Home / ಲೇಖನ / ವಿಜ್ಞಾನ / ರಕ್ತವನ್ನು ಶುದ್ಧಿಕರಿಸುವ ಡೈಯಾಲೈಸರ್

ರಕ್ತವನ್ನು ಶುದ್ಧಿಕರಿಸುವ ಡೈಯಾಲೈಸರ್

(Dialyser!)

ನಮ್ಮ ದೇಹದಲ್ಲಿರುವ ಕೋಶಗಳಲ್ಲಿ ಪ್ರತಿದಿನವೂ ರಕ್ತ ಅಶುದ್ಧಿಯಾಗುತ್ತಲೇ ಇರುತ್ತದೆ. ಏಕಂದರೆ ನಮ್ಮ ದೇಹದ ಕೋಶಗಳಲ್ಲಿ ಮಲೀನ ಪದಾರ್ಥಗಳು ಪ್ರತಿದಿನ ಉತ್ಪತ್ತಿಯಾಗುತ್ತಲೇ ಇರುತ್ತವೆ. ನಮ್ಮ ಮೂತ್ರ ಪಿಂಡಗಳು ಇಂತಹ ಮಲಿನರಕ್ತವನ್ನು ಶುದ್ಧೀಕರಿಸುತ್ತ ಚಲನಶೀಲಗೊಂಡಿರುತ್ತವೆ. ಮುಷ್ಟಿ ಗಾತ್ರದಲ್ಲಿರುವ ಮೂತ್ರ ಪಿಂಡಗಳಲ್ಲಿ ರಕ್ತವು ಹಾಯ್ದು ಹೋಗುತ್ತದೆ. ಮತ್ತು ಅಲ್ಲಿ ರಕ್ತ ಶುದ್ಧಿಗೊಂಡು ದೇಹದಲ್ಲಿ ಪ್ರವಹಿಸುತ್ತಾ ಹೋಗುತ್ತದೆ. ಅಶುದ್ಧ ಅಥವಾ ಮಲಿನ ಪದಾರ್ಥಗಳನ್ನು ಮೂತ್ರಪಿಂಡವು ಮೂತ್ರದ ಮೂಲಕ ಹೊರಗೆಡುತ್ತದೆ. ಈ ಕಾರ್ಯಕ್ಕೆ ‘ಡೈಯಾಲೈಸರ್’ ಎಂದು ಕರೆಯುತ್ತಾರೆ. ಯಾವುದೋ ಕಾರಣದಿಂದ ಈ ಮೂತ್ರ ಪಿಂಡಗಳು ತಮ್ಮ ಕಾರ್ಯವನ್ನು ಸೂಕ್ತ ರೀತಿಯಲ್ಲಿ ಮಾಡದಿದ್ದಾಗ ದೇಹದಲ್ಲಿರುವ ಮಲಿನ ಪದಾರ್ಥಗಳು ರಕ್ತದಲ್ಲಿಯೇ ಸಂಗ್ರಹವಾಗಿ ರಕ್ತವು ವಿಷವಾಗಿ ಸಾವು ಸಂಭವಿಸಬಹುದು.

ಇಂಥಹ ಅಪಾಯಕಾರಿ ಸನ್ನಿವೇಶದಲ್ಲಿ ವಿಜ್ಞಾನವು ಒಂದು ಪ್ರಗತಿದಾಯಕ ಯಂತ್ರವನ್ನು ಕಂಡುಹಿಡಿದಿದೆ. ಮೂತ್ರ ಪಿಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸದಿದ್ದಾಗ ಆ ಕಾರ್ಯವನ್ನು ಈ ಯಂತ್ರವೇ ನೆರವೇರಿಸುತ್ತದೆ, ಇದರ ಹೆಸರು ಡೈಯಾಲೈಸರ್. ರಕ್ತನಾಳದಿಂದ ರಕ್ತವು ಈ ಉಪಕರಣಕ್ಕೆ ಬರುವಂತೆ ಮಾಡಿ ರಕ್ತವನ್ನು ಪರಿಶುದ್ದಗೊಳಿಸಿ ಅದನ್ನು ಅಭಿದಮನಿಗೆ (Vein) ರವಾನಿಸಲಾಗುವುದು. ಈ ಯಂತ್ರ ಮೂತ್ರ ಪಿಂಡದಿಂದ ಕಾರ್ಯ ಮಾಡಿದರೂ ಮೂತ್ರ ಪಿಂಡಕ್ಕೆ ಸಾಟಿಯಾಗಲಾರದು. ಆದರೂ ನೋವಿನಿಂದ ಬಳಲುತ್ತಿರುವ ರೋಗಿಗೆ ತಾತ್ಕಾಲಿಕ ಪರಿಹಾರ ಒದಗಿಸಿ ಅವನ ಸಾವನ್ನು ಮುಂದೂಡುತ್ತದೆ. ಇಂಥಹ ರೋಗಿಗೆ ಪ್ರತಿವಾರ ಎರಡು ಸಲವಾದರೂ ಡಯಾಲಿಸಿಸ್ ಅಗತ್ಯವಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...