Home / ಲೇಖನ / ವಿಜ್ಞಾನ / ರಕ್ತವನ್ನು ಶುದ್ಧಿಕರಿಸುವ ಡೈಯಾಲೈಸರ್

ರಕ್ತವನ್ನು ಶುದ್ಧಿಕರಿಸುವ ಡೈಯಾಲೈಸರ್

(Dialyser!)

ನಮ್ಮ ದೇಹದಲ್ಲಿರುವ ಕೋಶಗಳಲ್ಲಿ ಪ್ರತಿದಿನವೂ ರಕ್ತ ಅಶುದ್ಧಿಯಾಗುತ್ತಲೇ ಇರುತ್ತದೆ. ಏಕಂದರೆ ನಮ್ಮ ದೇಹದ ಕೋಶಗಳಲ್ಲಿ ಮಲೀನ ಪದಾರ್ಥಗಳು ಪ್ರತಿದಿನ ಉತ್ಪತ್ತಿಯಾಗುತ್ತಲೇ ಇರುತ್ತವೆ. ನಮ್ಮ ಮೂತ್ರ ಪಿಂಡಗಳು ಇಂತಹ ಮಲಿನರಕ್ತವನ್ನು ಶುದ್ಧೀಕರಿಸುತ್ತ ಚಲನಶೀಲಗೊಂಡಿರುತ್ತವೆ. ಮುಷ್ಟಿ ಗಾತ್ರದಲ್ಲಿರುವ ಮೂತ್ರ ಪಿಂಡಗಳಲ್ಲಿ ರಕ್ತವು ಹಾಯ್ದು ಹೋಗುತ್ತದೆ. ಮತ್ತು ಅಲ್ಲಿ ರಕ್ತ ಶುದ್ಧಿಗೊಂಡು ದೇಹದಲ್ಲಿ ಪ್ರವಹಿಸುತ್ತಾ ಹೋಗುತ್ತದೆ. ಅಶುದ್ಧ ಅಥವಾ ಮಲಿನ ಪದಾರ್ಥಗಳನ್ನು ಮೂತ್ರಪಿಂಡವು ಮೂತ್ರದ ಮೂಲಕ ಹೊರಗೆಡುತ್ತದೆ. ಈ ಕಾರ್ಯಕ್ಕೆ ‘ಡೈಯಾಲೈಸರ್’ ಎಂದು ಕರೆಯುತ್ತಾರೆ. ಯಾವುದೋ ಕಾರಣದಿಂದ ಈ ಮೂತ್ರ ಪಿಂಡಗಳು ತಮ್ಮ ಕಾರ್ಯವನ್ನು ಸೂಕ್ತ ರೀತಿಯಲ್ಲಿ ಮಾಡದಿದ್ದಾಗ ದೇಹದಲ್ಲಿರುವ ಮಲಿನ ಪದಾರ್ಥಗಳು ರಕ್ತದಲ್ಲಿಯೇ ಸಂಗ್ರಹವಾಗಿ ರಕ್ತವು ವಿಷವಾಗಿ ಸಾವು ಸಂಭವಿಸಬಹುದು.

ಇಂಥಹ ಅಪಾಯಕಾರಿ ಸನ್ನಿವೇಶದಲ್ಲಿ ವಿಜ್ಞಾನವು ಒಂದು ಪ್ರಗತಿದಾಯಕ ಯಂತ್ರವನ್ನು ಕಂಡುಹಿಡಿದಿದೆ. ಮೂತ್ರ ಪಿಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸದಿದ್ದಾಗ ಆ ಕಾರ್ಯವನ್ನು ಈ ಯಂತ್ರವೇ ನೆರವೇರಿಸುತ್ತದೆ, ಇದರ ಹೆಸರು ಡೈಯಾಲೈಸರ್. ರಕ್ತನಾಳದಿಂದ ರಕ್ತವು ಈ ಉಪಕರಣಕ್ಕೆ ಬರುವಂತೆ ಮಾಡಿ ರಕ್ತವನ್ನು ಪರಿಶುದ್ದಗೊಳಿಸಿ ಅದನ್ನು ಅಭಿದಮನಿಗೆ (Vein) ರವಾನಿಸಲಾಗುವುದು. ಈ ಯಂತ್ರ ಮೂತ್ರ ಪಿಂಡದಿಂದ ಕಾರ್ಯ ಮಾಡಿದರೂ ಮೂತ್ರ ಪಿಂಡಕ್ಕೆ ಸಾಟಿಯಾಗಲಾರದು. ಆದರೂ ನೋವಿನಿಂದ ಬಳಲುತ್ತಿರುವ ರೋಗಿಗೆ ತಾತ್ಕಾಲಿಕ ಪರಿಹಾರ ಒದಗಿಸಿ ಅವನ ಸಾವನ್ನು ಮುಂದೂಡುತ್ತದೆ. ಇಂಥಹ ರೋಗಿಗೆ ಪ್ರತಿವಾರ ಎರಡು ಸಲವಾದರೂ ಡಯಾಲಿಸಿಸ್ ಅಗತ್ಯವಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...