Home / ಲೇಖನ / ಇತರೆ / ಎಲ್ಲವೂ ಬೇಕು ನನಗೆ!

ಎಲ್ಲವೂ ಬೇಕು ನನಗೆ!

ಪ್ರಿಯ ಸಖಿ,
ಅದೂ ಬೇಕು ಇದೂ ಬೇಕು
ಎಲ್ಲವೂ ಬೇಕು ನನಗೆ
ದಾರಿ ನೂರಾರಿವೆ ಬೆಳಕಿನರಮನೆಗೆ
ಕವಿ. ಜಿ.ಎಸ್. ಶಿವರುದ್ರಪ್ಪನವರ ‘ಹಿನ್ನುಡಿ’ ಎಂಬ ಕವನದ ಈ ಸಾಲುಗಳನ್ನು ಓದಿರುವೆಯೊ ಸಖಿ? ವ್ಯಕ್ತಿ ನನಗೆ ಇದೇ ಸಾಕು ‘ಇಷ್ಟೇ ಸಾಕು’ ಈ ಸಿದ್ಧಾಂತವೇ ಸರಿ; ತನ್ನ ಧರ್ಮವೇ ‘ಶ್ರೇಷ್ಠ’ ಎಂಬೆಲ್ಲಾ ಮಿತಿಗಳಿಗೆ ಬಿದ್ದಾಗ ಅವನ ಮನಸ್ಸು ಸಂಕುಚಿತಗೊಳ್ಳುತ್ತಾ ಸಾಗುತ್ತದೆ. ಆದ್ದರಿಂದಲೇ ಕವಿ ‘ಅದೂ ಬೇಕು ಇದೂ ಬೇಕು ಎಲ್ಲವೂ ಬೇಕು ನನಗೆ’ ಎನ್ನುತ್ತಾರೆ ಮುಂದುವರೆಯುತ್ತಾ ಹೀಗೆಂದುಕೊಳ್ಳುತ್ತಾರೆ.
ಬೇಡ ನನಗೆ ಸಿದ್ಧಾಂತಗಳ ರಾದ್ಧಾಂತ
ನನಗಿಲ್ಲ ಇದೇ ಸರಿ ಇಷ್ಟೇ ಸರಿ ಎನ್ನುವ ಪಂತ
ನಾ ಬಲ್ಲೆ ಇವು ಎಲ್ಲ ಏರುವೆಯ
ಒಂದೊಂದು ಹಂತ
ಮನಸ್ಸು ವಿಶಾಲವಾದಾಗ ಎಲಾ ತತ್ವ ಸಿದ್ಧಾಂತಗಳಲ್ಲೂ ತನಗೆ ಬೇಕಾದ ಒಳಿತನ್ನು ಹುಡುಕಲಾರಂಭಿಸುತ್ತದೆ. ಬೆಳಕಿನರಮನೆ ಒಂದೇ? ವಿವೇಕ ಮತ್ತು ಜ್ಞಾನದ ಗುರಿ ಒಂದೇ ಆದರೂ ಅದನ್ನು ತಲುಪಲು ನೂರಾರು ದಾರಿಗಳಿವೆ. ಇವುಗಳೆಲ್ಲವೂ ಅರಿವಿನ ಒಂದೊಂದು ಮೆಟ್ಟಿಲುಗಳು. ತನ್ನದೇ ಸರಿ ಎಂಬ ಅಹಂಕಾರದ ಮಿತಿಯನ್ನು ಹಾಕಿಕೊಂಡಾಗ ವ್ಯಕ್ತಿ ಬಾವಿ ಕಪ್ಪೆಯಾಗಿ ಬಿಡುತ್ತಾನೆ. ಆ ಮಿತಿಯೇ ಅವನ ಸೋಲಾಗುತ್ತದೆ ಕವನದ ಕೊನೆಯಲ್ಲಿ ಕವಿ,
ನೂರಾರು ಭಾವದ ಬಾವಿ; ಎತ್ತಿಕೋ
ನಿನಗೆ ಬೇಕಾದಷ್ಟು ಸಿಹಿನೀರ
ಪಾತ್ರೆಯಾಕಾರಗಳ ಕುರಿತು ಏತಕೆ ಜಗಳ
ನಮಗೆ ಬೇಕಾದದ್ದು ದಾಹ ಪರಿಹಾರ!
ಎನ್ನುತ್ತಾರೆ. ಎಂಥಹಾ ಅರ್ಥಪೂರ್ಣ ಮಾತಲ್ಲವೇ ಸಖೀ? ನಮಗೆ ಬೇಕಾಗಿರುವುದು ಸಿಹಿ ನೀರಷ್ಟೆ ! ಆದರೆ ನಾವು ಪಾತ್ರೆಯಾಕಾರಗಳ ಕುರಿತು ವ್ಯರ್ಥ ಜಗಳ ಶುರುವಿಟ್ಟುಕೊಂಡು ಎಷ್ಟೊಂದು ತತ್ವ, ನೀತಿ, ಮೌಲ್ಯ, ಧರ್ಮ, ಗುಣಗಳಿದ್ದೂ ‘ನಮ್ಮದೇ ಸರಿ’ ಎಂಬ ಒಣ ಪ್ರತಿಷ್ಠೆಯನ್ನು ಮುಂದೆ ಮಾಡಿಕೊಂಡು ಒಳತಿರುಳನ್ನು ಬಿಟ್ಟು ಮೇಲಿನ ಕರಟಕ್ಕಾಗಿ ಕಾದಾಡಿ ನಿರ್ವೀರ್ಯರಾಗುತ್ತಿದ್ದೇವೆ. ನಮಗೆ ಬೇಕಾದದ್ದು ದಾಹ ಪರಿಹಾರ. ಅದಕ್ಕೆ ಯಾವಾಗ ಯಾವ ಬಾವಿಯ ಸಿಹಿ ನೀರಾದರೇನು? ಅಲ್ಲವೆ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...