Home / ಲೇಖನ / ವಿಜ್ಞಾನ / ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಸಾಮಾನ್ಯವಾಗಿ ಹೊರಗಡೆ ಹೆಣ್ಣುಮಕ್ಕಳು ಸ್ವತಂತ್ರವಾಗಿ ತಿರುಗಾಡುವಾಗ ಪುಂಡಪೋಕರಿಗಳ ಭಯ, ಕಳ್ಳಕಾಕರಭಯ ಇದ್ದೇ ಇರುತ್ತದೆ. ಸ್ವತಂತ್ರ ದೇಶದಲ್ಲಿ ಅತಂತ್ರವಾದ ಈ ಅಬಲೆಯರ ಸ್ಥಿತಿಯನ್ನು ಕಂಡೇ ಅನೇಕ ಕಡೆ ಕರಾಟೆ, ಕುಂಗಫೂಗಳನ್ನು ಕಲಿಸಿ ಇವರಿಂದ ರಕ್ಷಿಸಿಕೊಳ್ಳುವ ವಿಧಾನಗಳನ್ನು ಕಂಡುಕೊಳ್ಳಲಾಯಿತು. ಒಂದಕ್ಕಿಂತಲೂ ಹೆಚ್ಚು ಅಪಾಯಕಾರಿ ಜನ ಒಂಟಿ ಮಹಿಳೆಯ ಮೇಲೆ ಆಕ್ರಮಣ ಮಾಡಿದಾಗ ತನ್ನನ್ನು ರಕ್ಷಿಸಿಕೊಳ್ಳಲು ಒಂದು ಹೊಸ ಅಸ್ತ್ರವನ್ನು ನಮ್ಮ ಬೆಂಗಳೂರಿನವರೇ ಆದ ರಾಣಾಸಿಂಗ್ ಎಂಬುವವರು ಕಂಡು ಹಿಡಿದರು. ತಮ್ಮ ‘ಆಕ್ಸ್‌ಗ್ಲೋಮ್ ’, ಸಂಸ್ಥೆಯಿಂದ ಇಂಥಹ ಅಸ್ತ್ರಗಳು ಈಗಾಗಲೇ ಅಸಂಖ್ಯವಾಗಿ ಸೃಷ್ಟಿಯಾಗುತ್ತವೆ. ಈಗಾಗಲೇ ಅಮೇರಿಕಾದಂತಹ ರಾಷ್ಟ್ರಗಳಲ್ಲಿ ಪ್ರತಿ ಪೋಲಿಸರ ಕೈಯಲ್ಲಿ ಕಳ್ಳರನ್ನು, ವಂಚಕರನ್ನು ಏಕಾಂಗಿಯಾಗಿ ಸದೆಬಡಿಯಲು ಇಂಥಹ ಅಸ್ತ್ರಗಳಿರುತ್ತವೆ. ಇದು ಸೊಂಟಕ್ಕೆ ಸಿಕ್ಕಿಸಿಕೊಳ್ಳಬಹುದಾದಷ್ಟು ಸಣ್ಣದಾದ ಡಬ್ಬಿ, ಕೈಯಲ್ಲಿ ಸುಲಭವಾಗಿ ಹಿಡಿದುಕೊಳ್ಳಬಹುದಾದ ಅಸ್ತ್ರ ಇದಾಗಿದೆ. ಇದನ್ನು ಬಳೆಸಲು ಕಾನೂನು ಸಮ್ಮತಿಯನ್ನು ಕೂಡ ಪಡೆಯಲಾಗಿದೆ. ಹೆಚ್ಚಾಗಿ ಒಂಟಿ ಮಹಿಳೆಯರು, ಕಾಲೇಜು ಹುಡುಗಿಯರಿಗಾಗಿ ಇದನ್ನು ರೂಪಿಸಲಾಗಿದೆ. ಇಂಥಹ ವೈಶಿಷ್ಟ್ಯ ಪೂರ್ಣವಾದ ಅಸ್ತ್ರದ ಹೆಸರು ‘ಕೊಬ್ರಾ’ ಹಾಗಾದರೆ ಈ ಕೊಬ್ರಾದಲ್ಲಿ ಏನಿದೆ? ಇದೊಂದು ಸಣ್ಣಡಬ್ಬಿಯಾಗಿದ್ದು ಖಾರದಪುಡಿಯನ್ನು ಎರಚುವ (ಸ್ಪ್ರೇ ಮಾಡುವ) ಅಸ್ತ್ರ.

ಖಾರದ ಮೆಣಸಿನ ಕಾಯಿಗಾಗಿ ಪ್ರಸಿದ್ಧಿಯಾದ ಆಂಧ್ರಪ್ರದೇಶದಿಂದ ತರಿಸಿದ ಖಾರದಪುಡಿಯನ್ನು ಈ ಉಪಕರಣದಲ್ಲಿ ತುಂಬಲಾಗುತ್ತದೆ. ಅತಿ ಖಾರಕ್ಕೆ ಕಾರಣವಾಗಿರುವ ‘ಓಲಿಯಾರೆಸಿನ್ ಕ್ಯಾಪ್ಲಿಯನಿನ್’, ಎಂಬ ಸಾರವನ್ನು ಇದರಲ್ಲಿ ಸೇರಿಸಲಾಗಿದೆ. ಇಂಥಹ ಸಣ್ಣ ಹಿಡಿದುಕೊಳ್ಳಲು ಅನುವು ಇರುವ ಈ ಸಣ್ಣ ಡಬ್ಬಿಯನ್ನು ಸೊಂಟಕ್ಕೆ ಕಾಣದಂತೆ ಕಟ್ಟಿಕೊಳ್ಳಬಹುದು. ದುಷ್ಟರು ದಾಳಿ ನಡೆಸಿದಾಗ ಅವರ ಮೇಲೆ ಒಂದೇ ಒಂದು ಸಲ ಸ್ಪ್ರೇ ಮಾಡಿದರೆ ಸಾಕು ಆ ದುಷ್ಟರ ಕಣ್ಣುಗಳಲ್ಲಿ ವಿಪರೀತ ಉರಿವುಂಟಾಗುತ್ತದೆ. ಮೂಗು ಮುಖ ಕೂಡ ನೋವಿಗೊಳಗಾಗುತ್ತದೆ. ಆತ ತಕ್ಷಣ ಕುರುಡನಾಗುತ್ತಾನೆ. (ತಾತ್ಕಾಲಿಕವಾಗಿ) ಈ ಉರಿತ ಕನಿಷ್ಟ ಎರಡು ಗಂಟೆಗಳ ಕಾಲ ಈ ಪರಿಣಾಮ ಇರುತ್ತದೆ. ಆಗ ಆ ವ್ಯಕ್ತಿ ನಿಂತನೆಲದಲ್ಲಿಯೆ ಕುಸಿದು ಬೀಳುತ್ತಾನೆ. ಹೇಗಿದೆ ನೋಡಿದಿರಾ ಒಂಟಿ ಮಹಿಳೆಯರ ರಕ್ಷಣೆಯ ಅಸ್ತ್ರ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...