Home / ಲೇಖನ / ಇತರೆ / ಉಪದೇಶ

ಉಪದೇಶ

ಪ್ರಿಯ ಸಖಿ,
ಕೆಲವರಿಗೆ ಸದಾ ಉಪದೇಶ ನೀಡುವ ಖಯಾಲಿ. ಯಾರು ಕೇಳಲಿ ಬಿಡಲಿ ಉಪದೇಶ ನೀಡುವ ಸಂದರ್ಭವಿರಲಿ ಬಿಡಲಿ, ಉಪದೇಶ ಕೇಳುವವನು ಅರ್ಹನಿರಲಿ ಬಿಡಲಿ ಉಪದೇಶಿಸುತ್ತಿರುವುದು ಅಂಥವರ ಹವ್ಯಾಸ. ಇಂತಹ ಚಟವನ್ನು ಕಂಡ ಸರ್ವಜ್ಞ ಹೀಗೆ ಹೇಳುತ್ತಾನೆ.
ಕೇಳುವವರಿದ್ದಿಹರೆ ಹೇಳುವುದು ಬುದ್ಧಿಯನು
ಕೋಳದಲಿ ಬಿದ್ದು ನರಳುವಗೆ ಬುದ್ಧಿಯನು
ಹೇಳಿ ಫಲವೇನು? ಸರ್ವಜ್ಞ!
ಹೌದಲ್ಲವೇ ಸಖಿ? ಕೇಳುವವರಿರುವಾಗ ನಾವು ಕೊಟ್ಟ ಉಪದೇಶಕ್ಕೊಂದು ಬೆಲೆ. ತಾನೇ ಕೋಳದಲಿ ಬಿದ್ದು, ಎಂದರೆ ದೌರ್ಬಲ್ಯ, ಕೆಟ್ಟಗುಣ, ಅಹಂಕಾರದ ಬಂಧನದಲ್ಲಿ ಬಿದ್ದು ನರಳುತ್ತಿರುವವನಿಗೆ ಎಷ್ಟು ಬುದ್ಧಿ ಹೇಳಿದರೆ ಏನು ಪ್ರಯೋಜನ? ನೀಚರಿಗೆ, ಮೂರ್ಖರಿಗೆ ಹೇಳಿದ ಉಪದೇಶದಿಂದ ನಮಗೇ ಕೇಡುಂಟಾಗುತ್ತದೆ ಎನ್ನುತ್ತಾರೆ ಹಿರಿಯರು. ಉಪದೇಶದ ಮಹತ್ವವನ್ನು ಅರಿಯದ ಅವರು ಅದು ತಮ್ಮ ಅಭಿಮಾನಕ್ಕೆ ಬಿದ್ದ ಪೆಟ್ಟೆಂದುಕೊಂಡು ಆ ಮಾತುಗಳಿಂದಲೇ ಹಗೆ ಸಾಧಿಸಲು ಪ್ರಾರಂಭಿಸುತ್ತಾರೆ.

ಅದಕ್ಕೆಂದೇ ಕವಿ ಷೇಕ್ಸ್ಪಿಯರ್ ಹೀಗೆ ಹೇಳುತ್ತಾನೆ. Speak when you are spoken to and come when you are called for ನಿನ್ನೊಂದಿಗೆ ಮಾತನಾಡಿದಾಗ ಮಾತನಾಡು ಮತ್ತು ನಿನ್ನನ್ನು ಕರೆದಾಗ ಮಾತ್ರ ಬಾ ಎಂದು. ಉಪದೇಶವನ್ನು ಅಥವಾ ತಿಳುವಳಿಕೆಯನ್ನು ಕೇಳಿದಾಗಷ್ಟೇ ನೀಡಿದಾಗ ಅದಕ್ಕೊಂದು ಘನತೆ ಬರುತ್ತದೆ. ಅದು ಬಿಟ್ಟು ಸಿಕ್ಕವರಿಗೆಲ್ಲಾ ಉಪದೇಶ ನೀಡಿದರೆ ವ್ಯರ್ಥವಾಗುತ್ತದೆ.

ಅದರೆ ಸಖಿ, ನಾವೇ ಉಪದೇಶವನ್ನು ಕೇಳುವವರಾದರೆ ಸದಾ ನಮ್ಮ ಕಿವಿಗಳನ್ನು ತೆರೆದಿಡೋಣ. ಒಳಿತಾದ ಮಾತು ಎಲ್ಲಿಂದಲೇ, ಯಾರಿಂದಲೇ ಬರಲಿ ಕೇಳೋಣ. ಆದರೆ ನಾವೇ ಉಪದೇಶ ಕೊಡುವವರಾದರೆ ಬಹಳಷ್ಟು ಯೋಚಿಸೋಣ. ಷೇಕ್ಸ್ಪಿಯರ್ ಹೇಳುತ್ತಾನೆ, From hearing comes wisdom, from speaking repentance. ಕೇಳುವುದರಿಂದ ಜಾಣತನ ಬರುತ್ತದೆ, ಮಾತನಾಡುವುದರಿಂದ ಪಶ್ಚಾತ್ತಾಪ
ಪಡಬೇಕಾಗುತ್ತದೆ ಎಂದು ಹೇಳಿ ಕೆಟ್ಟವರಾಗುವುದಕ್ಕಿಂತ ಅಥವಾ ಪಶ್ಚಾತ್ತಾಪ ಪಡುವುದಕ್ಕಿಂತಾ ಒಳ್ಳೆಯ ಕೇಳುಗರಾಗುವುದೇ ಮೇಲಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...