Home / ಲೇಖನ / ವಿಜ್ಞಾನ / ತಿಂಡಿ ತಿಂದ ತಕ್ಷಣ ಟೀ, ಕಾಫಿ ಕುಡಿಯಬಾರದು

ತಿಂಡಿ ತಿಂದ ತಕ್ಷಣ ಟೀ, ಕಾಫಿ ಕುಡಿಯಬಾರದು

ಸಾಮಾನ್ಯವಾಗಿ ಎಲ್ಲರೂ ತಿಂಡಿ ತಿಂದ ಮೇಲೆ ಟೀ, ಕಾಫಿ ಕುಡಿಯುವ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ. ಈ ಅಭ್ಯಾಸವು ಒಂದು ರೂಢಿಯಾಗಿಯೇ ಮಾರ್ಪಟ್ಟಿದೆ. ಕೆಲವರಂತೂ ತಿಂಡಿ ತಿನ್ನುತ್ತಲೇ ಟೀಯನ್ನೋ ಕಾಫಿಯನ್ನೋ ಕುಡಿಯುತ್ತಲೇ ತಿಂದು ಮುಗಿಸುತ್ತಾರೆ. ಈ ರೂಢಿಯಿಂದಾಗಿ ಆರೋಗ್ಯದ ಮೇಲೆ ಅನೇಕ ವ್ಯತೀರೀಕ ಪರಿಣಾಮವುಂಟಾಗುತ್ತದೆ, ಎಂದು ಸಂಶೋಧಕರು ಹೇಳುತ್ತಾರೆ.

ದೇಹದಲ್ಲಿ ಕಬ್ಬಿಣದ ಅಂಶ ಕಡಿಮೆಯಾದಾಗ ರಕ್ತಹೀನತೆ ಉಂಟಾಗುತ್ತದೆ. ಶೇ. ೫೦ ರಷ್ಟು ಜನಕ್ಕೆ ಈ ರಕ್ತಹೀನತೆ ಕಂಡು ಬಂದಿದೆ. ನಾವು ಸೇವಿಸುವ ಆಹಾರದಲ್ಲಿ ಸಾಕಷ್ಟು ಕಬ್ಬಿಣದ ಅಂಶ ಇದ್ದರೂ ಜೀರ್ಣನಾಳ (ಕರುಳುಗಳು) ಈ ಕಬ್ಬಿಣದ ಅಂಶವನ್ನು ಸಮರ್ಪಕವಾಗಿ ಹೀರಿಕೊಳ್ಳುವುದಿಲ್ಲ. ಈ ಹೀರಿಕೊಳ್ಳುವಲ್ಲಿ ಅಡ್ಡಿಪಡಿಸುವ ಅಂಶವೇ ನಾವು ಕಾಫಿ ಟೀಗಳನ್ನು ತಿಂಡಿಯ ನಂತರ ನಡುವೆ ಕುಡಿಯುತ್ತ ಹೋಗುವುದರಿಂದ ಆಗುತ್ತದೆ. ಈ ಟೀ ಕಾಫಿಯಲ್ಲಿರುವ ‘ಟ್ಯಾನಿನ್’ ಎಂಬ ಪದಾರ್ಥವು ಕಬ್ಬಿಣಾಂಶದ ಹೀರುವಿಕೆಯನ್ನು ತಡೆಗಟ್ಟುತ್ತದೆ. ದಕ್ಷಿಣ ಭಾರತೀಯರು ಸೇವಿಸುವ ಯಾವುದೇ ತಿಂಡಿಯಿಂದ ಕರಳು ೦.೪ ಮಿ.ಗ್ರಾಂ. ಕಬ್ಬಿಣಾಂಶವನ್ನು ಹೀರಿಕೊಳ್ಳುತ್ತದೆ. ರಕ್ತಹೀನತೆಯನ್ನು ಪ್ರತಿಬಂಧಿಸಲು ಪ್ರತಿಯೊಬ್ಬರಿಗೆ ನಿತ್ಯ ಒಂದು ಮಿ.ಗ್ರಾಂ. ಕಬ್ಬಿಣಾಂಶದ ಅಗತ್ಯವಿದೆ. ಈ ಲೆಕ್ಕಾಚಾರದಂತೆ ನಮಗೆ ನಮ್ಮ ನಿತ್ಯದ ತಿಂಡಿಯಿಂದಲೇ ಸಾಕಷ್ಟು ಕಬ್ಬಿಣಾಂಶದ ದೊರಕುತ್ತದೆ. ಕಾಫಿ, ಟೀಯಲ್ಲಿ ಇರುವ ‘ಟ್ಯಾನಿನ್’ ಎಂಬ ಪದಾರ್ಥ ಕಬ್ಬಿಣಾಂಶದ ಹೀರುವಿಕೆಗೆ ತೊಡರುಗಾಲು ಹಾಕುತ್ತದೆ. ಹೀಗಾಗಿ ತಿಂಡಿ ತಿಂದ ತಕ್ಷಣ ಕಾಫಿ ಕುಡಿದರೆ ಕರಳು ಕೇವಲ ೦.೨ ಮಿ.ಗ್ರಾಂ. ಕಬ್ಬಿಣಾಂಶವನ್ನು ಹೀರಲು ಶಕ್ಯವಾಗುತ್ತದೆ. ಟೀ ಕುಡಿದರೆ ಕಬ್ಬಿಣಾಂಶದ ಹೀರುವಿಕೆಯ ಪ್ರಮಾಣ ೦.೧ ಮಿ.ಗ್ರಾಂ ಗೆ ಇಳಿಯುತ್ತದೆ. ಏಕೆಂದರೆ ಟೀಯಲ್ಲಿ ಕಾಫಿಯಲ್ಲಿರುವುದಕ್ಕಿಂತ ಹೆಚ್ಚು ಟ್ಯಾನಿನ್ ಇರುತ್ತದೆ.

