Home / ಲೇಖನ / ಇತರೆ / ನಿಂತ ನೀರ ಕಲಕಬೇಡಿ

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ,
ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ. ಇದನ್ನು ಕಂಡ ಕವಿ ಎನ್. ಎಸ್. ಲಕ್ಷ್ಮೀನಾರಾಯಣಭಟ್ಟರು ತಮ್ಮ ‘ನಿಂತ ನೀರ ಕಲಕಬೇಡಿ” ಎಂಬ ಕವನದಲ್ಲಿ
ನಿಂತ ನೀರ ಕಲಕಬೇಡಿ ಕಲ್ಲುಗಳೇ
ಹೂದಳಗಳ ಇರಿಯಬೇಡಿ ಮುಳ್ಳುಗಳೇ
ಏನಿದೆಯೋ ನೋವು ಅದಕೆ ತಮ್ಮದೇ
ಬಾಳಲು ಬಿಡಿ ತಮ್ಮಷ್ಟಕೆ ಸುಮ್ಮನೇ
ಎನ್ನುತ್ತಾರೆ. ಎಷ್ಟೊಂದು ಮಾರ್ಮಿಕವಾದ ಮಾತಲ್ಲವೇ ಸಖಿ? ಪ್ರತಿಯೊಬ್ಬ ವ್ಯಕ್ತಿಗೂ ಅವನದೇ ಆದ ಖಾಸಗಿ ಬದುಕೊಂದು ಇದ್ದೇ ಇರುತ್ತದೆ. ಅಲ್ಲಿ ನೋವು,
ದುಃಖ, ದುಮ್ಮಾನ, ಹೇಳಲಾಗದ ಅನೇಕ ಭಾವಗಳು ಮಡುಗಟ್ಟಿ ನಿಂತಿರುತ್ತವೆ. ಅದನ್ನು ಕಲಕಲು, ಕೆದಕಲು, ಯಾರಿಗೂ ಅಧಿಕಾರ ಇರುವುದಿಲ್ಲ. ಆದರೆ ಕೆಲವು ಅಧಿಕಪ್ರಸಂಗಿಗಳು ಅನ್ಯರ ಖಾಸಗಿ ಬದುಕಿನಲ್ಲಿ ಮೂಗು ತೂರಿಸಿ ಅವರಿಗೆ ಹಿಂಸೆ ನೀಡಿ ತಾವು ವಿಚಿತ್ರ ಸುಖವನ್ನು ಅನುಭವಿಸುತ್ತಾರೆ. ಕವನದ ಕೊನೆಯಲ್ಲಿ ಇಂತಹವರಿಗೆ ಕವಿ
ಯಾವ ಜೀವ ಯಾವ ನೋವಿಗೀಡೋ
ಯಾವ ಭಾವ ನೆಮ್ಮಿ ಅದರ ಪಾಡೋ
ಮಾಡಲು ಬಿಡಿ ತನ್ನ ಯಾತ್ರೆ ತಾನು
ನೀಡಲು ಬಿಡಿ ತನ್ನೊಳಗಿನ ಜೇನು
ಎಂದು ಹೇಳುತ್ತಾರೆ. ಯಾವ ಜೀವಿಗೆ ಅವನ ಅಂತರಾಳದಲ್ಲಿ ಯಾವ ನೋವಿದೆಯೋ? ಯಾವ ಭಾರ್ವೊತ್ಕರ್ಷದಲ್ಲಿ ಅವನು ಬೇಯುತ್ತಿದ್ದಾನೋ ಅವನ ನೋವನ್ನು ಅವನೇ ಅನುಭವಿಸಬೇಕು. ಅದನ್ನು ಕೆದಕಿ ಮತ್ತಷ್ಟು ನೋವು ಕೊಡುವುದರ ಬದಲು ಅವನು ಏಕಾಂತದಲ್ಲಿ ತಾನೇ ನೋವನನುಭವಿಸಿ ಅದರಲ್ಲೇ ಮಾಗಿ ಪರಿಪಕ್ವವಾಗಿ
ನೋವೆಲ್ಲವ ನುಂಗಿ ಸಿಹಿಯಾದ ಜೇನನ್ನು ಕೊಡುವವರೆಗೂ ಕಾಯೋಣ ಎನ್ನುತ್ತಾರೆ ಕವಿ. ನಿಜಕ್ಕೂ ಇದೇ ಸರಿಯಾದ ಮಾರ್ಗವೂ ಅಲ್ಲವೇ ಸಖಿ?
*****

Tagged:

One Comment

  • ರಾಮಚಂದ್ರ ಕುಲಕರ್ಣಿ.
    Reply

    ಭಾವಗೀತೆಯ ಭಾವ ಅರ್ಥ ತುಂಬಾ ಸೊಗಸಾಗಿದೆ. ಪ್ರತಿಯೊಂದು ಶಬ್ದ ಕೂಡ ಅರ್ಥ ಕೊಡುತ್ತ ಸಾಗುತ್ತೆ. ಹಾಡತ ಇರೋಣ ಅನಿಸುತ್ತೆ. ಲಕ್ಷ್ಮೀನಾರಾಯಣ ಭಟ್ಟರಿಗೆ ಅನಂತ ಧನ್ಯವಾದಗಳು.🙏🙏🙏

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...