Home / ಲೇಖನ / ಇತರೆ / ಹೊಸ ಹಾಡು

ಹೊಸ ಹಾಡು

ಪ್ರಿಯ ಸಖಿ,Sangeeta
ಗಳಿಗೆ ಗಳಿಗೆಗೂ ಹೊಸ ಹೊಸರೀತಿಗೆ
ಈ ಜಗವೋಡುತಿದೆ
ಹಳತ ನೋಡಿ ತಾ ಕಿಲಕಿಲ ನಗುತಲಿ
ಓ ಜಗವೋಡುತಿದೆ
ಕವಿ ಪುತಿನ ಅವರ ‘ಹೊಸಹಾಡು’ ಕವನದ ಈ ಸಾಲುಗಳನ್ನು ಕೇಳಿದ್ದೀಯಲ್ಲವೇ? ಬದುಕು ನಿಂತ ನೀರಲ್ಲ ಅದು ನಿರಂತರ ಹೊಸತರ ಅನ್ವೇಷಕ.  ರೀತಿನೀತಿಗಳಿಗೆ ಜಗತ್ತು ಒಡ್ಡಿಕೊಳ್ಳುತ್ತಾ ಸಾಗುತ್ತಿದೆ. ಜೊತೆಗೇ ಹಳತೆಲ್ಲವನ್ನೂ ಗೇಲಿಮಾಡಿ ನಗುತ್ತಲೂ ಇರುತ್ತದೆ. ಕವಿ ಇಲ್ಲಿ ಹಾಗಿದ್ದರೆ ಹಳತೆಲ್ಲವೂ ವ್ಯರ್ಥವೇ? ಹೊಸತು ಯಾವುದೇ ಆದರೂ ಸರಿಯೇ? ಅದರ ಪೂರ್ವಪರ ವಿವೇಚಿಸದೇ ಅದನ್ನು ಅಪ್ಪಿಕೊಳ್ಳುವುದು ಸರಿಯೇ? ಎಂದು ಚಿಂತಿಸುತ್ತಾರೆ.

ಹೊಸತರಲ್ಲಿ ಗುಣಾವಗುಣಗಳಿರುವಂತೆ ಹಳತರಲ್ಲಿ ಕೂಡ ಗುಣಾವಗುಣಗಳಿವೆ. ಹೊಸತು-ಹಳತು ಎರಡರ ಧನಾತ್ಮಕ ಗುಣಗಳನ್ನೂ ಹೀರಿಕೊಂಡು ನಡೆದಾಗ ಮಾತ್ರ ಜಗತ್ತು ಪ್ರಗತಿಯನ್ನು ಸಾಧಿಸುತ್ತದೆ. ಷೋಪೆನ್ ಹಾರ್ ಎಂಬ ಚಿಂತಕ ‘ಹೊಸದು ಬರುವುದು. ಯಾವಾಗಲೂ ಹಳೆಯದರ ಆಧಾರದ ಮೇಲೆಯೇ’ ಎನ್ನುತ್ತಾರೆ. ವಿವೇಚನೆಯಿಲ್ಲದೇ, ಹೂಸತೆನ್ನುತ್ತಾ ವಿಜ್ಞಾನ, ತಂತ್ರಜ್ಞಾನದ ಹೆಸರಿನಲ್ಲಿ ಪ್ರಗತಿಯನ್ನು ಸಾಧಿಸಿದ್ದೇನೆಂದುಕೊಳ್ಳುತ್ತಾ ತನ್ನ ವಿನಾಶವನ್ನು ತಾನೇ ತೋಡಿಕೊಂಡರೆ ಅದು ಮೂರ್ಖತನವಲ್ಲವೇ? ಕವನದ ಕೊನೆಯಲಿ ಕವಿ
ಗಳಿಗೆ ಗಳಿಗೆಗೂ ಹೊಸ ಹೊಸ ರೀತಿಗೆ
ಈ ಜಗವೋಡುತಿದೆ
ಪ್ರಗತಿಯ ಹಂತಕೊ?
ಪ್ರಣಯ ದುರಂತಕೋ?
ಎಂದು ಪ್ರಶ್ನಿಸುತ್ತಾರೆ. ಹೊಸತೆಲ್ಲವನ್ನೂ ವಿವೇಚನೆಯಿಲ್ಲದೇ ಒಪ್ಪಿಕೊಂಡು ನಡೆದಾಗ ಅದು ನಮ್ಮನ್ನು ಪ್ರಳಯದ ಅಂಚಿಗೂ ತಂದು ನಿಲ್ಲಿಸಬಹುದಲ್ಲವೇ?

ಪ್ರಿಯ ಸಖಿ, ಹೊಸತೇ ಆಗಲಿ, ಹಳತೇ ಆಗಲಿ ಎಲ್ಲವನ್ನೂ ವಿವೇಚನೆಯ ಮೂಸೆಯಲ್ಲಿ ಬೇಯಿಸಿ ಉತ್ತಮವಾದುದನ್ನು ತೆಗೆದುಕೊಂಡು ಕೆಟ್ಟದನ್ನು ಬಿಟ್ಟಾಗ ಮಾತ್ರ ಪ್ರಗತಿ ಸಾಧ್ಯ. ಕಣ್ಣುಮುಚ್ಚಿ ಎಲ್ಲವನ್ನೂ ಸ್ವೀಕರಿಸಿದಲ್ಲಿ ಖಂಡಿತಾ ಪ್ರಳಯವೇ! ನಮ್ಮ ಕವಿವಾಣಿಯೇ ಹೇಳಿಲ್ಲವೆ? ‘ಹಳೇಬೇರು ಹೊಸ ಚಿಗುರು ಕೂಡಿರಲು ಮರ ಸೊಗಸು’ ಎಂದು ಬರಿಯ ಹಳತಿನಿಂದ ಅಥವಾ ಬರಿಯ ಹೊಸತಿನಿಂದ ವಿನಾಶ ಖಿಂಡಿತಾ ಎರಡರ ಸಮನ್ವಯವೇ ನಿಜವಾದ ಪ್ರಗತಿ ನೀನೇನೆನ್ನುತ್ತಿ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...