Home / ಲೇಖನ / ಇತರೆ / ‘ಬೇಕು’ ರಾಕ್ಷಸ

‘ಬೇಕು’ ರಾಕ್ಷಸ

ಪ್ರಿಯ ಸಖಿ,

ಆಸೆಯೇ ದುಃಖಕ್ಕೆ ಮೂಲ ಎಂದ ಗೌತಮ ಬುದ್ಧ. ಹಾಗೆಂದು ಆಸೆಗಳೇ ಇಲ್ಲದ ಸ್ಥಿತಿಗೆ ತಲುಪಿದರೆ ಅದು ಮನುಜಕುಲದ ಅವಸಾನವೇ ಸರಿ. ಮನುಜನ ಉಳಿವಿಗೆ ಆಸೆಯೆಂಬುದು ಇರಲೇಬೇಕು. ಎಲ್ಲವೂ ಬೇಕು ಎನ್ನುವ ಅತಿ ಆಸೆ ಹಾಗೇ ಏನೂ ಬೇಡ ಎಂಬ ನಿರಾಕರಣೆಯ ಮಧ್ಯೆ ಒಂದು ಗೆರೆ ಎಳೆದು ಬದುಕನ್ನು ಸಹ್ಯವಾಗಿಸಿಕೊಂಡಾಗ ಮಾತ್ರ ಮನುಷ್ಯ ಸಂತತಿ ಈ ಭೂಮಿಯಲ್ಲಿ ಕೆಲಕಾಲವಾದರೂ ನೆಮ್ಮದಿಯಿಂದ ಬದುಕುಳಿದೀತು.

ವಿಜ್ಞಾನ-ತಂತ್ರಜ್ಞಾನದ ಹೆಸರಿನಲ್ಲಿ ಮಾನವ ಅನೇಕ ಪ್ರಗತಿಯನ್ನು ಸಾದಿಸಿದ್ದಾನೆ. ಎಲ್ಲವೂ ಬೇಕುಗಳ ಪೂರೈಕೆಗೆ! ತನ್ನ ಪ್ರಚಂಡ ಬುದ್ಧಿ ಶಕ್ತಿ ಯಿಂದ ವಿನಾಶಕಾರಿ ಅಣ್ವಸ್ತ್ರಗಳನ್ನೂ, ರಾಕೆಟ್ಗಳನ್ನೂ ಸಬ್‍ಮೆರಿನ್‍ಗಳು, ರೋಬಾಟ್, ಕಂಪ್ಯೂಟರ್ ಏನೆಲ್ಲಾ ಸೌಲಭ್ಯಗಳನ್ನು ಕಂಡು ಹಿಡಿದಿದ್ದಾನೆ. ನೆಲವನ್ನು ಬಗೆದು ಬೇಕಾದ ಬೇಡದ ಏನೆಲ್ಲ ಖನಿಜ ತನ್ನದಾಗಿಸಿಕೊಂಡಿದ್ದಾನೆ. ರಸಗೊಬ್ಬರ, ಕೀಟನಾಶಕ ಬಳಸಿ ಅಪಾರ ಕೃಷಿ ಉತ್ಪನ್ನಗಳನ್ನು ಬೆಳೆಯುವ ಭರದಲ್ಲಿ ಭೂಮಿ ಬರಡಾಗಿಸುತ್ತಿದ್ದಾನೆ. ತನ್ನ ಸುಖಕ್ಕಾಗಿ ಬೃಹದಾಕಾರದ ಕಟ್ಟಡಗಳು, ಜಲಾಶಯಗಳು ನಿರ್ಮಾಣವಾಗುತ್ತಿದೆ. ಬೆಟ್ಟ, ಗುಡ್ಡ, ಪರ್ವತ, ಕಾಡುಗಳನ್ನು ತುಂಡು ಮಾಡಿ ನಗರಗಳು ಬೆಳೆಯುತ್ತಿವೆ. ಪ್ರಾಕೃತಿಕ ಸಂಪತ್ತೆಲ್ಲಾ ಎಡಬಿಡದೇ ಲೂಟಿಗೊಳ್ಳುತ್ತಿದೆ. ತನ್ನ ಐಷಾರಾಮಿ ಬದುಕಿನ ಕನಸಿನಲ್ಲಿ ಎಲ್ಲವನ್ನೂ ಪಣಕ್ಕಿಟ್ಟು ತನ್ನ ಬೇಕುಗಳನ್ನು ಪೂರೈಸಲು ಹವಣಿಸುತ್ತಿದ್ದಾನೆ. ಈ ದುರಾಸೆಯಲ್ಲಿ ಮುಂದಿನ ಜನಾಂಗಕ್ಕೆ ಬದುಕಲು ಪ್ರಾಕೃತಿಕ ಸೌಲಭ್ಯಗಳನ್ನು ಉಳಿಸಿಡಬೇಕೆಂಬ ವಿವೇಚನೆಯನ್ನೇ ಮಾನವ ಕಳೆದುಕೊಂಡಿದ್ದಾನೆ.

