ಅಪ್ಪನ ಸೈಕಲ್

 

ಅದು ಈಗಲೂ ಸರಾಗವಾಗಿ ಚಲಿಸುತ್ತದೆ
ಜಲ್ಲಿ ಕಲ್ಲುಗಳ ಉಬ್ಬುತಗ್ಗಿನ ರಸ್ತೆಗಳ ಮೇಲೆ.

ಅವನು ಓಡಾಡಿಸಿದ ಜಾಡನ್ನು ಹಿಡಿಯುವಾಗ
ಅದು ದುಃಖಿಸುವುದನ್ನು ನೀವು ನೋಡಬೇಕು;
ಒಂದು ಗಳಿಗೆ ನೀವೂ ನಕ್ಕು ಅಳದೆ ಇರಲಾರಿರಿ.

ಕಣ್ಣಿಲ್ಲದ ಹೆಳವನೊಬ್ಬ ಮುಗ್ಗರಿಸಿ ಬಿದ್ದಂತೆ
ಗುಂಡಿಗೇ ಹೋಗಿ ಬೀಳುತ್ತದೆ.

ಅವನ ಗೆಳೆಯರು
ಬ್ರಾಂಡಿ, ಗೇರುಹಣ್ಣು, ಸಪೋಟ ಹಣ್ಣಿನ ವಾಸನೆ
ಹೊಡೆಯುವ ಅವೇ ಉಡುಪುಗಳಲ್ಲಿ ದುಡಿಯುತ್ತಿರುವುದನ್ನು
ಕ್ಷಣ ನಿಂತು ನೋಡುತ್ತದೆ.

ತಾನೀಗ ಸಂಪೂರ್ಣ ಬೆತ್ತಲೆ, ಅನಾಥನೆನಿಸಿಕೊಂಡೇನೊ
ಮೂಲೆಗೆ ವಾಲಿಕೊಂಡು ಹಳೆ ಘಟನಾವಳಿಗಳನ್ನು
ತನ್ನ ಮೈಮೇಲೆ ಎಳೆದುಕೊಳ್ಳುತ್ತಿರುತ್ತದೆ ಸಾಯದ ಮುದುಕನಂತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಳ್ಳೇದಲ್ಲ ಇದು ಐಸುರ
Next post ಕೀಲಿ ಕೈ

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…