Home / ಲೇಖನ / ಇತರೆ / ನಿಂತ ನೀರ ಕಲಕಬೇಡಿ

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ,
ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ. ಇದನ್ನು ಕಂಡ ಕವಿ ಎನ್. ಎಸ್. ಲಕ್ಷ್ಮೀನಾರಾಯಣಭಟ್ಟರು ತಮ್ಮ ‘ನಿಂತ ನೀರ ಕಲಕಬೇಡಿ” ಎಂಬ ಕವನದಲ್ಲಿ
ನಿಂತ ನೀರ ಕಲಕಬೇಡಿ ಕಲ್ಲುಗಳೇ
ಹೂದಳಗಳ ಇರಿಯಬೇಡಿ ಮುಳ್ಳುಗಳೇ
ಏನಿದೆಯೋ ನೋವು ಅದಕೆ ತಮ್ಮದೇ
ಬಾಳಲು ಬಿಡಿ ತಮ್ಮಷ್ಟಕೆ ಸುಮ್ಮನೇ
ಎನ್ನುತ್ತಾರೆ. ಎಷ್ಟೊಂದು ಮಾರ್ಮಿಕವಾದ ಮಾತಲ್ಲವೇ ಸಖಿ? ಪ್ರತಿಯೊಬ್ಬ ವ್ಯಕ್ತಿಗೂ ಅವನದೇ ಆದ ಖಾಸಗಿ ಬದುಕೊಂದು ಇದ್ದೇ ಇರುತ್ತದೆ. ಅಲ್ಲಿ ನೋವು,
ದುಃಖ, ದುಮ್ಮಾನ, ಹೇಳಲಾಗದ ಅನೇಕ ಭಾವಗಳು ಮಡುಗಟ್ಟಿ ನಿಂತಿರುತ್ತವೆ. ಅದನ್ನು ಕಲಕಲು, ಕೆದಕಲು, ಯಾರಿಗೂ ಅಧಿಕಾರ ಇರುವುದಿಲ್ಲ. ಆದರೆ ಕೆಲವು ಅಧಿಕಪ್ರಸಂಗಿಗಳು ಅನ್ಯರ ಖಾಸಗಿ ಬದುಕಿನಲ್ಲಿ ಮೂಗು ತೂರಿಸಿ ಅವರಿಗೆ ಹಿಂಸೆ ನೀಡಿ ತಾವು ವಿಚಿತ್ರ ಸುಖವನ್ನು ಅನುಭವಿಸುತ್ತಾರೆ. ಕವನದ ಕೊನೆಯಲ್ಲಿ ಇಂತಹವರಿಗೆ ಕವಿ
ಯಾವ ಜೀವ ಯಾವ ನೋವಿಗೀಡೋ
ಯಾವ ಭಾವ ನೆಮ್ಮಿ ಅದರ ಪಾಡೋ
ಮಾಡಲು ಬಿಡಿ ತನ್ನ ಯಾತ್ರೆ ತಾನು
ನೀಡಲು ಬಿಡಿ ತನ್ನೊಳಗಿನ ಜೇನು
ಎಂದು ಹೇಳುತ್ತಾರೆ. ಯಾವ ಜೀವಿಗೆ ಅವನ ಅಂತರಾಳದಲ್ಲಿ ಯಾವ ನೋವಿದೆಯೋ? ಯಾವ ಭಾರ್ವೊತ್ಕರ್ಷದಲ್ಲಿ ಅವನು ಬೇಯುತ್ತಿದ್ದಾನೋ ಅವನ ನೋವನ್ನು ಅವನೇ ಅನುಭವಿಸಬೇಕು. ಅದನ್ನು ಕೆದಕಿ ಮತ್ತಷ್ಟು ನೋವು ಕೊಡುವುದರ ಬದಲು ಅವನು ಏಕಾಂತದಲ್ಲಿ ತಾನೇ ನೋವನನುಭವಿಸಿ ಅದರಲ್ಲೇ ಮಾಗಿ ಪರಿಪಕ್ವವಾಗಿ
ನೋವೆಲ್ಲವ ನುಂಗಿ ಸಿಹಿಯಾದ ಜೇನನ್ನು ಕೊಡುವವರೆಗೂ ಕಾಯೋಣ ಎನ್ನುತ್ತಾರೆ ಕವಿ. ನಿಜಕ್ಕೂ ಇದೇ ಸರಿಯಾದ ಮಾರ್ಗವೂ ಅಲ್ಲವೇ ಸಖಿ?
*****

Tagged:

One Comment

  • ರಾಮಚಂದ್ರ ಕುಲಕರ್ಣಿ.
    Reply

    ಭಾವಗೀತೆಯ ಭಾವ ಅರ್ಥ ತುಂಬಾ ಸೊಗಸಾಗಿದೆ. ಪ್ರತಿಯೊಂದು ಶಬ್ದ ಕೂಡ ಅರ್ಥ ಕೊಡುತ್ತ ಸಾಗುತ್ತೆ. ಹಾಡತ ಇರೋಣ ಅನಿಸುತ್ತೆ. ಲಕ್ಷ್ಮೀನಾರಾಯಣ ಭಟ್ಟರಿಗೆ ಅನಂತ ಧನ್ಯವಾದಗಳು.🙏🙏🙏

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...