ಪರಿಸರದ ನಿರಂತರ ಶೋಷಣೆಯಿಂದಾಗಿ, ಪ್ರಕೃತಿಯ ಸಮತೋಲನ ತಪ್ಪಿ ಅನೇಕ ವಿಕೋಪಗಳು ಎಚ್ಚರಿಕೆಯ ಗಂಟೆಯಾಗಿ ಬಡಿಯುತ್ತಲೇ ಇವೆ.

ಬೇಕು ರಾಕ್ಷಸನ ದಾಳಿಗೆ ಸಿಕ್ಕು ಹೊರಗಿನ ಪರಿಸರ ನಾಶವಾಗುತ್ತಿದೆ. ಮಾನವನ ಒಳಗೂ ಸ್ವಾರ್ಥ, ಸ್ವಹಿತ, ಅತಿ ಆಸೆ, ದ್ವೇಷ, ಅಸೂಯೆ, ಪೈಪೋಟಿಗಳಿಂದ ತುಂಬಿಕೊಂಡು ನೈತಿಕವಾಗಿ ಕುಸಿಯುತ್ತಿದೆ. ಇಂದು ಮಾನವ ಆಂತರಿಕ ಶ್ರೀಮಂತಿಕೆಗಿಂತ ಬಾಹ್ಯ ಶ್ರೀಮಂತಿಕೆಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿದ್ದಾನೆ. ಹಣವಂತನೇ ಪ್ರತಿಷ್ಠಿತ ಎಂಬ ಕಲ್ಪನೆ ಸಮಾಜದಲ್ಲಿ ಬೇರೂರಿದೆ. ಆ ಹಣವನ್ನು ಯಾವುದೇ ನೀಚ ದಂಧೆಯಿಂದ ಗಳಿಸಿದ್ದರೂ ಅದು ನಗಣ್ಯ. ಅದಕ್ಕೆಂದೇ ಇಂದು ಮಾನವ ಕಷ್ಟಪಡದೇ ಬೆವರು ಹರಿಸದೇ ದಿಢೀರ್ ಶ್ರೀಮಂತನಾಗಬೇಕೆಂದು ಬಯಸುತ್ತಾನೆ. ಕೊಳ್ಳುಬಾಕ ಸಂಸ್ಕೃತಿ ನಿಧಾನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚಿ ನಮ್ಮನ್ನು ನುಂಗುತ್ತಿದೆ.

ಮಾನವನ ದುರಾಸೆ ಹೀಗೇ ಮುಂದುವರಿದರೆ ಭೂಮಿ ಮೇಲೆ ಇಡೀ ಜೀವಿ ಸಂಕುಲವೇ ನಾಶವಾಗುವ ದಿನ ದೂರವಿಲ್ಲ. ಹಾಗಾದರೆ ಈ ಬೇಕು ರಾಕ್ಷಸನ ಹಸಿವನ್ನು ಹಿಂಗಿಸಲು ಸಾಧ್ಯವೇ ಇಲ್ಲವೇ ? ಅವನು ನಮ್ಮನ್ನು ಸರ್ವನಾಶ ಮಾಡುವುದನ್ನು ನೋಡುತ್ತಾ ಕೈ ಕಟ್ಟಿ ಕುಳಿತು ಬಿಡಬೇಕೆ? ಅವನ ಹಸಿವಿನ ಕೊನೆಯ ಗುರಿ, ಕೊನೆಯ ಬಲಿ ನಾವೇ ಆಗಬೇಕೆ? ನಮ್ಮಿಂದ ನಮ್ಮೊಳಗೇ ಹುಟ್ಟಿ ಬೆಳೆದ ಈ ಬೇಕು ರಾಕ್ಷಸನನ್ನು ಹದ್ದುಬಸ್ತಿನಲ್ಲಿಡಲು ನಮ್ಮಿಂದಲೇ ಸಾಧ್ಯವಿಲ್ಲವೇ? ಸರಳ ಜೀವನ ಉನ್ನತ ಚಿಂತನ ಎಂಬ ಆದರ್ಶಕ್ಕೆ ಈ ಬೇಕು ಪ್ರಪಂಚದಲ್ಲಿ ಬೆಲೆಯೇ ಇಲ್ಲವೇ?

ಸಖಿ, ಈ ಕುರಿತು ಪೂರ್ತಿ ಕಾಲಮೀರಿ ಹೋಗುವ ಮೊದಲು ಈಗಲಾದರೂ ಯೋಚಿಸಬೇಕಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...