Home / ಕವನ / ಕವಿತೆ / ಭೂಮಿಗೆ ಆಕಳಿಕೆ ಸಮಯ

ಭೂಮಿಗೆ ಆಕಳಿಕೆ ಸಮಯ

ಸೀರೆ ಸೆರಗ ತಾಗಿದ ಗಾಳಿ
ಪ್ರೇಮದ ನವಿರು ಹೊತ್ತುತಂತು
ಆಡಿದ ಆಡದೇ ಉಳಿದ ಮಾತು
ಮೌನಗಳ ಸಂಕಲನ ಮೋಡಗಳಲ್ಲಿ
ಚಿತ್ರ ಬಿಡಿಸಿತು
ನೀನಿಡುವ ಪ್ರತಿ ಹೆಜ್ಜೆಯಲಿ
ಕನಸು ಇಣುಕುತ್ತಿದೆ ಗೆಳತಿ
ಮನಸುಗಳ ಅಗಣಿತ ತರಂಗಗಳು
ಎದೆತಾಕುತ್ತಲೇ ಇರುವ ಸೋಜಿಗಕ್ಕೆ ಏನೆನ್ನಲಿ ?
***

ನಿನ್ನ ದನಿ ಕೇಳದ ಭೂಮಿಗೆ
ಆಕಳಿಕೆ ಸಮಯ
ಅದಕ್ಕೆ ಮಗ್ಗಲು ಬದಲಿಸುತ್ತಿದೆ
ಮುಗಿಲಿಗೆ ದಿಗಿಲು ಬಡಿದಿದೆ
ಎಲ್ಲಿ ಹೋದೆ ?
ಗೆಜ್ಜೆ ಸದ್ದಿಗೆ ಅರಳುತ್ತಿದ್ದ ಹೂ ಸಹ ಮೌನವಾಗಿದೆ
***

ನಾನು ಸುಳಿದಾಡುವೆ
ಒಬ್ಬಳೇ ಇರುವೆ ಎಂದು ಭಾವಿಸಬೇಡ
ಸುಳಿಯುವ ಗಾಳಿಯಲ್ಲಿ
ಎರಡು ನಿಟ್ಟುಸಿರುಗಳಿವೆ
ಅವು ಪ್ರೇಮದ ಪಲ್ಲವಿಗಳಾಗಿ
ಬದಲಾಗಿ ಬಿಡಲಿ
ಕಣ್ಣಲ್ಲಿ ನಕ್ಷತ್ರಗಳು ಹಾಡಲಿ
ಕಾಲ್ಗೆಜ್ಜೆಗಳಲ್ಲಿ
ಏಳು ಸುತ್ತಿನ ಮಲ್ಲಿಗೆ ಅರಳಲಿ
****

ರುತುಗಳಿಗೆ ತಕ್ಕಂತೆ
ಬಣ್ಣ ರೂಪ ಪಡೆಯುವ ಭೂಮಿ
ಮನಸ್ಸಿನ ಏರಿಳಿತಕ್ಕೆ ತಕ್ಕಂತೆ
ಬಣ್ಣಗಳ ಸೀರೆ ತೊಡುವ ಆಕೆ
ಎಲ್ಲವೂ ಪ್ರಕೃತಿ ಕಲಿಸಿದ ಪಾಠಕ್ಕೆ
ನಿಬ್ಬೆರಗಾಗುವುದು ಮಾತ್ರ ………
****

ನೀನು ನಡೆದರೆ
ಭೂಮಿ ಪಿಸುಗುಡುತ್ತದೆ
ಮಣ್ಣ ಕಣ ಕಣವೂ
ಜೀವಸೆಲೆಯಿಂದ ಪುಟಿದೇಳುತ್ತದೆ
ದಾರಿ ಪಕ್ಕದ ಗಿಡ ಮರಗಳು
ಕಣ್ಣು ಮಿಟುಕಿಸುತ್ತವೆ
ಮುಂಗುರುಳ ಲಾಸ್ಯಕ್ಕೆ
ಗಾಳಿ ರೋಮಾಂಚನಗೊಳ್ಳುತ್ತದೆ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...