Home / ಲೇಖನ / ವಿಜ್ಞಾನ / ತಿಂಡಿ ತಿಂದ ತಕ್ಷಣ ಟೀ, ಕಾಫಿ ಕುಡಿಯಬಾರದು

ತಿಂಡಿ ತಿಂದ ತಕ್ಷಣ ಟೀ, ಕಾಫಿ ಕುಡಿಯಬಾರದು

ಸಾಮಾನ್ಯವಾಗಿ ಎಲ್ಲರೂ ತಿಂಡಿ ತಿಂದ ಮೇಲೆ ಟೀ, ಕಾಫಿ ಕುಡಿಯುವ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ. ಈ ಅಭ್ಯಾಸವು ಒಂದು ರೂಢಿಯಾಗಿಯೇ ಮಾರ್ಪಟ್ಟಿದೆ. ಕೆಲವರಂತೂ ತಿಂಡಿ ತಿನ್ನುತ್ತಲೇ ಟೀಯನ್ನೋ ಕಾಫಿಯನ್ನೋ ಕುಡಿಯುತ್ತಲೇ ತಿಂದು ಮುಗಿಸುತ್ತಾರೆ. ಈ ರೂಢಿಯಿಂದಾಗಿ ಆರೋಗ್ಯದ ಮೇಲೆ ಅನೇಕ ವ್ಯತೀರೀಕ ಪರಿಣಾಮವುಂಟಾಗುತ್ತದೆ, ಎಂದು ಸಂಶೋಧಕರು ಹೇಳುತ್ತಾರೆ.

ದೇಹದಲ್ಲಿ ಕಬ್ಬಿಣದ ಅಂಶ ಕಡಿಮೆಯಾದಾಗ ರಕ್ತಹೀನತೆ ಉಂಟಾಗುತ್ತದೆ. ಶೇ. ೫೦ ರಷ್ಟು ಜನಕ್ಕೆ ಈ ರಕ್ತಹೀನತೆ ಕಂಡು ಬಂದಿದೆ. ನಾವು ಸೇವಿಸುವ ಆಹಾರದಲ್ಲಿ ಸಾಕಷ್ಟು ಕಬ್ಬಿಣದ ಅಂಶ ಇದ್ದರೂ ಜೀರ್ಣನಾಳ (ಕರುಳುಗಳು) ಈ ಕಬ್ಬಿಣದ ಅಂಶವನ್ನು ಸಮರ್ಪಕವಾಗಿ ಹೀರಿಕೊಳ್ಳುವುದಿಲ್ಲ. ಈ ಹೀರಿಕೊಳ್ಳುವಲ್ಲಿ ಅಡ್ಡಿಪಡಿಸುವ ಅಂಶವೇ ನಾವು ಕಾಫಿ ಟೀಗಳನ್ನು ತಿಂಡಿಯ ನಂತರ ನಡುವೆ ಕುಡಿಯುತ್ತ ಹೋಗುವುದರಿಂದ ಆಗುತ್ತದೆ. ಈ ಟೀ ಕಾಫಿಯಲ್ಲಿರುವ ‘ಟ್ಯಾನಿನ್’ ಎಂಬ ಪದಾರ್ಥವು ಕಬ್ಬಿಣಾಂಶದ ಹೀರುವಿಕೆಯನ್ನು ತಡೆಗಟ್ಟುತ್ತದೆ. ದಕ್ಷಿಣ ಭಾರತೀಯರು ಸೇವಿಸುವ ಯಾವುದೇ ತಿಂಡಿಯಿಂದ ಕರಳು ೦.೪ ಮಿ.ಗ್ರಾಂ. ಕಬ್ಬಿಣಾಂಶವನ್ನು ಹೀರಿಕೊಳ್ಳುತ್ತದೆ. ರಕ್ತಹೀನತೆಯನ್ನು ಪ್ರತಿಬಂಧಿಸಲು ಪ್ರತಿಯೊಬ್ಬರಿಗೆ ನಿತ್ಯ ಒಂದು ಮಿ.ಗ್ರಾಂ. ಕಬ್ಬಿಣಾಂಶದ ಅಗತ್ಯವಿದೆ. ಈ ಲೆಕ್ಕಾಚಾರದಂತೆ ನಮಗೆ ನಮ್ಮ ನಿತ್ಯದ ತಿಂಡಿಯಿಂದಲೇ ಸಾಕಷ್ಟು ಕಬ್ಬಿಣಾಂಶದ ದೊರಕುತ್ತದೆ. ಕಾಫಿ, ಟೀಯಲ್ಲಿ ಇರುವ ‘ಟ್ಯಾನಿನ್’ ಎಂಬ ಪದಾರ್ಥ ಕಬ್ಬಿಣಾಂಶದ ಹೀರುವಿಕೆಗೆ ತೊಡರುಗಾಲು ಹಾಕುತ್ತದೆ. ಹೀಗಾಗಿ ತಿಂಡಿ ತಿಂದ ತಕ್ಷಣ ಕಾಫಿ ಕುಡಿದರೆ ಕರಳು ಕೇವಲ ೦.೨ ಮಿ.ಗ್ರಾಂ. ಕಬ್ಬಿಣಾಂಶವನ್ನು ಹೀರಲು ಶಕ್ಯವಾಗುತ್ತದೆ. ಟೀ ಕುಡಿದರೆ ಕಬ್ಬಿಣಾಂಶದ ಹೀರುವಿಕೆಯ ಪ್ರಮಾಣ ೦.೧ ಮಿ.ಗ್ರಾಂ ಗೆ ಇಳಿಯುತ್ತದೆ. ಏಕೆಂದರೆ ಟೀಯಲ್ಲಿ ಕಾಫಿಯಲ್ಲಿರುವುದಕ್ಕಿಂತ ಹೆಚ್ಚು ಟ್ಯಾನಿನ್ ಇರುತ್ತದೆ.

