Home / ಲೇಖನ / ವಿಜ್ಞಾನ / ಸೂರ್ಯನ ಕಿರಣಗಳಿಂದ ಚಲಿಸುವ ಸ್ಕೂಟರ್

ಸೂರ್ಯನ ಕಿರಣಗಳಿಂದ ಚಲಿಸುವ ಸ್ಕೂಟರ್

ಬೀದಿ ಬೀದಿಯಲ್ಲಿ ವಾಹನಗಳ ಸಂಚಾರದಿಂದಾಗಿ ಮಲಿನ ಹೊಗೆಯಿಂದಾಗಿ ಮೂಗು ಮುಚ್ಚಿಕೊಂಡು ತಿರುಗುವ ಸ್ಥಿತಿ ನಿರ್ಮಾಣವಾಗಿದೆ. ಪರಿಸರಮಾಲಿನ್ಯದಿಂದಾಗಿ ಜನ ನಿಧಾನವಿಷದಿಂದ ತತ್ತರಿಸುತ್ತಿರುವುದು ಸರ್‍ವಸಾಮಾನ್ಯ. ಅದರಲ್ಲೂ ಪೆಟ್ರೋಲ್‌ ಬಳಸುವುದೆಂದರೆ ದುಬಾರಿ ಬೆಲೆ ಬೇರೆ. ಇಂಥದನ್ನೆಲ್ಲ ಹೋಗಲಾಡಿಸಲೆಂದು ವಿದ್ಯುತ್ ಚಾಲಿತ ತಂತ್ರಗಳನ್ನು ತಯಾರಿಸಿದರೆ ವಿದ್ಯುತ್‌ಗೂ ಬರ. ಪದೆಪದೆ ಕೈಕೊಡುವ ವಿದ್ಯುತ್‌ನಿಂದಾಗಿ ಈ ವಿದ್ಯುತ್‌ಚಾಲಿತ ಯಂತ್ರಗಳು ಯಶಸ್ವಿಯಾಗುತ್ತಿಲ್ಲ. ಆದರೀಗ ವಿದ್ಯುತ್ ಇಲ್ಲದ ದುಬಾರಿ ಬೆಲೆಯೂ ಇಲ್ಲದ ಕೇವಲ ಸೂರ್ಯನ ಕಿರಣದಿಂದಲೇ ಗಂಟೆಗೆ ೩೦ ಕಿ.ಮೀ. ವೇಗದಲ್ಲಿ ಚಲಿಸುವ ಸೌರಶಕ್ತಿಯ ಸ್ಕೂಟರ್‌ಗಳು ಮುಂದೆ ಭಾರತೀಯರಿಗೆ ವರದಾನವಾಗಲಿವೆ.

ಲಂಡನ್ನಿನ ಸೌತ್‌ಬ್ಯಾಂಕ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿ ಪಾಲ್‌ಶಾಪಲ್ ಅವರು ಸೌರಶಕ್ತಿಯಿಂದ ಓಡುವ ಸ್ಕೂಟರನ್ನು ತಯಾರಿಸಿದ್ದಾರೆ. ಇಟಲಿಯ ‘ಪಿಯಾಜಿಯೊ’ ಕಂಪನಿಯ ಸಹಯೋಗದಿಂದ ಈ ಸ್ಕೂಟರ್ ತಯಾರಿಸಿರುವ ಶಾಪಲ್ ೧೯೯೬ ನೇ ಸಾಲಿನ “ಪ್ರುಡೆನ್ಸಿಯಲ್ ಬಿಸಿನೆಸ್ ಇನ್ ಪ್ರಾಕ್ಟೀಸ್” ಪ್ರಶಸ್ತಿಯನ್ನು ಸಹ ಗಳಿಸಿದ್ದಾರೆ. ಕೈಗಾರಿಕೆಗಳು ಹಾಗೂ ವಿನ್ಯಾಸಕಾರರ ಸಲಹಾ ಕೇಂದ್ರದಲ್ಲಿ ಉದ್ಯೋಗ ಬಯಸಿ ಬರುವ ಪಧವೀಧರರಾಗಿ ಲಂಡನ್ನಿನಲ್ಲಿ ಏರ್ಪಡಿಸಲಾಗಿದ್ದ ಎಂಜನಿಯರಿಂಗ್ ಪ್ರಾಡಕ್ಟ್-ಡಿಜೈನ್ ಶೋ ನಲ್ಲಿ ಈ ಸೌರಶಕ್ತಿಯ ಸ್ಕೂಟರನ್ನು ಪ್ರದರ್ಶನಕ್ಕಿಡಲಾಗಿತ್ತು.

ಇದಕ್ಕೂ ಮೊದಲು ಶಾಪಲ್ ಸೌರಶಕ್ತಿಯ ಕುಕ್ಕರ್ ಅನ್ನು ವಿನ್ಯಾಸಗೊಳಿಸಿದ್ದರು. ಸ್ಪೇನ್ ಕಂಪನಿಯೊಂದರಲ್ಲಿ ಒಂದು ವರ್ಷಗಳ ಕಾಲ ಈ ಸ್ಕೂಟರ್ ನಿರ್ಮಾಣದ ಕುರಿತು (ಯೋಜನೆ) ಪೂರ್ವಸಿದ್ಧತೆ ಮತ್ತು ಪೂರ್ವ ಕೆಲಸಗಳನ್ನು ಮಾಡುತ್ತಿದ್ದರು. ಸ್ಕೂಟರ್‌ನಲ್ಲಿ ೧೨ ವೊಲ್ಟೇಜ್ ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದ್ದು ಸೂರ್ಯನ ಕಿರಣಗಳಿಂದ ಈ ಬ್ಯಾಟರಿಯ ಶಾಖವನ್ನು ಸಂಗ್ರಹಿಸಿ ಸ್ಕೂಟರ್ ಚಾಲು ಮಾಡಿದಾಗ ಬೇಕಿದ್ದಷ್ಟು ಬಿಡುಗಡೆ ಮಾಡುತ್ತ ಹೋಗುತ್ತದೆ ಮತ್ತು ಗಂಟೆಗೆ ೩೦ ಕಿ.ಮೀ. ವೇಗದಲ್ಲಿ ಚಲಿಸುತ್ತದೆ. ವಾಹನಗಳಿಂದ ಹೊರಬರುವ ಮಲೀನ ಹೊಗೆ ಪರಿಸರವನ್ನು ನಾಶಮಾಡುತ್ತಿರುವ ಈ ಸಂದರ್ಭದಲ್ಲಿ ಪರಿಸರವಾದಿಗಳಿಗೆ ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದ ತತ್ತರಿಸಿದ ಮಧ್ಯಮ ವರ್ಗದ ಜನಕ್ಕೆ ಇದೊಂದು ವಿಶೇಷವಾದ ಸಂತಸ ತರುವ ಸುದ್ದಿಯಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...