Home / ಕವನ / ಕವಿತೆ / ಭೂಮಿಗೆ ಆಕಳಿಕೆ ಸಮಯ

ಭೂಮಿಗೆ ಆಕಳಿಕೆ ಸಮಯ

ಸೀರೆ ಸೆರಗ ತಾಗಿದ ಗಾಳಿ
ಪ್ರೇಮದ ನವಿರು ಹೊತ್ತುತಂತು
ಆಡಿದ ಆಡದೇ ಉಳಿದ ಮಾತು
ಮೌನಗಳ ಸಂಕಲನ ಮೋಡಗಳಲ್ಲಿ
ಚಿತ್ರ ಬಿಡಿಸಿತು
ನೀನಿಡುವ ಪ್ರತಿ ಹೆಜ್ಜೆಯಲಿ
ಕನಸು ಇಣುಕುತ್ತಿದೆ ಗೆಳತಿ
ಮನಸುಗಳ ಅಗಣಿತ ತರಂಗಗಳು
ಎದೆತಾಕುತ್ತಲೇ ಇರುವ ಸೋಜಿಗಕ್ಕೆ ಏನೆನ್ನಲಿ ?
***

ನಿನ್ನ ದನಿ ಕೇಳದ ಭೂಮಿಗೆ
ಆಕಳಿಕೆ ಸಮಯ
ಅದಕ್ಕೆ ಮಗ್ಗಲು ಬದಲಿಸುತ್ತಿದೆ
ಮುಗಿಲಿಗೆ ದಿಗಿಲು ಬಡಿದಿದೆ
ಎಲ್ಲಿ ಹೋದೆ ?
ಗೆಜ್ಜೆ ಸದ್ದಿಗೆ ಅರಳುತ್ತಿದ್ದ ಹೂ ಸಹ ಮೌನವಾಗಿದೆ
***

ನಾನು ಸುಳಿದಾಡುವೆ
ಒಬ್ಬಳೇ ಇರುವೆ ಎಂದು ಭಾವಿಸಬೇಡ
ಸುಳಿಯುವ ಗಾಳಿಯಲ್ಲಿ
ಎರಡು ನಿಟ್ಟುಸಿರುಗಳಿವೆ
ಅವು ಪ್ರೇಮದ ಪಲ್ಲವಿಗಳಾಗಿ
ಬದಲಾಗಿ ಬಿಡಲಿ
ಕಣ್ಣಲ್ಲಿ ನಕ್ಷತ್ರಗಳು ಹಾಡಲಿ
ಕಾಲ್ಗೆಜ್ಜೆಗಳಲ್ಲಿ
ಏಳು ಸುತ್ತಿನ ಮಲ್ಲಿಗೆ ಅರಳಲಿ
****

ರುತುಗಳಿಗೆ ತಕ್ಕಂತೆ
ಬಣ್ಣ ರೂಪ ಪಡೆಯುವ ಭೂಮಿ
ಮನಸ್ಸಿನ ಏರಿಳಿತಕ್ಕೆ ತಕ್ಕಂತೆ
ಬಣ್ಣಗಳ ಸೀರೆ ತೊಡುವ ಆಕೆ
ಎಲ್ಲವೂ ಪ್ರಕೃತಿ ಕಲಿಸಿದ ಪಾಠಕ್ಕೆ
ನಿಬ್ಬೆರಗಾಗುವುದು ಮಾತ್ರ ………
****

ನೀನು ನಡೆದರೆ
ಭೂಮಿ ಪಿಸುಗುಡುತ್ತದೆ
ಮಣ್ಣ ಕಣ ಕಣವೂ
ಜೀವಸೆಲೆಯಿಂದ ಪುಟಿದೇಳುತ್ತದೆ
ದಾರಿ ಪಕ್ಕದ ಗಿಡ ಮರಗಳು
ಕಣ್ಣು ಮಿಟುಕಿಸುತ್ತವೆ
ಮುಂಗುರುಳ ಲಾಸ್ಯಕ್ಕೆ
ಗಾಳಿ ರೋಮಾಂಚನಗೊಳ್ಳುತ್ತದೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...