ವೈಜ್ಞಾನಿಕ ವಾಸ್ತವತೆ ಹೀಗಿರುವಾಗ ತಿಂಡಿತಿಂದ ತಕ್ಷಣ, ನಡುನಡುವೆ ಕಾಫಿ, ಟೀ ಕುಡಿಯುವುದು ಒಳ್ಳೆಯದಲ್ಲ. ಹಾಗೆಂದ ಮಾತ್ರಕ್ಕೆ ತಿಂಡಿಯನ್ನೇನು ಬಿಡುವ ಅಗತ್ಯವಿಲ್ಲ. ಅದೇ ವಿಜ್ಞಾನಿಗಳು ಹೇಳುವ ಪ್ರಕಾರ ತಿಂಡಿ ತಿಂದ ಮೇಲೆ ಕಾಫಿ, ಟೀ ಕುಡಿಯದಿದ್ದರೆ ಸಮಾಧಾನವೆ ಇರುವುದಿಲ್ಲ ಎನ್ನುವವರಿಗೆ ಒಂದು ಮಾರ್ಗೋಪಾಯ ಹೇಳಿದ್ದಾರೆ. ಅಂದರೆ ತಿಂಡಿ ತಿಂದ ಅರ್ಧಗಂಟೆಯ ನಂತರ ಕಾಫಿ ಟೀ ಕುಡಿದರೆ ಕರುಳುಗಳ ಮೇಲೆ ‘ಟ್ಯಾನಿನ್’ ಪ್ರಭಾವ ಬೀರಲಾರದು; ಎಂದು ಹೇಳಿದ್ದಾರೆ. ಇದೇ ವಿಜ್ಞಾನಿಗಳು ಕಬ್ಬಿಣದ ಅಂಶವನ್ನು ವೃದ್ದಿಸುವ ‘ಸಿ’ ಜೀವಸತ್ವವುಳ್ಳ ಮೋಸುಂಬೆ, ನಿಂಬೆ, ಇತರ ಪೇಯಗಳನ್ನು ತಿಂಡಿ ತಿಂದ ನಂತರ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ, ವರ್ಧಿಸುತ್ತದೆ, ಎಂಬುವುದನ್ನು ಕಂಡು ಹಿಡಿದಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...