ತರಿಸುತ್ತಿರುವುದು ಸರ್‍ವಸಾಮಾನ್ಯ. ಅದರಲ್ಲೂ ಪೆಟ್ರೋಲ್‌ ಬಳಸುವುದೆಂದರೆ ದುಬಾರಿ ಬೆಲೆ ಬೇರೆ. ಇಂಥದನ್ನೆಲ್ಲ ಹೋಗಲಾಡಿಸಲೆಂದು ವಿದ್ಯುತ್ ಚಾಲಿತ ತಂತ್ರಗಳನ್ನು ತಯಾರಿಸಿದರೆ ವಿದ್ಯುತ್‌ಗೂ ಬರ. ಪದೆಪದೆ ಕೈಕೊಡುವ ವಿದ್ಯುತ್‌ನಿಂದಾಗಿ ಈ ವಿದ್ಯುತ್‌ಚಾಲಿತ ಯಂತ್ರಗಳು ಯಶಸ್ವಿಯಾಗುತ್ತಿಲ್ಲ. ಆದರೀಗ ವಿದ್ಯುತ್ ಇಲ್ಲದ ದುಬಾರಿ ಬೆಲೆಯೂ ಇಲ್ಲದ ಕೇವಲ ಸೂರ್ಯನ ಕಿರಣದಿಂದಲೇ ಗಂಟೆಗೆ ೩೦ ಕಿ.ಮೀ. ವೇಗದಲ್ಲಿ ಚಲಿಸುವ ಸೌರಶಕ್ತಿಯ ಸ್ಕೂಟರ್‌ಗಳು ಮುಂದೆ ಭಾರತೀಯರಿಗೆ ವರದಾನವಾಗಲಿವೆ.

ಲಂಡನ್ನಿನ ಸೌತ್‌ಬ್ಯಾಂಕ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿ ಪಾಲ್‌ಶಾಪಲ್ ಅವರು ಸೌರಶಕ್ತಿಯಿಂದ ಓಡುವ ಸ್ಕೂಟರನ್ನು ತಯಾರಿಸಿದ್ದಾರೆ. ಇಟಲಿಯ ‘ಪಿಯಾಜಿಯೊ’ ಕಂಪನಿಯ ಸಹಯೋಗದಿಂದ ಈ ಸ್ಕೂಟರ್ ತಯಾರಿಸಿರುವ ಶಾಪಲ್ ೧೯೯೬ ನೇ ಸಾಲಿನ “ಪ್ರುಡೆನ್ಸಿಯಲ್ ಬಿಸಿನೆಸ್ ಇನ್ ಪ್ರಾಕ್ಟೀಸ್” ಪ್ರಶಸ್ತಿಯನ್ನು ಸಹ ಗಳಿಸಿದ್ದಾರೆ. ಕೈಗಾರಿಕೆಗಳು ಹಾಗೂ ವಿನ್ಯಾಸಕಾರರ ಸಲಹಾ ಕೇಂದ್ರದಲ್ಲಿ ಉದ್ಯೋಗ ಬಯಸಿ ಬರುವ ಪಧವೀಧರರಾಗಿ ಲಂಡನ್ನಿನಲ್ಲಿ ಏರ್ಪಡಿಸಲಾಗಿದ್ದ ಎಂಜನಿಯರಿಂಗ್ ಪ್ರಾಡಕ್ಟ್-ಡಿಜೈನ್ ಶೋ ನಲ್ಲಿ ಈ ಸೌರಶಕ್ತಿಯ ಸ್ಕೂಟರನ್ನು ಪ್ರದರ್ಶನಕ್ಕಿಡಲಾಗಿತ್ತು.

ಇದಕ್ಕೂ ಮೊದಲು ಶಾಪಲ್ ಸೌರಶಕ್ತಿಯ ಕುಕ್ಕರ್ ಅನ್ನು ವಿನ್ಯಾಸಗೊಳಿಸಿದ್ದರು. ಸ್ಪೇನ್ ಕಂಪನಿಯೊಂದರಲ್ಲಿ ಒಂದು ವರ್ಷಗಳ ಕಾಲ ಈ ಸ್ಕೂಟರ್ ನಿರ್ಮಾಣದ ಕುರಿತು (ಯೋಜನೆ) ಪೂರ್ವಸಿದ್ಧತೆ ಮತ್ತು ಪೂರ್ವ ಕೆಲಸಗಳನ್ನು ಮಾಡುತ್ತಿದ್ದರು. ಸ್ಕೂಟರ್‌ನಲ್ಲಿ ೧೨ ವೊಲ್ಟೇಜ್ ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದ್ದು ಸೂರ್ಯನ ಕಿರಣಗಳಿಂದ ಈ ಬ್ಯಾಟರಿಯ ಶಾಖವನ್ನು ಸಂಗ್ರಹಿಸಿ ಸ್ಕೂಟರ್ ಚಾಲು ಮಾಡಿದಾಗ ಬೇಕಿದ್ದಷ್ಟು ಬಿಡುಗಡೆ ಮಾಡುತ್ತ ಹೋಗುತ್ತದೆ ಮತ್ತು ಗಂಟೆಗೆ ೩೦ ಕಿ.ಮೀ. ವೇಗದಲ್ಲಿ ಚಲಿಸುತ್ತದೆ. ವಾಹನಗಳಿಂದ ಹೊರಬರುವ ಮಲೀನ ಹೊಗೆ ಪರಿಸರವನ್ನು ನಾಶಮಾಡುತ್ತಿರುವ ಈ ಸಂದರ್ಭದಲ್ಲಿ ಪರಿಸರವಾದಿಗಳಿಗೆ ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದ ತತ್ತರಿಸಿದ ಮಧ್ಯಮ ವರ್ಗದ ಜನಕ್ಕೆ ಇದೊಂದು ವಿಶೇಷವಾದ ಸಂತಸ ತರುವ ಸುದ್ದಿಯಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...