Home / ಲೇಖನ / ವಿಜ್ಞಾನ / ಹೊಸ ತಳಿಯ ಜಾಮ್! ಜೆಲ್ಲಿ!!

ಹೊಸ ತಳಿಯ ಜಾಮ್! ಜೆಲ್ಲಿ!!

ಹಸಿರು ಸೂರ್ಯಕಾಂತಿ ಹೂಗಳು ಸಂತೃಪ್ತವಾಗಿ ಮತ್ತಷ್ಟು ಪೋಶಕಾಂಶಗಳಿಂದ ಕಂಗೊಳಿಸಲು ಹಸುವಿನ ಹಾಲು, ರಂಗುರಂಗಿನ ಹೂವಿನ ಪಕಳೆಗಳು ನಿಮಗೆ ದೊರೆಯಲು ಇನ್ನೂ ೫೦ ವರ್ಷಗಳಷ್ಟೇ ಸಾಕು. ಆಹಾರ ಸತ್ವ ಸಮೃದ್ಧ ಟೊಮ್ಯಾಟೊ ಹೊಸ ತಳಿ ಈಗಾಗಲೇ ಅಮೇರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಲಿವೆ. ಕೃಷಿ ಉತ್ಪಾದನೆಯ ಶೇ. ೫೦ ರಷ್ಟು ಪದಾರ್ಥಗಳು ಮಾರುಕಟ್ಟೆಯನ್ನು ತಲುಪಲು ಹಾದಿಯಲ್ಲಿಯೇ ಕೊಳೆತು ರೈತರಿಗೆ ನಷ್ಟವನ್ನುಂಟುಮಾಡುತ್ತವೆ. ಕಿರಿದಾಗುತ್ತಿರುವ ಇಂದಿನ ವಿಶ್ವದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ದೂರದೇಶದ ಹಣ್ಣು, ತರಕಾರಿ, ಹಾಲು, ಮೀನುಗಳನ್ನು ಸಾಗಿಸಲು ಇರುವ ಸಮಸ್ಯೆಯನ್ನು ಆ ವಸ್ತು ಕೆಡದಂತೆ ಬಹುಕಾಲ ತಾಳಿಕೆ ಗುಣಗಳನ್ನು ಬೆಳೆಯಲ್ಲಿಯೇ ಸೇರಿಸುವ ಪ್ರಯತ್ನ ನಡೆಯುತ್ತಲಿದೆ. ಮಾರುಕಟ್ಟೆಯಲ್ಲಿಯ ಬೇಡಿಕೆಯನ್ನು ಗಮನಿಸಿ ಹಣ್ಣಾಗಿಸಲು ಇಥಲೀನ್‌ನಂತಹ ಅನಿಲವನ್ನು ಹಾಯಿಸಿ (ಹೂವಿನ ಕಾಯಿ, ಬಾಳೆಕಾಯಿ, ಕಿತ್ತಳೆ) ಕೆಲವು ಬಲಿತ/ ಬಲಿಯದ ಕಾಯಿಗಳನ್ನು ಹಣ್ಣುಮಾಡಲಾಗುತ್ತದೆ. ಇದರ ಪರಿಣಾಮವಾಗಿ ಸಂಪೂರ್ಣ ರುಚಿಯನ್ನು ಬದಲಿಸುವ ಕಾಯಿಗಳು ನೀಡವು. ಈ ಹಣ್ಣುಗಳ ತಳಿಯನ್ನು ಸೂಕ್ತವಾಗಿ ಅಭಿವೃದ್ಧಿಪಡಿಸಲು ವಂಶಾಣುಗಳನ್ನು ಬಳಿಸಿ ಸುದೀರ್ಘಕಾಲ ಇಡಬಹುದು. ಕೊಳೆಯದ ಟೊಮ್ಯಾಟೋ ತಳಿಯನ್ನು ಈಗಾಗಲೇ ಅಮೇರಿಕೆಯ “ಪ್ಲಾದ್ರ್ ಸಾದ್ರ್” ಜೈವಿಕ ತಂತ್ರಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿದೆ. ಈ ಟೊಮ್ಯಾಟೋ ಇತರ ತಳಿಗಳಿಗಿಂತ ಹೆಚ್ಚು ತಾಳಿಕೆ ಮತ್ತು ರುಚಿಯನ್ನು ನಿಧಾನಗೊಳಿಸುತ್ತವೆ. ಯುರೋಪಿನ ಮಾರುಕಟ್ಟೆಯಲ್ಲಿ ಸಾಸ್, ಜಾಮ್ ಜೆಲ್ಲಿ ಮತ್ತು ಕೆಚಪ್‌ಗಳು ಅಟ್ಲಾಂಟಿಕ್ ಸಾಗರವನ್ನು ದಾಟಿ ನೀಡುತ್ತವೆ. ಎಣ್ಣೆಯಲ್ಲಿ ಕರಿದ ‘ಆಲೂ ಚಿಪ್ಸ್‌’ಗಳನ್ನು ನೆನಪಿಸಿಕೊಂಡರೆ ಬಾಯಲ್ಲಿ ನೀರೂರುತ್ತದೆ. ಇವುಗಳನ್ನು ಬಹುಕಾಲ ಕೆಡದಂತೆ ಇಡಬಹುದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...