Home / ಲೇಖನ / ವಿಜ್ಞಾನ / ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಸಾಮಾನ್ಯವಾಗಿ ಹೊರಗಡೆ ಹೆಣ್ಣುಮಕ್ಕಳು ಸ್ವತಂತ್ರವಾಗಿ ತಿರುಗಾಡುವಾಗ ಪುಂಡಪೋಕರಿಗಳ ಭಯ, ಕಳ್ಳಕಾಕರಭಯ ಇದ್ದೇ ಇರುತ್ತದೆ. ಸ್ವತಂತ್ರ ದೇಶದಲ್ಲಿ ಅತಂತ್ರವಾದ ಈ ಅಬಲೆಯರ ಸ್ಥಿತಿಯನ್ನು ಕಂಡೇ ಅನೇಕ ಕಡೆ ಕರಾಟೆ, ಕುಂಗಫೂಗಳನ್ನು ಕಲಿಸಿ ಇವರಿಂದ ರಕ್ಷಿಸಿಕೊಳ್ಳುವ ವಿಧಾನಗಳನ್ನು ಕಂಡುಕೊಳ್ಳಲಾಯಿತು. ಒಂದಕ್ಕಿಂತಲೂ ಹೆಚ್ಚು ಅಪಾಯಕಾರಿ ಜನ ಒಂಟಿ ಮಹಿಳೆಯ ಮೇಲೆ ಆಕ್ರಮಣ ಮಾಡಿದಾಗ ತನ್ನನ್ನು ರಕ್ಷಿಸಿಕೊಳ್ಳಲು ಒಂದು ಹೊಸ ಅಸ್ತ್ರವನ್ನು ನಮ್ಮ ಬೆಂಗಳೂರಿನವರೇ ಆದ ರಾಣಾಸಿಂಗ್ ಎಂಬುವವರು ಕಂಡು ಹಿಡಿದರು. ತಮ್ಮ ‘ಆಕ್ಸ್‌ಗ್ಲೋಮ್ ’, ಸಂಸ್ಥೆಯಿಂದ ಇಂಥಹ ಅಸ್ತ್ರಗಳು ಈಗಾಗಲೇ ಅಸಂಖ್ಯವಾಗಿ ಸೃಷ್ಟಿಯಾಗುತ್ತವೆ. ಈಗಾಗಲೇ ಅಮೇರಿಕಾದಂತಹ ರಾಷ್ಟ್ರಗಳಲ್ಲಿ ಪ್ರತಿ ಪೋಲಿಸರ ಕೈಯಲ್ಲಿ ಕಳ್ಳರನ್ನು, ವಂಚಕರನ್ನು ಏಕಾಂಗಿಯಾಗಿ ಸದೆಬಡಿಯಲು ಇಂಥಹ ಅಸ್ತ್ರಗಳಿರುತ್ತವೆ. ಇದು ಸೊಂಟಕ್ಕೆ ಸಿಕ್ಕಿಸಿಕೊಳ್ಳಬಹುದಾದಷ್ಟು ಸಣ್ಣದಾದ ಡಬ್ಬಿ, ಕೈಯಲ್ಲಿ ಸುಲಭವಾಗಿ ಹಿಡಿದುಕೊಳ್ಳಬಹುದಾದ ಅಸ್ತ್ರ ಇದಾಗಿದೆ. ಇದನ್ನು ಬಳೆಸಲು ಕಾನೂನು ಸಮ್ಮತಿಯನ್ನು ಕೂಡ ಪಡೆಯಲಾಗಿದೆ. ಹೆಚ್ಚಾಗಿ ಒಂಟಿ ಮಹಿಳೆಯರು, ಕಾಲೇಜು ಹುಡುಗಿಯರಿಗಾಗಿ ಇದನ್ನು ರೂಪಿಸಲಾಗಿದೆ. ಇಂಥಹ ವೈಶಿಷ್ಟ್ಯ ಪೂರ್ಣವಾದ ಅಸ್ತ್ರದ ಹೆಸರು ‘ಕೊಬ್ರಾ’ ಹಾಗಾದರೆ ಈ ಕೊಬ್ರಾದಲ್ಲಿ ಏನಿದೆ? ಇದೊಂದು ಸಣ್ಣಡಬ್ಬಿಯಾಗಿದ್ದು ಖಾರದಪುಡಿಯನ್ನು ಎರಚುವ (ಸ್ಪ್ರೇ ಮಾಡುವ) ಅಸ್ತ್ರ.

ಖಾರದ ಮೆಣಸಿನ ಕಾಯಿಗಾಗಿ ಪ್ರಸಿದ್ಧಿಯಾದ ಆಂಧ್ರಪ್ರದೇಶದಿಂದ ತರಿಸಿದ ಖಾರದಪುಡಿಯನ್ನು ಈ ಉಪಕರಣದಲ್ಲಿ ತುಂಬಲಾಗುತ್ತದೆ. ಅತಿ ಖಾರಕ್ಕೆ ಕಾರಣವಾಗಿರುವ ‘ಓಲಿಯಾರೆಸಿನ್ ಕ್ಯಾಪ್ಲಿಯನಿನ್’, ಎಂಬ ಸಾರವನ್ನು ಇದರಲ್ಲಿ ಸೇರಿಸಲಾಗಿದೆ. ಇಂಥಹ ಸಣ್ಣ ಹಿಡಿದುಕೊಳ್ಳಲು ಅನುವು ಇರುವ ಈ ಸಣ್ಣ ಡಬ್ಬಿಯನ್ನು ಸೊಂಟಕ್ಕೆ ಕಾಣದಂತೆ ಕಟ್ಟಿಕೊಳ್ಳಬಹುದು. ದುಷ್ಟರು ದಾಳಿ ನಡೆಸಿದಾಗ ಅವರ ಮೇಲೆ ಒಂದೇ ಒಂದು ಸಲ ಸ್ಪ್ರೇ ಮಾಡಿದರೆ ಸಾಕು ಆ ದುಷ್ಟರ ಕಣ್ಣುಗಳಲ್ಲಿ ವಿಪರೀತ ಉರಿವುಂಟಾಗುತ್ತದೆ. ಮೂಗು ಮುಖ ಕೂಡ ನೋವಿಗೊಳಗಾಗುತ್ತದೆ. ಆತ ತಕ್ಷಣ ಕುರುಡನಾಗುತ್ತಾನೆ. (ತಾತ್ಕಾಲಿಕವಾಗಿ) ಈ ಉರಿತ ಕನಿಷ್ಟ ಎರಡು ಗಂಟೆಗಳ ಕಾಲ ಈ ಪರಿಣಾಮ ಇರುತ್ತದೆ. ಆಗ ಆ ವ್ಯಕ್ತಿ ನಿಂತನೆಲದಲ್ಲಿಯೆ ಕುಸಿದು ಬೀಳುತ್ತಾನೆ. ಹೇಗಿದೆ ನೋಡಿದಿರಾ ಒಂಟಿ ಮಹಿಳೆಯರ ರಕ್ಷಣೆಯ ಅಸ್ತ್ರ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...