Home / ಲೇಖನ / ಇತರೆ / ನಿಂತ ನೀರ ಕಲಕಬೇಡಿ

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ,
ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ. ಇದನ್ನು ಕಂಡ ಕವಿ ಎನ್. ಎಸ್. ಲಕ್ಷ್ಮೀನಾರಾಯಣಭಟ್ಟರು ತಮ್ಮ ‘ನಿಂತ ನೀರ ಕಲಕಬೇಡಿ” ಎಂಬ ಕವನದಲ್ಲಿ
ನಿಂತ ನೀರ ಕಲಕಬೇಡಿ ಕಲ್ಲುಗಳೇ
ಹೂದಳಗಳ ಇರಿಯಬೇಡಿ ಮುಳ್ಳುಗಳೇ
ಏನಿದೆಯೋ ನೋವು ಅದಕೆ ತಮ್ಮದೇ
ಬಾಳಲು ಬಿಡಿ ತಮ್ಮಷ್ಟಕೆ ಸುಮ್ಮನೇ
ಎನ್ನುತ್ತಾರೆ. ಎಷ್ಟೊಂದು ಮಾರ್ಮಿಕವಾದ ಮಾತಲ್ಲವೇ ಸಖಿ? ಪ್ರತಿಯೊಬ್ಬ ವ್ಯಕ್ತಿಗೂ ಅವನದೇ ಆದ ಖಾಸಗಿ ಬದುಕೊಂದು ಇದ್ದೇ ಇರುತ್ತದೆ. ಅಲ್ಲಿ ನೋವು,
ದುಃಖ, ದುಮ್ಮಾನ, ಹೇಳಲಾಗದ ಅನೇಕ ಭಾವಗಳು ಮಡುಗಟ್ಟಿ ನಿಂತಿರುತ್ತವೆ. ಅದನ್ನು ಕಲಕಲು, ಕೆದಕಲು, ಯಾರಿಗೂ ಅಧಿಕಾರ ಇರುವುದಿಲ್ಲ. ಆದರೆ ಕೆಲವು ಅಧಿಕಪ್ರಸಂಗಿಗಳು ಅನ್ಯರ ಖಾಸಗಿ ಬದುಕಿನಲ್ಲಿ ಮೂಗು ತೂರಿಸಿ ಅವರಿಗೆ ಹಿಂಸೆ ನೀಡಿ ತಾವು ವಿಚಿತ್ರ ಸುಖವನ್ನು ಅನುಭವಿಸುತ್ತಾರೆ. ಕವನದ ಕೊನೆಯಲ್ಲಿ ಇಂತಹವರಿಗೆ ಕವಿ
ಯಾವ ಜೀವ ಯಾವ ನೋವಿಗೀಡೋ
ಯಾವ ಭಾವ ನೆಮ್ಮಿ ಅದರ ಪಾಡೋ
ಮಾಡಲು ಬಿಡಿ ತನ್ನ ಯಾತ್ರೆ ತಾನು
ನೀಡಲು ಬಿಡಿ ತನ್ನೊಳಗಿನ ಜೇನು
ಎಂದು ಹೇಳುತ್ತಾರೆ. ಯಾವ ಜೀವಿಗೆ ಅವನ ಅಂತರಾಳದಲ್ಲಿ ಯಾವ ನೋವಿದೆಯೋ? ಯಾವ ಭಾರ್ವೊತ್ಕರ್ಷದಲ್ಲಿ ಅವನು ಬೇಯುತ್ತಿದ್ದಾನೋ ಅವನ ನೋವನ್ನು ಅವನೇ ಅನುಭವಿಸಬೇಕು. ಅದನ್ನು ಕೆದಕಿ ಮತ್ತಷ್ಟು ನೋವು ಕೊಡುವುದರ ಬದಲು ಅವನು ಏಕಾಂತದಲ್ಲಿ ತಾನೇ ನೋವನನುಭವಿಸಿ ಅದರಲ್ಲೇ ಮಾಗಿ ಪರಿಪಕ್ವವಾಗಿ
ನೋವೆಲ್ಲವ ನುಂಗಿ ಸಿಹಿಯಾದ ಜೇನನ್ನು ಕೊಡುವವರೆಗೂ ಕಾಯೋಣ ಎನ್ನುತ್ತಾರೆ ಕವಿ. ನಿಜಕ್ಕೂ ಇದೇ ಸರಿಯಾದ ಮಾರ್ಗವೂ ಅಲ್ಲವೇ ಸಖಿ?
*****

Tagged:

One Comment

  • ರಾಮಚಂದ್ರ ಕುಲಕರ್ಣಿ.
    Reply

    ಭಾವಗೀತೆಯ ಭಾವ ಅರ್ಥ ತುಂಬಾ ಸೊಗಸಾಗಿದೆ. ಪ್ರತಿಯೊಂದು ಶಬ್ದ ಕೂಡ ಅರ್ಥ ಕೊಡುತ್ತ ಸಾಗುತ್ತೆ. ಹಾಡತ ಇರೋಣ ಅನಿಸುತ್ತೆ. ಲಕ್ಷ್ಮೀನಾರಾಯಣ ಭಟ್ಟರಿಗೆ ಅನಂತ ಧನ್ಯವಾದಗಳು.🙏🙏🙏

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...