ಉಪದೇಶ

ಪ್ರಿಯ ಸಖಿ,
ಕೆಲವರಿಗೆ ಸದಾ ಉಪದೇಶ ನೀಡುವ ಖಯಾಲಿ. ಯಾರು ಕೇಳಲಿ ಬಿಡಲಿ ಉಪದೇಶ ನೀಡುವ ಸಂದರ್ಭವಿರಲಿ ಬಿಡಲಿ, ಉಪದೇಶ ಕೇಳುವವನು ಅರ್ಹನಿರಲಿ ಬಿಡಲಿ ಉಪದೇಶಿಸುತ್ತಿರುವುದು ಅಂಥವರ ಹವ್ಯಾಸ. ಇಂತಹ ಚಟವನ್ನು ಕಂಡ ಸರ್ವಜ್ಞ ಹೀಗೆ ಹೇಳುತ್ತಾನೆ.
ಕೇಳುವವರಿದ್ದಿಹರೆ ಹೇಳುವುದು ಬುದ್ಧಿಯನು
ಕೋಳದಲಿ ಬಿದ್ದು ನರಳುವಗೆ ಬುದ್ಧಿಯನು
ಹೇಳಿ ಫಲವೇನು? ಸರ್ವಜ್ಞ!
ಹೌದಲ್ಲವೇ ಸಖಿ? ಕೇಳುವವರಿರುವಾಗ ನಾವು ಕೊಟ್ಟ ಉಪದೇಶಕ್ಕೊಂದು ಬೆಲೆ. ತಾನೇ ಕೋಳದಲಿ ಬಿದ್ದು, ಎಂದರೆ ದೌರ್ಬಲ್ಯ, ಕೆಟ್ಟಗುಣ, ಅಹಂಕಾರದ ಬಂಧನದಲ್ಲಿ ಬಿದ್ದು ನರಳುತ್ತಿರುವವನಿಗೆ ಎಷ್ಟು ಬುದ್ಧಿ ಹೇಳಿದರೆ ಏನು ಪ್ರಯೋಜನ? ನೀಚರಿಗೆ, ಮೂರ್ಖರಿಗೆ ಹೇಳಿದ ಉಪದೇಶದಿಂದ ನಮಗೇ ಕೇಡುಂಟಾಗುತ್ತದೆ ಎನ್ನುತ್ತಾರೆ ಹಿರಿಯರು. ಉಪದೇಶದ ಮಹತ್ವವನ್ನು ಅರಿಯದ ಅವರು ಅದು ತಮ್ಮ ಅಭಿಮಾನಕ್ಕೆ ಬಿದ್ದ ಪೆಟ್ಟೆಂದುಕೊಂಡು ಆ ಮಾತುಗಳಿಂದಲೇ ಹಗೆ ಸಾಧಿಸಲು ಪ್ರಾರಂಭಿಸುತ್ತಾರೆ.

ಅದಕ್ಕೆಂದೇ ಕವಿ ಷೇಕ್ಸ್ಪಿಯರ್ ಹೀಗೆ ಹೇಳುತ್ತಾನೆ. Speak when you are spoken to and come when you are called for ನಿನ್ನೊಂದಿಗೆ ಮಾತನಾಡಿದಾಗ ಮಾತನಾಡು ಮತ್ತು ನಿನ್ನನ್ನು ಕರೆದಾಗ ಮಾತ್ರ ಬಾ ಎಂದು. ಉಪದೇಶವನ್ನು ಅಥವಾ ತಿಳುವಳಿಕೆಯನ್ನು ಕೇಳಿದಾಗಷ್ಟೇ ನೀಡಿದಾಗ ಅದಕ್ಕೊಂದು ಘನತೆ ಬರುತ್ತದೆ. ಅದು ಬಿಟ್ಟು ಸಿಕ್ಕವರಿಗೆಲ್ಲಾ ಉಪದೇಶ ನೀಡಿದರೆ ವ್ಯರ್ಥವಾಗುತ್ತದೆ.

ಅದರೆ ಸಖಿ, ನಾವೇ ಉಪದೇಶವನ್ನು ಕೇಳುವವರಾದರೆ ಸದಾ ನಮ್ಮ ಕಿವಿಗಳನ್ನು ತೆರೆದಿಡೋಣ. ಒಳಿತಾದ ಮಾತು ಎಲ್ಲಿಂದಲೇ, ಯಾರಿಂದಲೇ ಬರಲಿ ಕೇಳೋಣ. ಆದರೆ ನಾವೇ ಉಪದೇಶ ಕೊಡುವವರಾದರೆ ಬಹಳಷ್ಟು ಯೋಚಿಸೋಣ. ಷೇಕ್ಸ್ಪಿಯರ್ ಹೇಳುತ್ತಾನೆ, From hearing comes wisdom, from speaking repentance. ಕೇಳುವುದರಿಂದ ಜಾಣತನ ಬರುತ್ತದೆ, ಮಾತನಾಡುವುದರಿಂದ ಪಶ್ಚಾತ್ತಾಪ
ಪಡಬೇಕಾಗುತ್ತದೆ ಎಂದು ಹೇಳಿ ಕೆಟ್ಟವರಾಗುವುದಕ್ಕಿಂತ ಅಥವಾ ಪಶ್ಚಾತ್ತಾಪ ಪಡುವುದಕ್ಕಿಂತಾ ಒಳ್ಳೆಯ ಕೇಳುಗರಾಗುವುದೇ ಮೇಲಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಣ್ಣು ಮರಗಳ ಮುಡಿಯಲ್ಲಿ
Next post ಒಮ್ಮೊಮ್ಮೆ ಎನಿಸುವುದು

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…