Home / ಕವನ / ಕವಿತೆ / ಏಪ್ರಿಲ್ ತಿಂಗಳ ಮೂರು ರಾತ್ರೆಗಳು

ಏಪ್ರಿಲ್ ತಿಂಗಳ ಮೂರು ರಾತ್ರೆಗಳು

ಅವಳು ತನ್ನೆರಡೂ ಸ್ತನಗಳನ್ನು ಮುಚ್ಚಿಕೊಳ್ಳುತ್ತಾ,
ಗಾಳಿಯಲೆಗಳಲ್ಲಿ ನಡೆಯತೊಡಗಿದ್ದಳು.

ಬಟ್ಟೆಯಿದ್ದರೂ ಬೆತ್ತಲೆಯಲ್ಲಿದ್ದೇನೆ ಅಂದುಕೊಂಡವನ
ಹಾಳುಭ್ರಮೆ ಮರದ ಹೂಎಲೆಗಳನ್ನು ಉದುರಿಸುತ್ತಿತ್ತು.

ಉನ್ಮತ್ತ ಉಡುಪಿನ ಅವಳ ನಗೆ-
ಕಿಟಕಿಯ ಮೂಲಕ ಹಾದುಬರುವ ಬಣ್ಣದ ಚಿಟ್ಟೆಗಳನ್ನು,
ಹೆಣದ ವಾಸನೆಯನ್ನು ಹಿಮ್ಮೆಟ್ಟುತ್ತಾ ಅವನನ್ನೇ ಮುಗಿಸುವ
ತವಕದಲ್ಲಿತ್ತು.

ಉನ್ಮಾದ ರಾತ್ರೆಗಳನ್ನು ಶೋಧಿಸಿದ ಗಿಟಾರ್ ವಾದ್ಯ
ಕತ್ತಲಗರ್ಭದಲ್ಲಿ ಕ್ರಿಯಾಶೀಲಗೊಂಡಿದ್ದು,
ಬೆಳಕಿನ ಕಾಲದಲ್ಲಿ ಮದ್ಯ ಹೀರುತ್ತಾ ತನ್ನ ದುರಾಶೆಗಳಲ್ಲಿ
ಮಲಗಿಕೊಂಡಿರುತ್ತಿತ್ತು.

ಇನ್ನಿಲ್ಲದ ಅವಳ ಕರಾಳ ರಾತ್ರೆಗಳು
ಅಸಂಖ್ಯಾತ ಮನುಷ್ಯರು, ಪ್ರಾಣಿ ಪಕ್ಷಿಗಳನ್ನು ಕೊಂದು
ಹಲವಾರು ರಾತ್ರೆಗಳನ್ನೂ ಮುರಿದಿವೆ.

****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...