Home / ಕವನ / ಕವಿತೆ / ಭೂಮಿಗೆ ಆಕಳಿಕೆ ಸಮಯ

ಭೂಮಿಗೆ ಆಕಳಿಕೆ ಸಮಯ

ಸೀರೆ ಸೆರಗ ತಾಗಿದ ಗಾಳಿ
ಪ್ರೇಮದ ನವಿರು ಹೊತ್ತುತಂತು
ಆಡಿದ ಆಡದೇ ಉಳಿದ ಮಾತು
ಮೌನಗಳ ಸಂಕಲನ ಮೋಡಗಳಲ್ಲಿ
ಚಿತ್ರ ಬಿಡಿಸಿತು
ನೀನಿಡುವ ಪ್ರತಿ ಹೆಜ್ಜೆಯಲಿ
ಕನಸು ಇಣುಕುತ್ತಿದೆ ಗೆಳತಿ
ಮನಸುಗಳ ಅಗಣಿತ ತರಂಗಗಳು
ಎದೆತಾಕುತ್ತಲೇ ಇರುವ ಸೋಜಿಗಕ್ಕೆ ಏನೆನ್ನಲಿ ?
***

ನಿನ್ನ ದನಿ ಕೇಳದ ಭೂಮಿಗೆ
ಆಕಳಿಕೆ ಸಮಯ
ಅದಕ್ಕೆ ಮಗ್ಗಲು ಬದಲಿಸುತ್ತಿದೆ
ಮುಗಿಲಿಗೆ ದಿಗಿಲು ಬಡಿದಿದೆ
ಎಲ್ಲಿ ಹೋದೆ ?
ಗೆಜ್ಜೆ ಸದ್ದಿಗೆ ಅರಳುತ್ತಿದ್ದ ಹೂ ಸಹ ಮೌನವಾಗಿದೆ
***

ನಾನು ಸುಳಿದಾಡುವೆ
ಒಬ್ಬಳೇ ಇರುವೆ ಎಂದು ಭಾವಿಸಬೇಡ
ಸುಳಿಯುವ ಗಾಳಿಯಲ್ಲಿ
ಎರಡು ನಿಟ್ಟುಸಿರುಗಳಿವೆ
ಅವು ಪ್ರೇಮದ ಪಲ್ಲವಿಗಳಾಗಿ
ಬದಲಾಗಿ ಬಿಡಲಿ
ಕಣ್ಣಲ್ಲಿ ನಕ್ಷತ್ರಗಳು ಹಾಡಲಿ
ಕಾಲ್ಗೆಜ್ಜೆಗಳಲ್ಲಿ
ಏಳು ಸುತ್ತಿನ ಮಲ್ಲಿಗೆ ಅರಳಲಿ
****

ರುತುಗಳಿಗೆ ತಕ್ಕಂತೆ
ಬಣ್ಣ ರೂಪ ಪಡೆಯುವ ಭೂಮಿ
ಮನಸ್ಸಿನ ಏರಿಳಿತಕ್ಕೆ ತಕ್ಕಂತೆ
ಬಣ್ಣಗಳ ಸೀರೆ ತೊಡುವ ಆಕೆ
ಎಲ್ಲವೂ ಪ್ರಕೃತಿ ಕಲಿಸಿದ ಪಾಠಕ್ಕೆ
ನಿಬ್ಬೆರಗಾಗುವುದು ಮಾತ್ರ ………
****

ನೀನು ನಡೆದರೆ
ಭೂಮಿ ಪಿಸುಗುಡುತ್ತದೆ
ಮಣ್ಣ ಕಣ ಕಣವೂ
ಜೀವಸೆಲೆಯಿಂದ ಪುಟಿದೇಳುತ್ತದೆ
ದಾರಿ ಪಕ್ಕದ ಗಿಡ ಮರಗಳು
ಕಣ್ಣು ಮಿಟುಕಿಸುತ್ತವೆ
ಮುಂಗುರುಳ ಲಾಸ್ಯಕ್ಕೆ
ಗಾಳಿ ರೋಮಾಂಚನಗೊಳ್ಳುತ್ತದೆ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...