ವೈಜ್ಞಾನಿಕ ವಾಸ್ತವತೆ ಹೀಗಿರುವಾಗ ತಿಂಡಿತಿಂದ ತಕ್ಷಣ, ನಡುನಡುವೆ ಕಾಫಿ, ಟೀ ಕುಡಿಯುವುದು ಒಳ್ಳೆಯದಲ್ಲ. ಹಾಗೆಂದ ಮಾತ್ರಕ್ಕೆ ತಿಂಡಿಯನ್ನೇನು ಬಿಡುವ ಅಗತ್ಯವಿಲ್ಲ. ಅದೇ ವಿಜ್ಞಾನಿಗಳು ಹೇಳುವ ಪ್ರಕಾರ ತಿಂಡಿ ತಿಂದ ಮೇಲೆ ಕಾಫಿ, ಟೀ ಕುಡಿಯದಿದ್ದರೆ ಸಮಾಧಾನವೆ ಇರುವುದಿಲ್ಲ ಎನ್ನುವವರಿಗೆ ಒಂದು ಮಾರ್ಗೋಪಾಯ ಹೇಳಿದ್ದಾರೆ. ಅಂದರೆ ತಿಂಡಿ ತಿಂದ ಅರ್ಧಗಂಟೆಯ ನಂತರ ಕಾಫಿ ಟೀ ಕುಡಿದರೆ ಕರುಳುಗಳ ಮೇಲೆ ‘ಟ್ಯಾನಿನ್’ ಪ್ರಭಾವ ಬೀರಲಾರದು; ಎಂದು ಹೇಳಿದ್ದಾರೆ. ಇದೇ ವಿಜ್ಞಾನಿಗಳು ಕಬ್ಬಿಣದ ಅಂಶವನ್ನು ವೃದ್ದಿಸುವ ‘ಸಿ’ ಜೀವಸತ್ವವುಳ್ಳ ಮೋಸುಂಬೆ, ನಿಂಬೆ, ಇತರ ಪೇಯಗಳನ್ನು ತಿಂಡಿ ತಿಂದ ನಂತರ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ, ವರ್ಧಿಸುತ್ತದೆ, ಎಂಬುವುದನ್ನು ಕಂಡು ಹಿಡಿದಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...