Home / ಲೇಖನ / ಇತರೆ / ಎಲ್ಲವೂ ಬೇಕು ನನಗೆ!

ಎಲ್ಲವೂ ಬೇಕು ನನಗೆ!

ಪ್ರಿಯ ಸಖಿ,
ಅದೂ ಬೇಕು ಇದೂ ಬೇಕು
ಎಲ್ಲವೂ ಬೇಕು ನನಗೆ
ದಾರಿ ನೂರಾರಿವೆ ಬೆಳಕಿನರಮನೆಗೆ
ಕವಿ. ಜಿ.ಎಸ್. ಶಿವರುದ್ರಪ್ಪನವರ ‘ಹಿನ್ನುಡಿ’ ಎಂಬ ಕವನದ ಈ ಸಾಲುಗಳನ್ನು ಓದಿರುವೆಯೊ ಸಖಿ? ವ್ಯಕ್ತಿ ನನಗೆ ಇದೇ ಸಾಕು ‘ಇಷ್ಟೇ ಸಾಕು’ ಈ ಸಿದ್ಧಾಂತವೇ ಸರಿ; ತನ್ನ ಧರ್ಮವೇ ‘ಶ್ರೇಷ್ಠ’ ಎಂಬೆಲ್ಲಾ ಮಿತಿಗಳಿಗೆ ಬಿದ್ದಾಗ ಅವನ ಮನಸ್ಸು ಸಂಕುಚಿತಗೊಳ್ಳುತ್ತಾ ಸಾಗುತ್ತದೆ. ಆದ್ದರಿಂದಲೇ ಕವಿ ‘ಅದೂ ಬೇಕು ಇದೂ ಬೇಕು ಎಲ್ಲವೂ ಬೇಕು ನನಗೆ’ ಎನ್ನುತ್ತಾರೆ ಮುಂದುವರೆಯುತ್ತಾ ಹೀಗೆಂದುಕೊಳ್ಳುತ್ತಾರೆ.
ಬೇಡ ನನಗೆ ಸಿದ್ಧಾಂತಗಳ ರಾದ್ಧಾಂತ
ನನಗಿಲ್ಲ ಇದೇ ಸರಿ ಇಷ್ಟೇ ಸರಿ ಎನ್ನುವ ಪಂತ
ನಾ ಬಲ್ಲೆ ಇವು ಎಲ್ಲ ಏರುವೆಯ
ಒಂದೊಂದು ಹಂತ
ಮನಸ್ಸು ವಿಶಾಲವಾದಾಗ ಎಲಾ ತತ್ವ ಸಿದ್ಧಾಂತಗಳಲ್ಲೂ ತನಗೆ ಬೇಕಾದ ಒಳಿತನ್ನು ಹುಡುಕಲಾರಂಭಿಸುತ್ತದೆ. ಬೆಳಕಿನರಮನೆ ಒಂದೇ? ವಿವೇಕ ಮತ್ತು ಜ್ಞಾನದ ಗುರಿ ಒಂದೇ ಆದರೂ ಅದನ್ನು ತಲುಪಲು ನೂರಾರು ದಾರಿಗಳಿವೆ. ಇವುಗಳೆಲ್ಲವೂ ಅರಿವಿನ ಒಂದೊಂದು ಮೆಟ್ಟಿಲುಗಳು. ತನ್ನದೇ ಸರಿ ಎಂಬ ಅಹಂಕಾರದ ಮಿತಿಯನ್ನು ಹಾಕಿಕೊಂಡಾಗ ವ್ಯಕ್ತಿ ಬಾವಿ ಕಪ್ಪೆಯಾಗಿ ಬಿಡುತ್ತಾನೆ. ಆ ಮಿತಿಯೇ ಅವನ ಸೋಲಾಗುತ್ತದೆ ಕವನದ ಕೊನೆಯಲ್ಲಿ ಕವಿ,
ನೂರಾರು ಭಾವದ ಬಾವಿ; ಎತ್ತಿಕೋ
ನಿನಗೆ ಬೇಕಾದಷ್ಟು ಸಿಹಿನೀರ
ಪಾತ್ರೆಯಾಕಾರಗಳ ಕುರಿತು ಏತಕೆ ಜಗಳ
ನಮಗೆ ಬೇಕಾದದ್ದು ದಾಹ ಪರಿಹಾರ!
ಎನ್ನುತ್ತಾರೆ. ಎಂಥಹಾ ಅರ್ಥಪೂರ್ಣ ಮಾತಲ್ಲವೇ ಸಖೀ? ನಮಗೆ ಬೇಕಾಗಿರುವುದು ಸಿಹಿ ನೀರಷ್ಟೆ ! ಆದರೆ ನಾವು ಪಾತ್ರೆಯಾಕಾರಗಳ ಕುರಿತು ವ್ಯರ್ಥ ಜಗಳ ಶುರುವಿಟ್ಟುಕೊಂಡು ಎಷ್ಟೊಂದು ತತ್ವ, ನೀತಿ, ಮೌಲ್ಯ, ಧರ್ಮ, ಗುಣಗಳಿದ್ದೂ ‘ನಮ್ಮದೇ ಸರಿ’ ಎಂಬ ಒಣ ಪ್ರತಿಷ್ಠೆಯನ್ನು ಮುಂದೆ ಮಾಡಿಕೊಂಡು ಒಳತಿರುಳನ್ನು ಬಿಟ್ಟು ಮೇಲಿನ ಕರಟಕ್ಕಾಗಿ ಕಾದಾಡಿ ನಿರ್ವೀರ್ಯರಾಗುತ್ತಿದ್ದೇವೆ. ನಮಗೆ ಬೇಕಾದದ್ದು ದಾಹ ಪರಿಹಾರ. ಅದಕ್ಕೆ ಯಾವಾಗ ಯಾವ ಬಾವಿಯ ಸಿಹಿ ನೀರಾದರೇನು? ಅಲ್ಲವೆ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...