Home / ಲೇಖನ / ಇತರೆ / ರಸ್ತೆಗಿಳಿಯಲಿದೆ ೫ ಕೋಟಿಯ ‘ಮೇಬ್ಯಾಚ್’ ಕಾರು

ರಸ್ತೆಗಿಳಿಯಲಿದೆ ೫ ಕೋಟಿಯ ‘ಮೇಬ್ಯಾಚ್’ ಕಾರು

ಈ ಕಾರು ಇನ್ನು ೬ ತಿಂಗಳಲ್ಲಿ ಭಾರತೀಯ ಹೆದ್ದಾರಿಗಳಲ್ಲಿ ಚಲಿಸಲಿದೆ. ಡೈಮ್ಲರ್ ಕ್ರೈಸೃರ್ ಕಂಪನಿ ಮರ್ಸಿಡಿಸ್‌ಬೆಂಜ್ ಕಾರುಗಳ ತಯಾರಿಕೆಗೆ ಪ್ರಸಿದ್ಧವಾಗಿದೆ. ಈ ಕಂಪನಿಯು ಪ್ರತಿವರ್ಷ ಕೇವಲ ೧,೦೦೦ ಮೇಬ್ಯಾಚ್‍ಗಳನ್ನು ಉತ್ಪಾದಿಸಬೇಕೆಂದು ಮಿತಿಹಾಕಿ ಕೊಂಡಿದೆ. ಆದರೆ ಈ ಕಾರಿನಲ್ಲಿ ೫ ಕೋಟಿ ಬೆಲೆ ಬಾಳುವಂಥಾದ್ದೇನಿದೆ ಎಂಬ ಪ್ಪಶ್ನೆ ಸಾಮಾನ್ಯವಾಗಿ ಮೂಡುತಿದೆ. ಹಾಗಾದರೆ ನೋಡಿ – ಇದರಲ್ಲಿಯ ಆಂತರೀಕ ವಿನ್ಯಾಸಗಳನ್ನು ೨೦ ವಿಧಗಳಲ್ಲಿ ಬದಲಿಸಬಹುದು. ಬಳಸಲಾಗುವ ಚರ್ಮಕ್ಕೆ ವಿವಿಧ ಆಯ್ಕೆಗಳಿವೆ. ಮರದಲ್ಲಿ೩ ವಿಧ ಮತ್ತು ಬಾಹ್ಯ ಬಣ್ಣದಲ್ಲಿ ೧೭ ವಿಧಗಳಲ್ಲಿ ಆಯ್ಕೆಮಾಡಿಕೊಳ್ಳಬಹುದು. ಎರಡು ಡಜನ್‌ಗೂ ಹೆಚ್ಚು ಆಧುನಿಕ ತಾಂತ್ರಿಕ ಐಷಾರಾಮವನ್ನು ಒಳಗೊಂಡಿದೆ. ಸೀಟ್‌ಗಳಲ್ಲಿಯೇ ವೆಂಟಿಲೇಷನ್ ಇದೆ, ೨.೬೮ ಮೀಟರ್ ಒಳಭಾಗದಲ್ಲಿ ಮಲ್ಟಿಪಲ್ ಡಿ.ವಿ.ಡಿ. ಪ್ಲೇಯರ್ಗಳಿವೆ. ಒಂದು ಟಿ.ವಿ. ಒಂದು ಪ್ರಿಜ್, ಎರಡು ಹ್ಯಾಂಡ್‌ಸಟ್‌ಗಳು ಕಾರ್ಡ್‌ಲೆಸ್ ಫೋನ್‌ಗಳಿವೆಯಲ್ಲದೇ ಬೆಳಕಿಗೆ ಬಣ್ಣಬದಲಿಸಬಲ್ಲ ಮೇಲ್ಚಾವಣಿ, ವಿಶೇಷ ಅಳತೆಯ ಲಗೇಜ್‌ಸೆಟ್, ವಿಶಿಷ್ಟ ಗಾಲ್ಫ್ ಬ್ಯಾಗ್, ಇವೆಲ್ಲವೂ ಮೆಬ್ಯಾಚ್ ವೈಶಿಷ್ಟತೆಯ ಕೆಲವು ಅಂಶಗಳು. ೫೫೧೩ ಸಿ.ಸಿ. ೫೫೦ ಬಿ.ಹೆಚ್.ಪಿ. ಮತ್ತು ಟ್ವಿನ್‌ಟರ್ಬೋದ ಈ ಪೆಟ್ರೋಲ್ ಕಾರು ಕೇವಲ ೫.೪ ಸೆಕೆಂಡುಗಳಲ್ಲಿ ೧೦೦ ಕಿ.ಮೀ. ವೇಗದಲ್ಲಿಚಲಿಸುತ್ತದೆ! ಗರಿಷ್ಟವೆಂದರೂ ಗಂಟೆಗೆ ೨೫೦ ಕಿ.ಮೀ. ವೇಗದಲ್ಲಿ ಓಡಬಲ್ಲದು. ಈ ಕಾರಿನಲ್ಲಿರುವವರ ಸುರಕ್ಷತೆಗಾಗಿ ಅನೇಕ ವ್ಯವಸೆಗಳಿದ್ದು ಅದರಲಿ ೧೦ ಏರ್‌ಬ್ಯಾಗ್‌ಗಳ ವ್ಯವಸ್ಥೆ ಇದೆ. ಇಂಥಹ ಅತ್ಯಮೂಲ್ಯವಾದ ಅದ್ಭುತ ಕಾರನ್ನು (ನಮ್ಮ ದೇಶದಲ್ಲಿ) ಯಾರು ಖರೀದಿಸಬಲ್ಲರು, ಯಾರು ಒಳಗೆ ಕುಳಿತು ಐಷಾರಾಮಿಗಳಾಗಬಲ್ಲರು, ಯಾರು ಬಳೆಸಬಲ್ಲರು ಎಂಬುವುದು ಕೆಲವೇ ದಿನಗಳಲ್ಲಿ ತಿಳಿಯುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...