Home / ಲೇಖನ / ಇತರೆ / ನಿಂತ ನೀರ ಕಲಕಬೇಡಿ

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ,
ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ. ಇದನ್ನು ಕಂಡ ಕವಿ ಎನ್. ಎಸ್. ಲಕ್ಷ್ಮೀನಾರಾಯಣಭಟ್ಟರು ತಮ್ಮ ‘ನಿಂತ ನೀರ ಕಲಕಬೇಡಿ” ಎಂಬ ಕವನದಲ್ಲಿ
ನಿಂತ ನೀರ ಕಲಕಬೇಡಿ ಕಲ್ಲುಗಳೇ
ಹೂದಳಗಳ ಇರಿಯಬೇಡಿ ಮುಳ್ಳುಗಳೇ
ಏನಿದೆಯೋ ನೋವು ಅದಕೆ ತಮ್ಮದೇ
ಬಾಳಲು ಬಿಡಿ ತಮ್ಮಷ್ಟಕೆ ಸುಮ್ಮನೇ
ಎನ್ನುತ್ತಾರೆ. ಎಷ್ಟೊಂದು ಮಾರ್ಮಿಕವಾದ ಮಾತಲ್ಲವೇ ಸಖಿ? ಪ್ರತಿಯೊಬ್ಬ ವ್ಯಕ್ತಿಗೂ ಅವನದೇ ಆದ ಖಾಸಗಿ ಬದುಕೊಂದು ಇದ್ದೇ ಇರುತ್ತದೆ. ಅಲ್ಲಿ ನೋವು,
ದುಃಖ, ದುಮ್ಮಾನ, ಹೇಳಲಾಗದ ಅನೇಕ ಭಾವಗಳು ಮಡುಗಟ್ಟಿ ನಿಂತಿರುತ್ತವೆ. ಅದನ್ನು ಕಲಕಲು, ಕೆದಕಲು, ಯಾರಿಗೂ ಅಧಿಕಾರ ಇರುವುದಿಲ್ಲ. ಆದರೆ ಕೆಲವು ಅಧಿಕಪ್ರಸಂಗಿಗಳು ಅನ್ಯರ ಖಾಸಗಿ ಬದುಕಿನಲ್ಲಿ ಮೂಗು ತೂರಿಸಿ ಅವರಿಗೆ ಹಿಂಸೆ ನೀಡಿ ತಾವು ವಿಚಿತ್ರ ಸುಖವನ್ನು ಅನುಭವಿಸುತ್ತಾರೆ. ಕವನದ ಕೊನೆಯಲ್ಲಿ ಇಂತಹವರಿಗೆ ಕವಿ
ಯಾವ ಜೀವ ಯಾವ ನೋವಿಗೀಡೋ
ಯಾವ ಭಾವ ನೆಮ್ಮಿ ಅದರ ಪಾಡೋ
ಮಾಡಲು ಬಿಡಿ ತನ್ನ ಯಾತ್ರೆ ತಾನು
ನೀಡಲು ಬಿಡಿ ತನ್ನೊಳಗಿನ ಜೇನು
ಎಂದು ಹೇಳುತ್ತಾರೆ. ಯಾವ ಜೀವಿಗೆ ಅವನ ಅಂತರಾಳದಲ್ಲಿ ಯಾವ ನೋವಿದೆಯೋ? ಯಾವ ಭಾರ್ವೊತ್ಕರ್ಷದಲ್ಲಿ ಅವನು ಬೇಯುತ್ತಿದ್ದಾನೋ ಅವನ ನೋವನ್ನು ಅವನೇ ಅನುಭವಿಸಬೇಕು. ಅದನ್ನು ಕೆದಕಿ ಮತ್ತಷ್ಟು ನೋವು ಕೊಡುವುದರ ಬದಲು ಅವನು ಏಕಾಂತದಲ್ಲಿ ತಾನೇ ನೋವನನುಭವಿಸಿ ಅದರಲ್ಲೇ ಮಾಗಿ ಪರಿಪಕ್ವವಾಗಿ
ನೋವೆಲ್ಲವ ನುಂಗಿ ಸಿಹಿಯಾದ ಜೇನನ್ನು ಕೊಡುವವರೆಗೂ ಕಾಯೋಣ ಎನ್ನುತ್ತಾರೆ ಕವಿ. ನಿಜಕ್ಕೂ ಇದೇ ಸರಿಯಾದ ಮಾರ್ಗವೂ ಅಲ್ಲವೇ ಸಖಿ?
*****

Tagged:

One Comment

  • ರಾಮಚಂದ್ರ ಕುಲಕರ್ಣಿ.
    Reply

    ಭಾವಗೀತೆಯ ಭಾವ ಅರ್ಥ ತುಂಬಾ ಸೊಗಸಾಗಿದೆ. ಪ್ರತಿಯೊಂದು ಶಬ್ದ ಕೂಡ ಅರ್ಥ ಕೊಡುತ್ತ ಸಾಗುತ್ತೆ. ಹಾಡತ ಇರೋಣ ಅನಿಸುತ್ತೆ. ಲಕ್ಷ್ಮೀನಾರಾಯಣ ಭಟ್ಟರಿಗೆ ಅನಂತ ಧನ್ಯವಾದಗಳು.🙏🙏🙏

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...