Home / ಲೇಖನ / ಇತರೆ / ರಸ್ತೆಗಿಳಿಯಲಿದೆ ೫ ಕೋಟಿಯ ‘ಮೇಬ್ಯಾಚ್’ ಕಾರು

ರಸ್ತೆಗಿಳಿಯಲಿದೆ ೫ ಕೋಟಿಯ ‘ಮೇಬ್ಯಾಚ್’ ಕಾರು

ಈ ಕಾರು ಇನ್ನು ೬ ತಿಂಗಳಲ್ಲಿ ಭಾರತೀಯ ಹೆದ್ದಾರಿಗಳಲ್ಲಿ ಚಲಿಸಲಿದೆ. ಡೈಮ್ಲರ್ ಕ್ರೈಸೃರ್ ಕಂಪನಿ ಮರ್ಸಿಡಿಸ್‌ಬೆಂಜ್ ಕಾರುಗಳ ತಯಾರಿಕೆಗೆ ಪ್ರಸಿದ್ಧವಾಗಿದೆ. ಈ ಕಂಪನಿಯು ಪ್ರತಿವರ್ಷ ಕೇವಲ ೧,೦೦೦ ಮೇಬ್ಯಾಚ್‍ಗಳನ್ನು ಉತ್ಪಾದಿಸಬೇಕೆಂದು ಮಿತಿಹಾಕಿ ಕೊಂಡಿದೆ. ಆದರೆ ಈ ಕಾರಿನಲ್ಲಿ ೫ ಕೋಟಿ ಬೆಲೆ ಬಾಳುವಂಥಾದ್ದೇನಿದೆ ಎಂಬ ಪ್ಪಶ್ನೆ ಸಾಮಾನ್ಯವಾಗಿ ಮೂಡುತಿದೆ. ಹಾಗಾದರೆ ನೋಡಿ – ಇದರಲ್ಲಿಯ ಆಂತರೀಕ ವಿನ್ಯಾಸಗಳನ್ನು ೨೦ ವಿಧಗಳಲ್ಲಿ ಬದಲಿಸಬಹುದು. ಬಳಸಲಾಗುವ ಚರ್ಮಕ್ಕೆ ವಿವಿಧ ಆಯ್ಕೆಗಳಿವೆ. ಮರದಲ್ಲಿ೩ ವಿಧ ಮತ್ತು ಬಾಹ್ಯ ಬಣ್ಣದಲ್ಲಿ ೧೭ ವಿಧಗಳಲ್ಲಿ ಆಯ್ಕೆಮಾಡಿಕೊಳ್ಳಬಹುದು. ಎರಡು ಡಜನ್‌ಗೂ ಹೆಚ್ಚು ಆಧುನಿಕ ತಾಂತ್ರಿಕ ಐಷಾರಾಮವನ್ನು ಒಳಗೊಂಡಿದೆ. ಸೀಟ್‌ಗಳಲ್ಲಿಯೇ ವೆಂಟಿಲೇಷನ್ ಇದೆ, ೨.೬೮ ಮೀಟರ್ ಒಳಭಾಗದಲ್ಲಿ ಮಲ್ಟಿಪಲ್ ಡಿ.ವಿ.ಡಿ. ಪ್ಲೇಯರ್ಗಳಿವೆ. ಒಂದು ಟಿ.ವಿ. ಒಂದು ಪ್ರಿಜ್, ಎರಡು ಹ್ಯಾಂಡ್‌ಸಟ್‌ಗಳು ಕಾರ್ಡ್‌ಲೆಸ್ ಫೋನ್‌ಗಳಿವೆಯಲ್ಲದೇ ಬೆಳಕಿಗೆ ಬಣ್ಣಬದಲಿಸಬಲ್ಲ ಮೇಲ್ಚಾವಣಿ, ವಿಶೇಷ ಅಳತೆಯ ಲಗೇಜ್‌ಸೆಟ್, ವಿಶಿಷ್ಟ ಗಾಲ್ಫ್ ಬ್ಯಾಗ್, ಇವೆಲ್ಲವೂ ಮೆಬ್ಯಾಚ್ ವೈಶಿಷ್ಟತೆಯ ಕೆಲವು ಅಂಶಗಳು. ೫೫೧೩ ಸಿ.ಸಿ. ೫೫೦ ಬಿ.ಹೆಚ್.ಪಿ. ಮತ್ತು ಟ್ವಿನ್‌ಟರ್ಬೋದ ಈ ಪೆಟ್ರೋಲ್ ಕಾರು ಕೇವಲ ೫.೪ ಸೆಕೆಂಡುಗಳಲ್ಲಿ ೧೦೦ ಕಿ.ಮೀ. ವೇಗದಲ್ಲಿಚಲಿಸುತ್ತದೆ! ಗರಿಷ್ಟವೆಂದರೂ ಗಂಟೆಗೆ ೨೫೦ ಕಿ.ಮೀ. ವೇಗದಲ್ಲಿ ಓಡಬಲ್ಲದು. ಈ ಕಾರಿನಲ್ಲಿರುವವರ ಸುರಕ್ಷತೆಗಾಗಿ ಅನೇಕ ವ್ಯವಸೆಗಳಿದ್ದು ಅದರಲಿ ೧೦ ಏರ್‌ಬ್ಯಾಗ್‌ಗಳ ವ್ಯವಸ್ಥೆ ಇದೆ. ಇಂಥಹ ಅತ್ಯಮೂಲ್ಯವಾದ ಅದ್ಭುತ ಕಾರನ್ನು (ನಮ್ಮ ದೇಶದಲ್ಲಿ) ಯಾರು ಖರೀದಿಸಬಲ್ಲರು, ಯಾರು ಒಳಗೆ ಕುಳಿತು ಐಷಾರಾಮಿಗಳಾಗಬಲ್ಲರು, ಯಾರು ಬಳೆಸಬಲ್ಲರು ಎಂಬುವುದು ಕೆಲವೇ ದಿನಗಳಲ್ಲಿ ತಿಳಿಯುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...