Home / ಲೇಖನ / ವಿಜ್ಞಾನ / ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಸಾಮಾನ್ಯವಾಗಿ ಹೊರಗಡೆ ಹೆಣ್ಣುಮಕ್ಕಳು ಸ್ವತಂತ್ರವಾಗಿ ತಿರುಗಾಡುವಾಗ ಪುಂಡಪೋಕರಿಗಳ ಭಯ, ಕಳ್ಳಕಾಕರಭಯ ಇದ್ದೇ ಇರುತ್ತದೆ. ಸ್ವತಂತ್ರ ದೇಶದಲ್ಲಿ ಅತಂತ್ರವಾದ ಈ ಅಬಲೆಯರ ಸ್ಥಿತಿಯನ್ನು ಕಂಡೇ ಅನೇಕ ಕಡೆ ಕರಾಟೆ, ಕುಂಗಫೂಗಳನ್ನು ಕಲಿಸಿ ಇವರಿಂದ ರಕ್ಷಿಸಿಕೊಳ್ಳುವ ವಿಧಾನಗಳನ್ನು ಕಂಡುಕೊಳ್ಳಲಾಯಿತು. ಒಂದಕ್ಕಿಂತಲೂ ಹೆಚ್ಚು ಅಪಾಯಕಾರಿ ಜನ ಒಂಟಿ ಮಹಿಳೆಯ ಮೇಲೆ ಆಕ್ರಮಣ ಮಾಡಿದಾಗ ತನ್ನನ್ನು ರಕ್ಷಿಸಿಕೊಳ್ಳಲು ಒಂದು ಹೊಸ ಅಸ್ತ್ರವನ್ನು ನಮ್ಮ ಬೆಂಗಳೂರಿನವರೇ ಆದ ರಾಣಾಸಿಂಗ್ ಎಂಬುವವರು ಕಂಡು ಹಿಡಿದರು. ತಮ್ಮ ‘ಆಕ್ಸ್‌ಗ್ಲೋಮ್ ’, ಸಂಸ್ಥೆಯಿಂದ ಇಂಥಹ ಅಸ್ತ್ರಗಳು ಈಗಾಗಲೇ ಅಸಂಖ್ಯವಾಗಿ ಸೃಷ್ಟಿಯಾಗುತ್ತವೆ. ಈಗಾಗಲೇ ಅಮೇರಿಕಾದಂತಹ ರಾಷ್ಟ್ರಗಳಲ್ಲಿ ಪ್ರತಿ ಪೋಲಿಸರ ಕೈಯಲ್ಲಿ ಕಳ್ಳರನ್ನು, ವಂಚಕರನ್ನು ಏಕಾಂಗಿಯಾಗಿ ಸದೆಬಡಿಯಲು ಇಂಥಹ ಅಸ್ತ್ರಗಳಿರುತ್ತವೆ. ಇದು ಸೊಂಟಕ್ಕೆ ಸಿಕ್ಕಿಸಿಕೊಳ್ಳಬಹುದಾದಷ್ಟು ಸಣ್ಣದಾದ ಡಬ್ಬಿ, ಕೈಯಲ್ಲಿ ಸುಲಭವಾಗಿ ಹಿಡಿದುಕೊಳ್ಳಬಹುದಾದ ಅಸ್ತ್ರ ಇದಾಗಿದೆ. ಇದನ್ನು ಬಳೆಸಲು ಕಾನೂನು ಸಮ್ಮತಿಯನ್ನು ಕೂಡ ಪಡೆಯಲಾಗಿದೆ. ಹೆಚ್ಚಾಗಿ ಒಂಟಿ ಮಹಿಳೆಯರು, ಕಾಲೇಜು ಹುಡುಗಿಯರಿಗಾಗಿ ಇದನ್ನು ರೂಪಿಸಲಾಗಿದೆ. ಇಂಥಹ ವೈಶಿಷ್ಟ್ಯ ಪೂರ್ಣವಾದ ಅಸ್ತ್ರದ ಹೆಸರು ‘ಕೊಬ್ರಾ’ ಹಾಗಾದರೆ ಈ ಕೊಬ್ರಾದಲ್ಲಿ ಏನಿದೆ? ಇದೊಂದು ಸಣ್ಣಡಬ್ಬಿಯಾಗಿದ್ದು ಖಾರದಪುಡಿಯನ್ನು ಎರಚುವ (ಸ್ಪ್ರೇ ಮಾಡುವ) ಅಸ್ತ್ರ.

ಖಾರದ ಮೆಣಸಿನ ಕಾಯಿಗಾಗಿ ಪ್ರಸಿದ್ಧಿಯಾದ ಆಂಧ್ರಪ್ರದೇಶದಿಂದ ತರಿಸಿದ ಖಾರದಪುಡಿಯನ್ನು ಈ ಉಪಕರಣದಲ್ಲಿ ತುಂಬಲಾಗುತ್ತದೆ. ಅತಿ ಖಾರಕ್ಕೆ ಕಾರಣವಾಗಿರುವ ‘ಓಲಿಯಾರೆಸಿನ್ ಕ್ಯಾಪ್ಲಿಯನಿನ್’, ಎಂಬ ಸಾರವನ್ನು ಇದರಲ್ಲಿ ಸೇರಿಸಲಾಗಿದೆ. ಇಂಥಹ ಸಣ್ಣ ಹಿಡಿದುಕೊಳ್ಳಲು ಅನುವು ಇರುವ ಈ ಸಣ್ಣ ಡಬ್ಬಿಯನ್ನು ಸೊಂಟಕ್ಕೆ ಕಾಣದಂತೆ ಕಟ್ಟಿಕೊಳ್ಳಬಹುದು. ದುಷ್ಟರು ದಾಳಿ ನಡೆಸಿದಾಗ ಅವರ ಮೇಲೆ ಒಂದೇ ಒಂದು ಸಲ ಸ್ಪ್ರೇ ಮಾಡಿದರೆ ಸಾಕು ಆ ದುಷ್ಟರ ಕಣ್ಣುಗಳಲ್ಲಿ ವಿಪರೀತ ಉರಿವುಂಟಾಗುತ್ತದೆ. ಮೂಗು ಮುಖ ಕೂಡ ನೋವಿಗೊಳಗಾಗುತ್ತದೆ. ಆತ ತಕ್ಷಣ ಕುರುಡನಾಗುತ್ತಾನೆ. (ತಾತ್ಕಾಲಿಕವಾಗಿ) ಈ ಉರಿತ ಕನಿಷ್ಟ ಎರಡು ಗಂಟೆಗಳ ಕಾಲ ಈ ಪರಿಣಾಮ ಇರುತ್ತದೆ. ಆಗ ಆ ವ್ಯಕ್ತಿ ನಿಂತನೆಲದಲ್ಲಿಯೆ ಕುಸಿದು ಬೀಳುತ್ತಾನೆ. ಹೇಗಿದೆ ನೋಡಿದಿರಾ ಒಂಟಿ ಮಹಿಳೆಯರ ರಕ್ಷಣೆಯ ಅಸ್ತ್ರ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...