Home / ಲೇಖನ / ಇತರೆ / ಹೊಸತು

ಹೊಸತು

ಪ್ರಿಯ ಸಖಿ,

ಸದಾ ಕಾಲ ಹೊಸ ಹೊಸದಕ್ಕಾಗಿ ತುಡಿಯುವುದು ಮನುಷ್ಯನ ಸಹಜ ಗುಣ. ‘ಬದಲಾವಣೆ ಬಾಳಿನೊಗ್ಗರಣೆ’ ಎನ್ನುತ್ತದೆ ನಮ್ಮ ನಾಣ್ಣುಡಿ. ಕವಿಗಳೂ ಇದಕ್ಕೆ ಹೊರತಲ್ಲ. ಹಿಂದಿನ ಕವಿಗಳು ಹೇಳಿಬಿಟ್ಟಿದ್ದನ್ನೇ ಮತ್ತೆ ಮತ್ತೆ ಹೇಳುತ್ತಿದ್ದೇನೆ ಎನ್ನಿಸಿದಾಗ ಹೊಸತನಕ್ಕಾಗಿ ಹುಡುಕಾಡುತ್ತಾ ತಳಮಳಿಸುವ ಕವಿಯ ಸ್ಥಿತಿ ಹೇಗಿರುತ್ತದೆ? ಕವಿ ಗೋಪಾಲಕೃಷ್ಣ ಅಡಿಗರು ತಮ್ಮ ‘ನನ್ನ ನುಡಿ’ ಎಂಬ ಕವನದಲ್ಲಿ ಹೀಗೆ ಹೇಳುತ್ತಾರೆ.
ಚಂದ್ರಸೂರ್ಯರ ನೆರವಿನಿಂದೇ ಬೆಳಗುವಳೀ
ವಸುಂಧರೆಗದೆಂದು ಬಹುದೋ ಸ್ವಯಂದೀಪಕತೆ!
ಅವರಿವರ ನುಡಿಗಳನು ಕದ್ದು ಮರುನುಡಿಗೊಡುವ
ದೆಸೆಗಳೇ ನಿಮಗೆಂದು ಬಹುದು ಮೀಸಲು ನಿನದ?
ಭೂಮಿಯ ಅಸ್ತಿತ್ವವಿರುವುದೇ ಚಂದ್ರಸೂರ್ಯರಿಂದ. ಅವರಿಲ್ಲದೇ ಬೆಳಗಬಲ್ಲ ಸ್ವಯಂದೀಪಕತೆ ಭೂಮಿಗೆ ಬರುವುದು ಯಾವಾಗ? ಅವರಿವರು ಉಪಯೋಗಿಸಿ ಬಿಟ್ಟ ಪದಗಳು, ವಸ್ತು, ಶೈಲಿ, ತಂತ್ರಗಳನ್ನೇ ಕದ್ದು ಮತ್ತೆ ತಾನೂ ಅದನ್ನೇ ಹೇಳುವಂತಹಾ ಅವಸ್ಥೆಯಿಂದ ಬಿಡುಗಡೆ ಹೊಂದಿ ತನ್ನದೇ ‘ಸ್ವಂತ’ ಸ್ವರವನ್ನು ಹೊರಡಿಸುವ ಗಳಿಗೆ ಬರುವುದೆಂದು? ಎಂದುಕೊಳ್ಳುತ್ತಾರೆ. ಈ ಸ್ಥಿತಿಯಲ್ಲಿದ್ದು ನೊಂದ ಕವಿ ತಮ್ಮ ಕವನದ ಕೊನೆಯಲ್ಲಿ.
ಅನ್ಯರೊರೆದುದನೆ ಬರೆದುದನೆ ನಾಬರೆಬರೆದು
ಬಿನ್ನಗಾಗಿದೆ ಮನವು; ಬಗೆಯೊಳಗನೇ ತೆರೆದು
ನನ್ನ ನುಡಿಯೊಳೆ ಬಣ್ಣಬಣ್ಣದಲಿ ಬಣ್ಣಿಸುವ
ಪನ್ನತಿಕೆ ಬರುವತನಕ ನನ್ನ ಬಾಳಿದು ನರಕ!
ಎನ್ನುತ್ತಾರೆ. ಬೇರೆಯವರು ಹೇಳಿದ್ದು, ಬರೆದದ್ದೇ ನಾನೂ ಬರೆಬರೆದು ನನ್ನ ಮನಸ್ಸು ಕ್ಷುದ್ರವಾಗಿದೆ. ನನ್ನ ಮನಸ್ಸಿನಾಳಗಳನ್ನು ತೆರೆದು ‘ನನ್ನದೇ ನುಡಿಯಲ್ಲಿ ವಿಭಿನ್ನ ಬಗೆಗಳಲ್ಲಿ ಬಣ್ಣಿಸುವಂತಾ ಎತ್ತರ ದೊರಕುವವರೆಗೆ ನನ್ನ ಬಾಳಿದು ನರಕ! ಎಂದಿದ್ದಾರೆ ಕವಿ.

ಸಖಿ, ಹೊಸತನ್ನು ಹುಡುಕುವುದು, ಹೊಸತನ್ನೇ ಬರೆಯುವುದು ಅದರಲ್ಲಿಯೇ ಸಾಧಿಸುವುಮ, ಹೊಸತನ್ನು ಸಮೂಹ ಒಪ್ಪಿಕೊಳ್ಳುವಂತೆ ಮಾಡುವುಮ ಎಲ್ಲವೂ ಕಷ್ಟವೇ, ಆದರೆ ಹೊಸತಿಗಾಗಿ ಸದಾ ತುಡಿಯುವ ಕವಿಗೆ ಅದಕ್ಕಿಂತಾ ಕಷ್ಟ ಕೊಡುವುದು ಎಂದರೆ ಅವರಿವರು ಹೇಳಿದ್ದನ್ನೇ ಮತ್ತೆ ಮತ್ತೆ ಹೇಳುವುದು! ಬರೆಯುವುದು! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...