ಸಾಧುಗಳಿಗೆ ಶಿವನ ಚಿಂತೆ

ಸಾಧುಗಳಿಗೆ ಶಿವನ ಚಿಂತೆಯು ಅನಂತವು ||ಪ||

ಬೇಧಭಾವವಳಿದು ಮಾಯಾ ಭ್ರಾಂತಿ ಕಳೆದು
ಭವನ ತುಳಿದು ಶಾಂತರೂಪದಿಂದ ಮೆರೆಯುವ ||ಅ.ಪ.||

ದುಡ್ಡು ಹಣವು ಹೆಡ್ಡತನವನು ಜಡದೊತ್ತೆ
ಗುಡ್ಡನೇರಿ ತೋರ್ಪ ಫನವನು
ಅಡ್ಡಬರುವ ಅಖಿಲ ವಿಷಯ
ಜಡ್ಡುಗಳಿದು ಜನನ ಮರಣ
ಕಡ್ಡಿಮುರಿದು ಕರ್ಮ ಹಿಡಿದು
ಮಡ್ಡರಂತೆ ಮಾತನಾಡುವ ||೧||
ತಂದೆ ಶಿಶುನಾಳಧೀಶನ ವಂದಿಸುವ ಗುರುಗೋ-
ವಿಂದರಾಜಾನಂದ ತೋಷನ
ಒಂದೇ ಲಕ್ಷ್ಯವಿಟ್ಟು ಸದಾ
ಬಿಂದುವಸ್ತು ಸವಿದು ಪರಮಾನಂದ ವನದೊಳಗಿರ್ಪ
ಚಂದದಿಂದ ಮಾತನಾಡುವ

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಲ್ಲೀಕೇರಿಗೆ ಹೋಗುನು ಬರ್ತೀರೇನ್ರೇ
Next post ಸಾಧುವಿಗೊಂದಿಸುವೆ ಸತ್ಯದಿ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys