Home / ಲೇಖನ / ವಿಜ್ಞಾನ / ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಸಾಮಾನ್ಯವಾಗಿ ಹೊರಗಡೆ ಹೆಣ್ಣುಮಕ್ಕಳು ಸ್ವತಂತ್ರವಾಗಿ ತಿರುಗಾಡುವಾಗ ಪುಂಡಪೋಕರಿಗಳ ಭಯ, ಕಳ್ಳಕಾಕರಭಯ ಇದ್ದೇ ಇರುತ್ತದೆ. ಸ್ವತಂತ್ರ ದೇಶದಲ್ಲಿ ಅತಂತ್ರವಾದ ಈ ಅಬಲೆಯರ ಸ್ಥಿತಿಯನ್ನು ಕಂಡೇ ಅನೇಕ ಕಡೆ ಕರಾಟೆ, ಕುಂಗಫೂಗಳನ್ನು ಕಲಿಸಿ ಇವರಿಂದ ರಕ್ಷಿಸಿಕೊಳ್ಳುವ ವಿಧಾನಗಳನ್ನು ಕಂಡುಕೊಳ್ಳಲಾಯಿತು. ಒಂದಕ್ಕಿಂತಲೂ ಹೆಚ್ಚು ಅಪಾಯಕಾರಿ ಜನ ಒಂಟಿ ಮಹಿಳೆಯ ಮೇಲೆ ಆಕ್ರಮಣ ಮಾಡಿದಾಗ ತನ್ನನ್ನು ರಕ್ಷಿಸಿಕೊಳ್ಳಲು ಒಂದು ಹೊಸ ಅಸ್ತ್ರವನ್ನು ನಮ್ಮ ಬೆಂಗಳೂರಿನವರೇ ಆದ ರಾಣಾಸಿಂಗ್ ಎಂಬುವವರು ಕಂಡು ಹಿಡಿದರು. ತಮ್ಮ ‘ಆಕ್ಸ್‌ಗ್ಲೋಮ್ ’, ಸಂಸ್ಥೆಯಿಂದ ಇಂಥಹ ಅಸ್ತ್ರಗಳು ಈಗಾಗಲೇ ಅಸಂಖ್ಯವಾಗಿ ಸೃಷ್ಟಿಯಾಗುತ್ತವೆ. ಈಗಾಗಲೇ ಅಮೇರಿಕಾದಂತಹ ರಾಷ್ಟ್ರಗಳಲ್ಲಿ ಪ್ರತಿ ಪೋಲಿಸರ ಕೈಯಲ್ಲಿ ಕಳ್ಳರನ್ನು, ವಂಚಕರನ್ನು ಏಕಾಂಗಿಯಾಗಿ ಸದೆಬಡಿಯಲು ಇಂಥಹ ಅಸ್ತ್ರಗಳಿರುತ್ತವೆ. ಇದು ಸೊಂಟಕ್ಕೆ ಸಿಕ್ಕಿಸಿಕೊಳ್ಳಬಹುದಾದಷ್ಟು ಸಣ್ಣದಾದ ಡಬ್ಬಿ, ಕೈಯಲ್ಲಿ ಸುಲಭವಾಗಿ ಹಿಡಿದುಕೊಳ್ಳಬಹುದಾದ ಅಸ್ತ್ರ ಇದಾಗಿದೆ. ಇದನ್ನು ಬಳೆಸಲು ಕಾನೂನು ಸಮ್ಮತಿಯನ್ನು ಕೂಡ ಪಡೆಯಲಾಗಿದೆ. ಹೆಚ್ಚಾಗಿ ಒಂಟಿ ಮಹಿಳೆಯರು, ಕಾಲೇಜು ಹುಡುಗಿಯರಿಗಾಗಿ ಇದನ್ನು ರೂಪಿಸಲಾಗಿದೆ. ಇಂಥಹ ವೈಶಿಷ್ಟ್ಯ ಪೂರ್ಣವಾದ ಅಸ್ತ್ರದ ಹೆಸರು ‘ಕೊಬ್ರಾ’ ಹಾಗಾದರೆ ಈ ಕೊಬ್ರಾದಲ್ಲಿ ಏನಿದೆ? ಇದೊಂದು ಸಣ್ಣಡಬ್ಬಿಯಾಗಿದ್ದು ಖಾರದಪುಡಿಯನ್ನು ಎರಚುವ (ಸ್ಪ್ರೇ ಮಾಡುವ) ಅಸ್ತ್ರ.

ಖಾರದ ಮೆಣಸಿನ ಕಾಯಿಗಾಗಿ ಪ್ರಸಿದ್ಧಿಯಾದ ಆಂಧ್ರಪ್ರದೇಶದಿಂದ ತರಿಸಿದ ಖಾರದಪುಡಿಯನ್ನು ಈ ಉಪಕರಣದಲ್ಲಿ ತುಂಬಲಾಗುತ್ತದೆ. ಅತಿ ಖಾರಕ್ಕೆ ಕಾರಣವಾಗಿರುವ ‘ಓಲಿಯಾರೆಸಿನ್ ಕ್ಯಾಪ್ಲಿಯನಿನ್’, ಎಂಬ ಸಾರವನ್ನು ಇದರಲ್ಲಿ ಸೇರಿಸಲಾಗಿದೆ. ಇಂಥಹ ಸಣ್ಣ ಹಿಡಿದುಕೊಳ್ಳಲು ಅನುವು ಇರುವ ಈ ಸಣ್ಣ ಡಬ್ಬಿಯನ್ನು ಸೊಂಟಕ್ಕೆ ಕಾಣದಂತೆ ಕಟ್ಟಿಕೊಳ್ಳಬಹುದು. ದುಷ್ಟರು ದಾಳಿ ನಡೆಸಿದಾಗ ಅವರ ಮೇಲೆ ಒಂದೇ ಒಂದು ಸಲ ಸ್ಪ್ರೇ ಮಾಡಿದರೆ ಸಾಕು ಆ ದುಷ್ಟರ ಕಣ್ಣುಗಳಲ್ಲಿ ವಿಪರೀತ ಉರಿವುಂಟಾಗುತ್ತದೆ. ಮೂಗು ಮುಖ ಕೂಡ ನೋವಿಗೊಳಗಾಗುತ್ತದೆ. ಆತ ತಕ್ಷಣ ಕುರುಡನಾಗುತ್ತಾನೆ. (ತಾತ್ಕಾಲಿಕವಾಗಿ) ಈ ಉರಿತ ಕನಿಷ್ಟ ಎರಡು ಗಂಟೆಗಳ ಕಾಲ ಈ ಪರಿಣಾಮ ಇರುತ್ತದೆ. ಆಗ ಆ ವ್ಯಕ್ತಿ ನಿಂತನೆಲದಲ್ಲಿಯೆ ಕುಸಿದು ಬೀಳುತ್ತಾನೆ. ಹೇಗಿದೆ ನೋಡಿದಿರಾ ಒಂಟಿ ಮಹಿಳೆಯರ ರಕ್ಷಣೆಯ ಅಸ್ತ್ರ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...